Updated News From Kaup

ಪಡುಬಿದ್ರಿ ರೋಟರಿ ಕ್ಲಬ್ ಗೆ 11 ಜಿಲ್ಲಾ ಪ್ರಶಸ್ತಿಗಳು

Thumbnail
Posted On: 24 Aug 2024, 10:58 PM

ಶಿವಮೊಗ್ಗ : ಇಲ್ಲಿನ ಕೂಸ್ಮ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ‌ ರೋಟರಿ ಕ್ಲಬ್ ಇದರ 2023-24 ರ ಸಾಲಿನ ಪ್ರಗತಿ ಜಿಲ್ಲಾ ಅರ್ವಾಡ್ ನೃೆಟ್ ಕಾರ್ಯಕ್ರಮದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಗೆ 11 ಜಿಲ್ಲಾ ಪ್ರಶಸ್ತಿ ಲಭಿಸಿದೆ. ನಿಯೋಜಿತ ಜಿಲ್ಲಾ ಗರ್ವನರ್ ಬಿ.ಎಮ್ ಭಟ್, ನಿಕಟ ಪೂರ್ವ ಜಿಲ್ಲಾ ಗರ್ವನರ್ ಬಿ.ಸಿ ಗೀತಾ, ಜಿಲ್ಲಾ ಕಾರ್ಯದರ್ಶಿ ಡಾ. ಪ್ರೀತಿ ಮೋಹನ್, ಅವಾರ್ಡ್ ಚೇರ್ಮನ್ ಡಾ. ಜಯ ಗೌರಿ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಪೂರ್ವ ಸಹಾಯಕ ಗರ್ವನರ್ ಗಳಾದ ಶೃೆಲೇಂದ್ರ ರಾವ್, ವೃೆ. ಸುಧೀರ್ ಕುಮಾರ್, ಪೂರ್ವ ಅಧ್ಯಕ್ಷರಾದ ಪಿ. ಕೃಷ್ಣ ಬಂಗೇರ, ಗೀತಾ ಅರುಣ್, ಗಣೇಶ್ ಆಚಾರ್ಯ ಎರ್ಮಾಳು, ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ನಿಕಟ ಪೂರ್ವ ಕಾರ್ಯದರ್ಶಿ ಪವನ್ ಸಾಲ್ಯಾನ್, ಕಾರ್ಯದರ್ಶಿ ಹೇಮಲತಾ ಸುವರ್ಣ, ಸದಸ್ಯರಾದ ಶೋಭಾ ಚಂದ್ರಶೇಖರ್, ಆರತಿ ಘೋರೃೆ ಉಪಸ್ಥಿತರಿದ್ದರು.

ಪಡುಬಿದ್ರಿ : ಕಂಚಿನಡ್ಕ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ ; ಸಾವಿರಾರು ಮಂದಿ ಭಾಗಿ

Thumbnail
Posted On: 24 Aug 2024, 06:38 PM

ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ರಾಜ್ಯ ಸರಕಾರ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರಸ್ತಾವಿತ ಕಂಚಿನಡ್ಕದ ಟೋಲ್‌ ಪ್ರದೇಶದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್‌ ರವರ ಮೂಲಕವಾಗಿ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, ತಾತ್ಕಾಲಿಕ ತಡೆ ಸ್ವಾಗತಾರ್ಹ. ಕಂಚಿನಡ್ಕದ ಟೋಲ್ ಗೇಟ್ ವಿರೋಧಿ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಈ ಯೋಜನೆ ಸಂಪೂರ್ಣ ರದ್ದುಗೊಳ್ಳುವ ತನಕ ಹೋರಾಟ ಮುಂದುವರಿಯಲಿದೆ. ರಾಜ್ಯ ಸರಕಾರ ಕೂಡಲೇ ಸಂಪೂರ್ಣ ರದ್ಧು ಪಡಿಸಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು. ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಾಗಲೇ ಲೋಕೋಪಯೋಗಿ ಇಲಾಖಾ ಸಚಿವರು ತಾತ್ಕಾಲಿಕ ರದ್ದು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಆದೇಶ ಶಾಶ್ವತ ರದ್ದಾಗಬೇಕು ಎಂದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಮುದರಂಗಡಿ ಚರ್ಚ್ ನ ಧರ್ಮಗುರು ರೆ. ಫಾ. ಫೆಡ್ರಿಕ್ ಡಿ ಸೋಜ, ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ‌ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಲಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ‌ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್ ವರೆಗೆ ಜಾಥಾ ನಡೆಯಿತು. ಪೋಲಿಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ಜೆಸಿಐ ಶಂಕರಪುರ ಜಾಸ್ಮಿನ್ : ಬಹು ಘಟಕ ಸಮಾವೇಶ

