Updated News From Kaup
ಪಡುಬಿದ್ರಿ : ಕಾಂಗ್ರೆಸ್ ಪಕ್ಷದ ವತಿಯಿಂದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ
Posted On: 21 Aug 2024, 05:31 PM
ಪಡುಬಿದ್ರಿ : ಪಡುಬಿದ್ರಿ - ಕಾರ್ಕಳ ರಸ್ತೆಯಲ್ಲಿ ಕಂಚಿನಡ್ಕ ಪ್ರದೇಶದಲ್ಲಿ ರಾಜ್ಯ ಸರಕಾರ ನಿರ್ಮಾಣ ಮಾಡಲು ಉದ್ದೇಶಿಸಿದ ಸುಂಕ ವಸೂಲಾತಿ ಕೇಂದ್ರದ ವಿರುದ್ಧ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ ಜರಗಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪಡುಬಿದ್ರಿ-ಕಾರ್ಕಳ ರಸ್ತೆಯ ಟೋಲ್ ಗೇಟ್ ಬಿಜೆಪಿ ಸರಕಾರ ಇರುವಾಗ ರೂಪಿತವಾದ ಯೋಜನೆಯಾಗಿದೆ. ಬೆಳ್ಮಣ್ ಭಾಗದಲ್ಲಿಯ ಪ್ರತಿಭಟನೆ ನಂತರ ಕಂಚಿನಡ್ಕ ಪ್ರದೇಶದಲ್ಲಿ ಟೋಲ್ ಗೇಟ್ ಸ್ಥಾಪನೆಗೆ ಬಿಜೆಪಿ ಸರಕಾರವೇ ಕಾರಣವಾಗಿದೆ. ಇಲ್ಲಿ ಕಾಂಗ್ರೆಸ್ ಪಕ್ಷದ ಯಾವ ಪಾತ್ರವೂ ಇಲ್ಲ. ಮೊದಲೇ ಟೋಲ್ ಆಗಬೇಕೆನ್ನುವ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣ ಮಾಡಿ, ಇದೀಗ ಟೋಲ್ ಗೇಟ್ ನಿರ್ಮಾಣಕ್ಕೂ ಮುಂದಾಗಿರುವುದು ಬಿಜೆಪಿ. ಎನ್ಟಿಪಿಸಿ, ಕೊಜೆಂಟ್ರಿಕ್ಸ್ ಗಳನ್ನು ಪ್ರತಿಭಟನೆಯ ಮೂಲಕ ಒದ್ದೋಡಿಸಿ ಈ ಭಾಗದಲ್ಲಿ ಅನೇಕ ಪ್ರತಿಭಟನೆಗಳಾಗಿದೆ. ಯಾವುದೇ ಕಾರಣಕ್ಕೂ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ. ಉಡುಪಿ ಉಸ್ತುವಾರಿ ಸಚಿವರ ಜೊತೆಗೂಡಿ ನಮ್ಮ ನಿಯೋಗವು ಆಗಸ್ಟ್ 22ರಂದು ಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಲಿದ್ದೇವೆ ಎಂದರು. ಉಡುಪಿ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಶೇಖರ ಹೆಜ್ಮಾಡಿ, ಡಾ. ದೇವೀಪ್ರಸಾದ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಶೇಖರ ಹೆಜ್ಮಾಡಿ, ಡಾ. ದೇವೀಪ್ರಸಾದ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ನವೀನ್ ಚಂದ್ರ ಸುವರ್ಣ, ಸಂತೋಷ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೈ ಸುಕುಮಾರ್, ಕರುಣಾಕರ ಪೂಜಾರಿ ಪಡುಬಿದ್ರಿ, ನವೀನ್ ಚಂದ್ರ ಜೆ. ಶೆಟ್ಟಿ, ನವೀನ್ ಎನ್ ಶೆಟ್ಟಿ, ಹರೀಶ್ ಕಿಣಿ ಅಲೆವೂರು, ಶಿವಾಜಿ ಸುವರ್ಣ, ಶರ್ಪುದ್ದೀನ್ ಶೇಖ್, ರಮೀಜ್ ಹುಸೇನ್ ಪಡುಬಿದ್ರಿ, ನಿಯಾಜ್ ಹುಸೈನ್ ಮುದರಂಗಡಿ, ದೀಪಕ್ ಎರ್ಮಾಳು, ಗುಲಾಂ ಅಹ್ಮದ್, ಆಶಾ ಕಟಪಾಡಿ, ಸುಲೋಚನಾ ಬಂಗೇರಾ, ತಸ್ನೀನ್ ಅರಾ, ಜ್ಯೋತಿ ಮೆನನ್, ಮೊದಲಾದವರು ಉಪಸ್ಥಿತರಿದ್ದರು.
