Updated News From Kaup
ರಂಗಭೂಮಿ ಕಲಾವಿದ ಪೆರ್ಡೂರು ಪ್ರಭಾಕರ ಕಲ್ಯಾಣಿಯವರಿಗೆ ತೌಳವ ಪ್ರಶಸ್ತಿ
Posted On: 29-07-2024 06:57AM
ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಸಹಯೋಗದೊಂದಿಗೆ 21ನೇ ವಾರ್ಷಿಕ ಸಂಭ್ರಮದ ಅಂಗವಾಗಿ ಆಗಸ್ಟ್ 2 ರಂದು ಮಂಗಳೂರು ಪುರಭವನದಲ್ಲಿ ಗಣ್ಯರ ಉಪಸ್ಥಿತಿ ಯಲ್ಲಿ ಪೆರ್ಡೂರು ಪ್ರಭಾಕರ ಕಲ್ಯಾಣಿ ಇವರಿಗೆ ಕಳೆದ 45 ವರ್ಷಗಳಿಂದ ತುಳು /ಕನ್ನಡ ರಂಗ ಭೂಮಿಯಲ್ಲಿ ಮಾಡಿದ ಸೇವೆಗಾಗಿ 'ತೌಳವ ಪ್ರಶಸ್ತಿ' ಪ್ರದಾನ ನಡೆಯಲಿದೆ.
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ ವತಿಯಿಂದ ಸ.ಪ.ಪೂ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ
Posted On: 28-07-2024 06:41PM
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಪಡುಬಿದ್ರಿಯ ಜಾನಪದ ಚಿಂತಕರಾದ ಪಿ.ಕೆ. ಸದಾನಂದ ಪೂಜಾರಿ ಆಟಿ ತಿಂಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಉಡುಪಿ : ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ
Posted On: 28-07-2024 05:04PM
ಉಡುಪಿ : ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಜುಲೈ 28 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಡುಬಿದ್ರಿ : ಮುಂಡಾಲ ಯುವ ವೇದಿಕೆಯಿಂದ ವನಮಹೋತ್ಸವ ಕಾರ್ಯಕ್ರಮ
Posted On: 28-07-2024 04:50PM
ಪಡುಬಿದ್ರಿ : ಪರಿಸರ ಸಮತೋಲನೆಗಾಗಿ ಮನುಷ್ಯ ಸಾಮಾಜಿಕ ಕಳಕಳಿಯಿಂದ ಪರಿಸರ ಸಂರಕ್ಷಣೆ ಮತ್ತು ಸಸ್ಯ ಸಂಕುಲಗಳನ್ನು ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹೇಳಿದರು. ಅವರು ಪಡುಬಿದ್ರಿ ಮುಂಡಾಲ ಯುವ ವೇದಿಕೆಯ ವತಿಯಿಂದ ಸಂತೆಕಟ್ಟೆ ಶ್ರೀಕೋಡ್ದಬ್ಬು ದೈವಸ್ಥಾನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಡುಬಿದ್ರಿ : ಬಂಟರ ಸಂಘದಲ್ಲಿ ಆಟಿ ಕೂಟ ಕಾರ್ಯಕ್ರಮ
Posted On: 28-07-2024 04:30PM
ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎರ್ಮಾಳು : ಕಂಡೊಡೊಂಜಿ ದಿನ ಕಾರ್ಯಕ್ರಮ
Posted On: 28-07-2024 04:25PM
ಎರ್ಮಾಳು : ತುಳುನಾಡಿನ ಜನರು ಆಟಿ ತಿಂಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಸಂತಸದ ವಿಷಯ. ಇದು ತುಳುವರ ಸಂಸ್ಕೃತಿಯ ಬಗೆಗಿನ ಕಾಳಜಿ ತೋರಿಸುತ್ತದೆ ಎಂದು ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗ ಅವರು ಹೇಳಿದರು. ಅವರು ಬಿಲ್ಲವರ ಯೂನಿಯನ್ ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ ಮತ್ತು ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ಬಡಕೊಟ್ಟು ಬಾಕಿಮಾರು ಗದ್ದೆಯಲ್ಲಿ ರವಿವಾರ ಜರಗಿದ ಕಂಡೊಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಮಂಕಾಳ ವೈದ್ಯ ಭೇಟಿ
Posted On: 27-07-2024 07:28PM
ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಸಚಿವರಾದ ಮಂಕಾಳ ವೈದ್ಯ ಶನಿವಾರ ಭೇಟಿ ನೀಡಿದರು.
ಜುಲೈ 27 : ಕಾಪುವಿನಲ್ಲಿ ಬೃಹತ್ ಪಂಜಿನ ಮೆರವಣಿಗೆ
Posted On: 27-07-2024 08:13AM
ಕಾಪು : ಬಿಜೆಪಿ ಯುವಮೋರ್ಚ ಕಾಪು ಮಂಡಲದ ವತಿಯಿಂದ ಇಪ್ಪತ್ತೈದನೇ ವರ್ಷದ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಜುಲೈ 27ರಂದು ಸಂಜೆ 6.30ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟು ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಕಾಪು ವಾಜಪೇಯಿ ಕಟ್ಟೆಯ ತನಕ ನಡೆಯಲಿದೆ.
ಜುಲೈ 28 : ಪಡುಬಿದ್ರಿಯಲ್ಲಿ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು
Posted On: 27-07-2024 06:48AM
ಪಡುಬಿದ್ರಿ : ಇಲ್ಲಿನ ಗ್ರಾಮೀಣ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೃೆ 28 ರಂದು ಸಾರ್ವಜನಿಕರಿಗಾಗಿ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು ಕಾರ್ಯಕ್ರಮವು ಪಡುಬಿದ್ರಿ ಖಡ್ಗೇಶ್ವರಿ ಬ್ರಹ್ಮಸ್ಥಾನದ ಬಳಿಯ ಗದ್ದೆಯಲ್ಲಿ ನಡೆಯಲಿದೆ.
ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದೆ ಈ ಬಾರಿಯ ಬಜೆಟ್ : ಶ್ರೀನಿಧಿ ಹೆಗ್ಡೆ
Posted On: 26-07-2024 09:13PM
ಕಾಪು : ರಾಷ್ಟ್ರದ ಮದ್ಯಮ ವರ್ಗ, ಬಡವರು ಗ್ರಾಮೀಣ ಪ್ರದೇಶದ ಜನರ ರೈತರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮುಲಕ ಸಮಾಜದ ಪ್ರತೀ ಕ್ಷೇತ್ರದ ಜನರಿಗೆ ಶಕ್ತಿ ನೀಡುವ ಬಜೆಟ್ ಇದಾಗಿದೆ. ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ, ಮೂಲ ಸೌಕರ್ಯ ಹೀಗೆ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಈ ಮೂಲಕ ಮೋದಿ ಸರ್ಕಾರ ಭಾರತದ ಆರ್ಥಿಕ ವೇಗಕ್ಕೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ.