Thumbnail
Posted On: 23 Aug 2024, 08:24 PM

ಶಿರ್ವ : ಜೆಸಿಐ ರಾಷ್ಟ್ರೀಯ ಅಧ್ಯಕ್ಷರ ಬಹು ಘಟಕ ಸಮಾವೇಶವು ಜೇಸಿಐ ಶಂಕರಪುರ ಜಾಸ್ಮಿನ್ ಆಥಿತ್ಯದಲ್ಲಿ ಶಂಕರಪುರ ಜೇಸಿ ಭವನದಲ್ಲಿ ನಡೆಯಿತು. ಜೇಸಿ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ ಎಫ್ ಎಸ್ ರೆಕೇಶ್ ಶರ್ಮ ಇವರನ್ನು ಸನ್ಮಾನಿಸಲಾಯಿತು. ಈ‌ ಸಂದರ್ಭ ಮಾತನಾಡಿದ ಅವರು, ಯುವ ಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಸಮಾಜದ ಮುಂಚೂಣಿಯ ನಾಯಕರನ್ನಾಗಿಸುವಲ್ಲಿ ಜೇಸಿ ಸಂಸ್ಥೆಯು ಸಕ್ರಿಯವಾಗಿ ಶ್ರಮಿಸುತ್ತಿದ್ದು, ಈ ಸಂಸ್ಥೆಯಿಂದ ಮೂಡಿ ಬಂದ ಹಲವಾರು ಮಂದಿ ಇಂದು ಸಮಾಜದ ಮುಂಚೂಣಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು. ಜಾಸ್ಮಿನ್ ಜೇಸಿಯ ಅಧ್ಯಕ್ಷರಾದ ಜೇಸಿ ಹರೀಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿಐ ಸೆನೆಟರ್ ಕಾರ್ತಿಕೇಯ ಮಧ್ಯಸ್ಥ, ವಲಯ ಅಧ್ಯಕ್ಷರಾದ ಜೆಸಿಐ ಸೆನೆಟರ್ ಅಡ್ವೊಕೇಟ್ ಗಿರೀಶ್ ಎಸ್ ಪಿ, ವಲಯ ಆಡಳಿತ ಮಂಡಳಿಯ ಸದಸ್ಯರು, ವಲಯ ಹದಿನೈದರ ಘಟಕ ಅಧ್ಯಕ್ಷರುಗಳು, ಶಂಕರಪುರ ಜಾಸ್ಮಿನ್ ಪೂರ್ವಧ್ಯಕ್ಷರು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ಜೇಸಿ ನವೀನ್ ಅಮೀನ್ ವಂದಿಸಿದರು.

ಪಡುಬಿದ್ರಿ : ಕಂಚಿನಡ್ಕ ಟೋಲ್ ತಡೆ ಆದೇಶ - ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Thumbnail
Posted On: 23 Aug 2024, 08:13 PM

ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಟೋಲ್ ಗೇಟ್ ಗೆ ಸರಕಾರದಿಂದ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶುಕ್ರವಾರ ಸಂಜೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಿಸಲಾಯಿತು. ಕಳೆದ ಬುಧವಾರ ಪಡುಬಿದ್ರಿಯ ಕಂಚಿನಡ್ಕದಲ್ಲಿ ಟೋಲ್ ರದ್ಧತಿ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಆಯೋಜನೆಯಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಗುರುವಾರ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗ ಲೋಕೋಪಯೋಗಿ ಸಚಿವ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಟೋಲ್ ರದ್ದತಿಗೆ ಮನವಿ ಸಲ್ಲಿಸಿ ಇಲ್ಲಿಯ ವಸ್ತುಸ್ಥಿತಿಯನ್ನು ಸಚಿವರಿಗೆ ಮನವರಿಕೆ ಮಾಡಿದ್ದರು. ಅದರಂತೆ ಶುಕ್ರವಾರ ಲೋಕೋಪಯೋಗಿ ಸಚಿವರು ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಬಗ್ಗೆ ಆದೇಶ ಹೊರಡಿಸಿದ್ದು ಕಾಂಗ್ರೆಸ್ ನಿಯೋಗಕ್ಕೆ ಮೊದಲ ಹಂತದಲ್ಲಿ ಜಯ ಸಿಕ್ಕಿದಂತಾಗಿದೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಗೀತಾ ವಾಗ್ಳೆ, ಶಾಂತಲತಾ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ, ನವೀನ್ ಎನ್ ಶೆಟ್ಟಿ, ಶೇಖರ್ ಹೆಜಮಾಡಿ, ರಮೀಝ್ ಹುಸೇನ್, ಶರ್ಫುದ್ದೀನ್ ಶೇಖ್, ಅಝೀಝ್ ಕಣ್ಣಂಗಾರು, ವೈ ಸುಕುಮಾರ್, ಕರುಣಾಕರ ಪೂಜಾರಿ, ಅಶೋಕ್ ಸಾಲ್ಯಾನ್, ದೀಪಕ್ ಎರ್ಮಾಳು, ದಿವಾಕರ ಶೆಟ್ಟಿ, ವಿಶ್ವಾಸ್ ಅಮೀನ್, ಜ್ಯೋತಿ ಮೆನನ್, ಅಶೋಕ್ ನಾಯರಿ, ವೈ ಸುಧೀರ್ ಕುಮಾರ್, ಸುನಿಲ್ ಬಂಗೇರ, ಶಫಿ ಪಡುಬಿದ್ರಿ, ರಾಜೇಶ್ ಶೇರಿಗಾರ್, ಸಂತೋಷ್ ಪಡುಬಿದ್ರಿ, ಕೀರ್ತಿ ಪಡುಬಿದ್ರಿ, ಫಾರೂಕ್ ಚಂದ್ರನಗರ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಮಲಂಕಾರು ಪ್ರಕಾಶ್ ಶೆಟ್ಟಿ ನಿಧನ

Thumbnail
Posted On: 23 Aug 2024, 05:11 PM

ಕಾಪು : ತಾಲೂಕಿನ ಮಂಡೇಡಿ ಮುಕ್ಕಾಲಿ ಕುಟುಂಬಸ್ಥರಾದ ಮಲಂಕಾರು ಪ್ರಕಾಶ್ ಶೆಟ್ಟಿಯವರು ಶುಕ್ರವಾರ ನಿಧಾನರಾದರು.