ಕಾಪು ವಲಯ ಕುಲಾಲ ಸಂಘದ ಮಹಿಳಾ ಘಟಕದ ನೂತನ ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ
Posted On: 21 Aug 2024, 05:06 PM
ಕಾಪು : ಕುಲಾಲ ಸಂಘ (ರಿ.) ಕಾಪು ವಲಯ ಇದರ 2024 - 2026ರ ಅವಧಿಗೆ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಸುಮಲತಾ ಶೇಖರ್ ಇನ್ನoಜೆ ಮತ್ತು ನೂತನ ಕಾರ್ಯದರ್ಶಿಯಾಗಿ ಸುಜಾತ ಹರೀಶ್ ಕುಲಾಲ್ ಕಳತ್ತೂರು ಆಯ್ಕೆಯಾಗಿರುತ್ತಾರೆ. ಜೊತೆ ಕಾರ್ಯದರ್ಶಿಯಾಗಿ ವಿನೋದ ರಾಜೇಶ್ ಕುಲಾಲ್ ಬಂಡ ಶಾಲೆ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಕುಲಾಲ್, ಮಹಿಳಾ ಸಮಿತಿ ನಿರ್ದೇಶಕರಾಗಿ ಗೀತಾ ಕುಲಾಲ್ ಮತ್ತು ಸುಜಾತ ಕುಲಾಲ್ ಪಾದೆಬೆಟ್ಟು ಇವರನ್ನು ಕುಲಾಲ ಸಂಘ ಕಾಪು ವಲಯ ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿಯೋಜಿತ ಪದಾಧಿಕಾರಿಗಳ ಸಮಕ್ಷಮದಲ್ಲಿ ಆಯ್ಕೆ ಮಾಡಲಾಯಿತು.
ಆಗಸ್ಟ್ 22 : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಿಕೇಶ್ ಶರ್ಮ ಶಂಕರಪುರ ಭೇಟಿ
Posted On: 21 Aug 2024, 04:56 PM
ಕಟಪಾಡಿ : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ JFS C.R. ರಿಕೇಶ್ ಶರ್ಮ ಆಗಸ್ಟ್ 22 ರಂದು ಸಂಜೆ 7 ಗಂಟೆಗೆ ಜೆಸಿಐ ಶಂಕರಪುರ ಜಾಸ್ಮಿನ್ ಘಟಕಕ್ಕೆ ಆಗಮಿಸಲಿದ್ದಾರೆ. ಬಹು ಘಟಕ ಸಮಾವೇಶದಲ್ಲಿ ಪಾಲ್ಗೊಂಡು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೆಸಿಐ ಶಂಕರಪುರ ಜಾಸ್ಮಿನ್ ಇದರ ಅಧ್ಯಕ್ಷರಾದ ಜೆಸಿ ಹರೀಶ್ ಪೂಜಾರಿ ಇನ್ನಂಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಚ್ಚಿಲ ರೋಟರಿ ಕ್ಲಬ್ : ಡೆಂಗ್ಯು, ಮಲೇರಿಯಾ ಜಾಗೃತಿ ಕಾರ್ಯಕ್ರಮ ; ಕರಪತ್ರ ಹಂಚಿಕೆ
Posted On: 20 Aug 2024, 05:44 PM
ಉಚ್ಚಿಲ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಉಚ್ಚಿಲದ ಸರಸ್ವತಿ ಮಂದಿರ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಡೆಂಗ್ಯು ಮತ್ತು ಮಲೇರಿಯಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಕರಪತ್ರಗಳನ್ನು ಹಂಚಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಚ್ಚಿಲ ರೋಟರಿ ಅಧ್ಯಕ್ಷರಾದ ಇಬಾದುಲ್ಲ ರಫೀಕ್ ಅಹಮದ್ ವಹಿಸಿದ್ದರು. ಈ ಸಂದರ್ಭ ರೋಟರಿ ಸಂಸ್ಥೆಯ ಸತೀಶ್ ಕುಂಡಂತಾಯ, ಅಚ್ಯುತ ಶೆಣೈ, ಚಂದ್ರಹಾಸ ಪೂಜಾರಿ, ನಜ್ಮ, ಮುಖ್ಯ ಶಿಕ್ಷಕ ಸದಾಶಿವ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಿಮಾ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಉಡುಪಿ : ರಾಜ್ಯಮಟ್ಟದ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ
Posted On: 20 Aug 2024, 10:45 AM
ಉಡುಪಿ : ಕಲಿಮಾ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಬೆಂಗಳೂರಿನ ಬಿ. ಬಿ.ಎಂ. ಪಿ ಮೈದಾನ ಜಯಂತಿನಗರ ಹೊರಮಾವು ಎಂಬಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಬ್ರಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕ ಡಿ, ಕೆ ಗೋಪಾಲ್ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಲಿಮಾ ಫೌಂಡೇಶನ್ ಹಾಗೂ ಚಾರಿಟೇಬಲ್ ಅಧ್ಯಕ್ಷರು ಡಾ.ತಿಗ್ಬತ್ ಉಲ್ಲಾ ಶರೀಫ್ ರವರರು ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಅಧ್ಯಕ್ಷರಾದ ಮಹಾಲಕ್ಷ್ಮಿ,ಕೃಷ್ಣ ಮೂರ್ತಿ, ಡಾ.ಪಿ, ಕೆ ಶ್ರೀ ವಾಸ್ತವ್, ಡಾ.ಅಖಿಲ್ ಮನೋಜ್, ಡಾ. ಅಂಜನಾ ಕೆ. ವಿ, ಡಾ.ಅಜ್ಮ್ ಅನ್ಸರ್, ಡಾ.ನಮೀರಾ ಶೈಕ್, ಡಾ.ದರ್ಶನ್, ಟ್ರಸ್ಟ್ ನ ಬೆಂಗಳೂರು ಸಂಯೋಜಕರಾದ ದಿವ್ಯ ಸರಸ್ವತಿ, ಹಾಗೂ ಚೆನ್ನಮ್ಮ, ಟ್ರಸ್ಟ್ ನ ಸದಸ್ಯರಾದ ನಾಗೇಂದ್ರ ಶಾನುಬಾಗ್, ರವಿಕಿರಣ್, ಸಿಂದ್ಯಾ ಡಿಸೋಜ,, ಹಸೀನಾ ಫರ್ ಹಾನ ಹಾಗೂ ಹೊರ ಮಾವು ಅರೋಗ್ಯ ಇಲಾಖೆಯ ಅಧಿಕಾರಿ ಉಪಸ್ಥಿತರಿದ್ದರು. ಸುಮಾರು 450 ಜನರು ಶಿಬಿರದ ಸದುಪಯೋಗ ಪಡೆದುಕೊಂಡರು. ಡಾ.ವಿಜಯ್ ಕುಮಾರ್ ಹಳ್ಳಿರವರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ದಿವಾಕರ ಡಿ. ಶೆಟ್ಟಿ ಕಳತ್ತೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾಪು ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
Posted On: 20 Aug 2024, 10:37 AM
ಕಾಪು : ತಾಲೂಕು ಆಡಳಿತ ವತಿಯಿಂದ ಮಂಗಳವಾರ ಕಾಪು ತಾಲೂಕು ಆಡಳಿತ ಸೌಧದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸಲಾಯಿತು. ಪತ್ರಕರ್ತ ರಾಕೇಶ್ ಕುಂಜೂರು ನಾರಾಯಣ ಗುರುಗಳ ಕುರುತಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ತಹಶೀಲ್ದಾರ್ ಡಾ.ಪ್ರತಿಭಾ ಆರ್., ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕಿನ ವಿವಿಧ ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಮುದರಂಗಡಿ : ಋಗುಪಾಕರ್ಮ ಯಜ್ಞೋಪವೀತ ಧಾರಣೆ
Posted On: 20 Aug 2024, 10:28 AM