ಪಡುಬಿದ್ರಿ : ಕಂಚಿನಡ್ಕ ಟೋಲಿಗೆ ತಾತ್ಕಾಲಿಕ ತಡೆ ಆದೇಶ

Thumbnail
Posted On: 23 Aug 2024, 05:07 PM

ಪಡುಬಿದ್ರಿ : ಕಂಚನಡ್ಕದಲ್ಲಿ ಟೋಲ್ ಗೇಟ್ ರದ್ದು ಮಾಡಬೇಕೆಂದು ಆಗ್ರಹಿಸಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಿದ್ದು, ಶುಕ್ರವಾರ ಕಾಂಗ್ರೆಸ್ ನಿಯೋಗ ಬೆಂಗಳೂರಿಗೆ ತೆರಳಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು, ಟೋಲ್ ರದ್ಧತಿ ಬಗ್ಗೆ ಸಚಿವರ ಗಮನಸೆಳೆದಿದ್ದು ಆ ಪ್ರಯುಕ್ತ ಕಂಚಿನಡ್ಕ ಟೋಲ್‌ಗೇಟ್‌ ತಾತ್ಕಾಲಿಕ ರದ್ಧತಿಯ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ, ಪಡುಬಿದ್ರಿ- ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಪ್ರದೇಶದಲ್ಲಿ ಉದ್ದೇಶಿಸಿರುವಂತಹ  ಸುಂಕ ವಸೂಲಾತಿ ಕೇಂದ್ರದಿಂದ ಉದ್ಭವಿಸಿರುವಂತಹ ಸಮಸ್ಯೆಗಳು, ಕಂಚಿನಡ್ಕ ಪ್ರದೇಶವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಾಹನ ದಟ್ಟಣೆ ಇರುವ ರಸ್ತೆಯನ್ನು ಹೊಂದಿದ್ದು, ಈವರೆಗೂ ಡಿವೈಡರ್‌ಗಳ ನಿರ್ಮಾಣವಾಗಲಿ, ಸರ್ವಿಸ್ ರಸ್ತೆ, ಶೌಚಾಲಯ ನಿರ್ಮಾಣ, ವಿಶ್ರಾಂತಿ ಗೃಹವಾಗಲಿ ನಿರ್ಮಾಣವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಮುಂದುವರೆದಂತೆ, ಈಗಾಗಲೇ ಪಡುಬಿದ್ರಿ ಜಂಕ್ಷನ್‌ನಿಂದ ರಾಜ್ಯ ಹೆದ್ದಾರಿ-66 ರಲ್ಲಿನ ಪಡುಬಿದ್ರಿ ಜಂಕ್ಷನ್‌ನಿಂದ ಮಂಗಳೂರು ಕಡೆಗೆ 5 ಕಿ.ಮೀ. ನಲ್ಲಿರುವ ಹೆಜಮಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಟೋಲ್ ನಿರ್ಮಿಸಿ ಶುಲ್ಕ ಸಂಗ್ರಹಣೆ ಮಾಡಲಾಗುತ್ತಿದ್ದು, ಉದ್ದೇಶಿತ ಕಂಚಿನಡ್ಕ ಪ್ರದೇಶವು ಕೇವಲ 7.50 ಕಿ.ಮೀ. ದೂರದಲ್ಲಿರುವುದರಿಂದ, ಈ ಟೋಲ್ ಪ್ಲಾಜಾ ನಿರ್ಮಾಣ ಕಾರ್ಯವು ಆತುರದ ನಿರ್ಧಾರವಾಗಿರುವುದಲ್ಲದೇ, ಪ್ರತಿನಿತ್ಯ ಈ ರಸ್ತೆಯನ್ನೆ ಅವಲಿಂಬಿಸಿರುವ, ಸದರಿ ರಸ್ತೆಯಲ್ಲಿ ಓಡಾಡುವಂತಹ ಸುತ್ತಮುತ್ತಲಿನ ಗ್ರಾಮಸ್ಥರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಕಾರ್ಮಿಕರು, ಕ್ಯಾಬ್ ಮತ್ತು ಆಟೋ ಚಾಲಕರುಗಳು ಎರಡು ಬಾರಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಇದರಿಂದ ಆರ್ಥಿಕವಾಗಿ ತೊಂದರೆಗೊಳಗಾಗುತ್ತಾರೆಂದು ಸಭೆಯಲ್ಲಿದ್ದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿ, ಸುಂಕ ವಸೂಲಾತಿ ಕೇಂದ್ರವನ್ನು ರದ್ದುಪಡಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ ಇಲಾಖೆಯ ಈ ಕ್ರಮದ ಬಗ್ಗೆ ಆಗಸ್ಟ್ 24, ಶನಿವಾರದಂದು ಸ್ಥಳೀಯ ಹೋರಾಟ ಸಮಿತಿಗಳೊಂದಿಗೆ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು, ಪ್ರತಿಭಟನಾ ಸಭೆಯನ್ನೂ  ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ. ಈ ವಿಷಯವು ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಸೂಕ್ಷ್ಮತೆಯಿಂದ ಕೂಡಿರುವುದರಿಂದ, ಮೇಲ್ಕಂಡಂತೆ ಕಂಚಿನಡ್ಕ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲು ಉದ್ದೇಶಿಸಿರುವ ಸುಂಕ ವಸೂಲಾತಿ ಕೇಂದ್ರದ ಬಗ್ಗೆ ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವರೆಗೆ ಸದರಿ ಸಂಸ್ಥೆಗೆ ನೀಡಲಾಗಿರುವ ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು, ಕಂಚಿನಡ್ಕ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಮನೆಗೆ ಧಾಳಿ ತಪ್ಪು : ಡೇವಿಡ್ ಡಿಸೋಜ ಮುದರಂಗಡಿ

Thumbnail
Posted On: 22 Aug 2024, 07:03 PM

ಮುದರಂಗಡಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಮನೆ ಮೇಲಿನ ಧಾಳಿಗೆ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ‌‌ ಅಧ್ಯಕ್ಷ, ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಡೇವಿಡ್ ಡಿಸೋಜ ಪ್ರಿನ್ಸ್ ಪಾಯಿಂಟ್ ‌ರವರು‌ ಖೇದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಯ ‌ಹಕ್ಕು ಸಹಜ ಆದರೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣವು ಅತ್ಯಂತ ಹೇಯ ಕೃತ್ಯವಾಗಿದೆ. ಈ ಕೃತ್ಯದ ಹಿಂದಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ‌ ಸೂಕ್ತ ವಿಚಾರಣೆ ನಡೆಸಿ‌ ಕ್ರಮ ಕೈಗೊಳ್ಳುವಂತೆ ಡೇವಿಡ್ ಡಿಸೋಜ ಪೋಲಿಸ್ ಇಲಾಖೆಯನ್ನು ‌ಒತ್ತಾಯಿಸಿದ್ದಾರೆ.

ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜ ಹೇಳಿಕೆ ಆರೋಪ : ಕಾಪು ಠಾಣೆಯಲ್ಲಿ ದೂರು ದಾಖಲು

Thumbnail
Posted On: 22 Aug 2024, 06:57 PM

ಕಾಪು : ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ರವರ ಬಗ್ಗೆ ವಿಧಾನ ಪರಿಷತ್‌ ಸದಸ್ಯ   ಐವನ್ ಡಿಸೋಜರವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕಾಪು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾಪು ಮಂಡಲ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆಯವರ ನೇತೃತ್ವದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್‌ ಖಾದರ್‌ ಅವರಿಗೆ ದೂರು ನೀಡಿ, ಐವನ್‌ ಡಿಸೋಜರವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭ ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ನಾಯಕ್, ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು,  ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್ ಉದ್ಯಾವರ, ಸುರೇಖಾ ಶೈಲೇಶ್, ಯುವ ಮೋರ್ಚಾ ಅಧ್ಯಕ್ಷ  ಸೋನು ಪಾಂಗಾಳ ಮತ್ತು ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟಕಲ್ಲು ಆಟೋ ರಿಕ್ಷಾ ಚಾಲಕ, ಮಾಲಕರ ಸಂಘದಿಂದ ಕ್ರೀಡಾ ಪರಿಕರಗಳ ವಿತರಣೆ