ಮುದರಂಗಡಿ : ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಮುದರಂಗಡಿ ಇದರ ಆಶ್ರಯದಲ್ಲಿ ಸೋಮವಾರ ಜರುಗಿದ ಶ್ರಾವಣ ಪೌರ್ಣಮಿ ಋಗುಪಾಕರ್ಮ ಯಜ್ಞೋಪವೀತ ಧಾರಣೆ ಧಾರ್ಮಿಕ ಅನುಷ್ಠಾನಗಳನ್ನು ಶ್ರೀಕ್ಷೇತ್ರ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಳದ ವೈದಿಕರಾದ ವೇ.ಮೂ.ಶ್ರೀಕಾಂತ್ ಭಟ್ ನೆರವೇರಿಸಿದರು. ಸಂಘದ ಅಧ್ಯಕ್ಷ ವೈ.ಉಪೇಂದ್ರ ಪ್ರಭು, ಕಾರ್ಯದರ್ಶಿ ದೇವದಾಸ್ ಪಾಟ್ಕರ್, ಕೋಶಾಧಿಕಾರಿ ಕೇಶವ ನಾಯಕ್, ಸದಸ್ಯರು ಹಾಗೂ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಮುಂಡಾಲ ಯುವ ವೇದಿಕೆ ಮತ್ತು ಮಹಾದೇಶ್ವರ ಭಜನಾ ಮಂಡಳಿಯಿಂದ ರಕ್ಷಾಬಂಧನ ಕಾರ್ಯಕ್ರಮ
Posted On: 19 Aug 2024, 11:55 PM
ಪಡುಬಿದ್ರಿ : ಮುಂಡಾಲ ಯುವ ವೇದಿಕೆ (ರಿ.) ಪಡುಬಿದ್ರಿ ಮತ್ತು ಪಲಿಮಾರಿನ ಶ್ರೀ ಮಹಾದೇಶ್ವರ ಭಜನಾ ಮಂಡಳಿಯ ಸಹಯೋಗದಲ್ಲಿ ಸೋಮವಾರ ಶ್ರಾವಣ ಮಾಸದ ಹುಣ್ಣಿಮೆಯ ರಕ್ಷಾಬಂಧನ ಕಾರ್ಯಕ್ರಮ ದೀಪ ಪ್ರಜ್ವಲಿಸಿ ಭಜನಾ ಸಂಕೀರ್ತನೆಯೊಂದಿಗೆ ಆರಂಭದೊಂದಿಗೆ ಪರಸ್ಪರ ರಕ್ಷಾಬಂಧನ ಕಟ್ಟಿ ಆಶೀರ್ವಾದಿಸಲಾಯಿತು. ಮಹಾದೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಸುಧಾಕರ ಕೆ. ಕಾರ್ಯಕ್ರಮಕ್ಕೆ ಶುಭಹಾರೈಸಿದರು. ರಕ್ಷಾಬಂಧನದ ಮಹತ್ವ ಮತ್ತು ಮುಂಡಾಲ ವೇದಿಕೆಯ ಹಿನ್ನಲೆ ಹಾಗೂ ಭವಿಷ್ಯದ ಸಂಘಟನೆಯ ಬಗ್ಗೆ ಸಂತೋಷ್ ನಂಬಿಯಾರ್ ಸವಿಸ್ತಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಪ್ಪ ಸಾಲ್ಯಾನ್ ವಹಿಸಿದ್ದರು. ಈ ಸಂಧರ್ಭದಲ್ಲಿ ಮಹಿಳಾ ಮಂಡಳಿಯ ಪುಷ್ಪ, ಸವಿತಾ, ಪ್ರಮುಖರಾದ ಭಾಸ್ಕರ್ ಪಲಿಮಾರು, ಶ್ರೀಧರ್ ಪಲಿಮಾರು, ಮಂಜುನಾಥ ಎರ್ಮಾಳು ಮೊದಲಾದವರು ಉಪಸ್ಥಿತರಿದ್ದರು. ಪ್ರಸನ್ನ ಪಡುಬಿದ್ರಿ ಪ್ರಾಸ್ತಾವನೆಗೈದರು. ಕಾರ್ಯದರ್ಶಿ ಸುರೇಶ್ ಪಡುಬಿದ್ರಿ ನಿರೂಪಿಸಿದರು.
ಹೆಜಮಾಡಿ : ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ
Posted On: 19 Aug 2024, 09:22 PM
ಹೆಜಮಾಡಿ : ಏಳೂರು ಮೊಗವೀರ ಮಹಾಸಭಾ ವತಿಯಿಂದ ಹೆಜಮಾಡಿ ಮೊಗವೀರ ಸಭಾದ ಆಯೋಜನೆಯಲ್ಲಿ ಸೋಮವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಹಾಲು, ಸೀಯಾಳ, ತೆಂಗಿನಕಾಯಿಯನ್ನು ಸಮರ್ಪಣೆ ಮಾಡಲಾಯಿತು. ಏಳು ಗ್ರಾಮಗಳ ಮೊಗವೀರ ಸಭಾದ ವತಿಯಿಂದ ಹೆಜಮಾಡಿಯ ವೀರ ಮಾರುತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಜನೆಯ ಮೂಲಕ ಹೂವು, ಹಣ್ಣು, ಹಾಲನ್ನು ಹೆಜಮಾಡಿಯ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು. ಸಮುದ್ರ ಕಿನಾರೆಯಲ್ಲಿ ಸಾಮೂಹಿಕ ಪ್ರಾರ್ಥನೆ, ಪೂಜೆ ಸಲ್ಲಿಸಿದ ಬಳಿಕ ಸಮುದ್ರಕ್ಕೆ ಹೂ, ಹಣ್ಣು, ತೆಂಗಿನಕಾಯಿ ಹಾಗೂ ಹಾಲನ್ನು ಸಮರ್ಪಿಸಲಾಯಿತು. ಈ ಸಂದರ್ಭ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಏಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ದಿವಾಕರ ಹೆಜಮಾಡಿ, ಕಾರ್ಯದರ್ಶಿ ಬಾಲಕೃಷ್ಣ ಸುವರ್ಣ, ಮಾಜಿ ಅಧ್ಯಕ್ಷರು ಗಳಾದ ಸದಾಶಿವ ಕೋಟ್ಯಾನ್, ವಿಜಯ ಕೋಟ್ಯಾನ್, ಎಚ್ ರವಿ ಕುಂದರ್, ಏಳು ಗ್ರಾಮಗಳ ಗುರಿಕಾರರು, ಅಧ್ಯಕ್ಷರು, ಸಮಿತಿ ಸದಸ್ಯರು, ಮಹಿಳಾ ಮಂಡಳಿಗಳ ಸದಸ್ಯೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ : ವಿಶ್ವ ಛಾಯಾಗ್ರಹಣ ದಿನಾಚರಣೆ
Posted On: 19 Aug 2024, 07:32 PM
ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ - ಉಡುಪಿ ಜಿಲ್ಲೆ ಇದರ ಕಾಪು ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸೋಮವಾರ ಕೆ1 ಹೋಟೆಲ್ ನ ಸಭಾಭವನದಲ್ಲಿ ಆಚರಿಸಲಾಯಿತು. ಸನ್ಮಾನ : ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಉಚ್ಚಿಲ ಮತ್ತು ಛಾಯಾಗ್ರಾಹಕ ಪ್ರಭಾಕರ ದೇವಾಡಿಗರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಬಾಲಕೃಷ್ಣ ಪೂಜಾರಿ ಉಚ್ಚಿಲ, ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರ ಪರಿಸ್ಥಿತಿ ಕಠಿಣವಾಗಿದ್ದು, ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವ ಅನಿವಾರ್ಯತೆಯಿದೆ. ಛಾಯಾಗ್ರಾಹಕರು ಛಾಯಾಗ್ರಹಣವನ್ನು ನಂಬಿ ಬದುಕುವ ಜೊತೆಗೆ ಸಹ ಉದ್ಯೋಗದ ಬಗ್ಗೆ ಚಿಂತಿಸಿ ಆರ್ಥಿಕ ಸದೃಢತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದರು. ಛಾಯಾಗ್ರಾಹಕ ಪ್ರಭಾಕರ ದೇವಾಡಿಗ ಮಾತನಾಡಿ, ಕಪ್ಪು ಬಿಳುಪಿನ ಕಾಲದಿಂದ ಕಲರ್ ಫುಲ್ ಯುಗದವರೆಗೂ ಫೋಟೋಗ್ರಫಿಗೆ ಮಾನ್ಯತೆಯಿದೆ. ತಾಳ್ಮೆಯ ವೃತ್ತಿ ಇದಾಗಿದೆ. ಇಂದು ಅಸಂಖ್ಯಾತ ಕಿರಿಯ ಛಾಯಾಗ್ರಾಹಕರು ಛಾಯಾಗ್ರಹಣ ಕ್ಷೇತ್ರಕ್ಕೆ ಬರುತ್ತಿರುವುದು ಸಂತಸದ ಸಂಗತಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ವಹಿಸಿದ್ದರು. ಈ ಸಂದರ್ಭ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೃಷ್ಣ ರಾವ್, ಕಾಪು ವಲಯದ ಉಪಾಧ್ಯಕ್ಷರುಗಳಾದ ಸಂತೋಷ್ ಕಾಪು ಮತ್ತು ಸತೀಶ್ ಎರ್ಮಾಳು, ಕಾಪು ವಲಯದ ಕಾರ್ಯದರ್ಶಿ ರಾಘವೇಂದ್ರ ಭಟ್, ಕೋಶಾಧಿಕಾರಿ ಕಿರಣ್ ಕಾಪು, ಕಾಪು ವಲಯದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಉದಯ ಕುಮಾರ್ ಮತ್ತು ರಾಘವೇಂದ್ರ ಭಟ್ ಸನ್ಮಾನ ಪತ್ರ ವಾಚಿಸಿದರು. ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಸ್ವಾಗತಿಸಿದರು. ಉದಯ ಕುಮಾರ್ ನಿರೂಪಿಸಿದರು. ರಾಘವೇಂದ್ರ ಭಟ್ ವಂದಿಸಿದರು.