Thumbnail
Posted On: 22 Aug 2024, 06:24 PM

ಶಿರ್ವ : ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಇದರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪ್ರಾಥಮಿಕ ಶಾಲೆ ಬಂಟಕಲ್ಲು ಇದರ ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರಗಳ ವಿತರಣೆ ಕಾರ್ಯಕ್ರಮ ನಡೆಯಿತು. ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಗೌರವಾಧ್ಯಕ್ಷರಾದ ಮಾಧವ ಕಾಮತ್ ರವರು ಶಾಲೆಯ ಮುಖ್ಯಸ್ಥರಾದ ಜಯರಾಮ ಪ್ರಭು ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ, ಕಾರ್ಯದರ್ಶಿ ಡೆನಿಸ್ ಡಿಸೋಜ, ಸದಸ್ಯರಾದ ಸುರೇಶ್ ಕಲ್ಲು ಗುಡ್ಡೆ, ಹರೀಶ್, ರಮೇಶ್ ಹಾಗು ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಸಂಗೀತ ಪಾಟ್ಕರ್ ರವರು ಕಾರ್ಯಕ್ರಮ ನಿರೂಪಿದರು.

ಕಾಪು ಜೇಸಿಐ ಸಂಸ್ಥೆಗೆ ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ ಭೇಟಿ

Thumbnail
Posted On: 22 Aug 2024, 06:14 PM

ಕಾಪು : ಜಾಗತಿಕವಾಗಿ 115 ದೇಶದಲ್ಲಿ ಯುವ ನಾಯಕರು, ಉದ್ಯಮಿಗಳ ಜೊತೆಗೆ 5 ಲಕ್ಷ ಸಕ್ರಿಯ ಸದಸ್ಯರನ್ನು ಹೊಂದಿರುವ ಜೇಸಿಐ ಸಂಸ್ಥೆಯು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ವಿವಿಧ ಝೋನ್ ಗಳ ಘಟಕಗಳ ಭೇಟಿಯ ಜೊತೆಗೆ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ಕಾರ್ಯ ನೀಡಲಾಗುತ್ತಿದೆ ಎಂದು ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ ಹೇಳಿದರು. ಅವರು ಜೇಸಿಐ‌ ಕಾಪು ಭೇಟಿಯ ಸಂದರ್ಭ ಕಾಪುವಿನ ಮಂದಾರ ಹೊಟೇಲ್ ಸಭಾಂಗಣದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದ.ಕ, ಉಡುಪಿ, ಉ.ಕ ದ ವಿವಿಧ ಘಟಕಗಳು ಝೋನ್ 15 ರಲ್ಲಿದೆ. ಜೆಸಿಐ ಸಂಸ್ಥೆ ಯುವಕರನ್ನು ಗಮನದಲ್ಲಿರಿಸಿಕೊಂಡು ವಾಯ್ಸ್ ಆಫ್ ಯುತ್ ಕಾರ್ಯಕ್ರಮದ ಮೂಲಕ ಯುವಕರನ್ನು ಭೇಟಿಯಾಗಿ ಅವರ ಮುಂದಿನ ಸವಾಲು, ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಗ್ರಾಮೀಣ ಭಾಗದ ಆಯ್ದ ವಿದ್ಯಾರ್ಥಿಗಳಿಗೆ ರೂ.3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ, ನಾಯಕತ್ವ ‌ಶಿಬಿರಗಳ ಆಯೋಜನೆ ಮಾಡಲಾಗುತ್ತಿದೆ. ಜೆಸಿಐ ಸಂಸ್ಥೆಯಿಂದ ವಯನಾಡು ದುರಂತಕ್ಕೆ 1 ಕೋಟಿ ಸಹಾಯಧನ ನೀಡಲಾಗಿದೆ ಎಂದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ರಾಕೇಶ್ ಕುಂಜೂರು, ಜೆಸಿಐ ವಲಯ 15ರ ವಲಯಾಧ್ಯಕ್ಷ ಗಿರೀಶ್ ಎಸ್ ಪಿ, ಸುಖಲಾಕ್ಷಿ ಬಂಗೇರ, ಸನತ್ ಕುಮಾರ್, ಸೌಮ್ಯ ರಾಕೇಶ್, ಸತೀಶ್ ಪೂಜಾರಿ, ಅಭಿಲಾಷ್ ಮತ್ತಿತರರು ಉಪಸ್ಥಿತರಿದ್ದರು.