Updated News From Kaup

ಕಡಲ್ಕೊರೆತ : ಪಡುಬಿದ್ರಿಯ ನಡಿಪಟ್ಣದಲ್ಲಿ ಮೀನುಗಾರಿಕಾ ರಸ್ತೆಗೂ ಆಪತ್ತು

Posted On: 26-07-2024 09:09PM

ಪಡುಬಿದ್ರಿ ‌: ಇಲ್ಲಿಯ ನಡಿಪಟ್ಣ ಪ್ರದೇಶದಲ್ಲಿಯ ಕಡಲ ಕೊರೆತದಿಂದ ‌ಮೀನುಗಾರಿಕಾ ಶೆಡ್, ಮೀನುಗಾರರ ವಿಶ್ರಾಂತಿ ಗೃಹ ಸಮುದ್ರ ಪಾಲಾದ ಬಳಿಕ ಇದೀಗ ಮೀನುಗಾರಿಕಾ ರಸ್ತೆಗೂ ಆಪತ್ತು ಬಂದೊದಗಿದೆ.

ಕಟಪಾಡಿ : ರೋಟರಿ ಕ್ಲಬ್ ಶಂಕರಪುರ - ಆಟಿಡೊಂಜಿ ದಿನ ; ಪ್ಲಾಸ್ಟಿಕ್ ದುಷ್ಪರಿಣಾಮ ಕರಪತ್ರ ಬಿಡುಗಡೆ

Posted On: 26-07-2024 10:54AM

ಕಟಪಾಡಿ : ರೋಟರಿ ಕ್ಲಬ್ ಶಂಕರಪುರ ವತಿಯಿಂದ ಶಂಕರಪುರದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕಾರ್ಗಿಲ್ ವಿಜಯ ದಿನ - ಭಾರತೀಯರು ಎಂದು ಮರೆಯದ ಈ ದಿನಕ್ಕೆ ಇಂದು 25 ವಷ೯

Posted On: 26-07-2024 10:40AM

"ಕಾರ್ಗಿಲ್ ವಿಜಯ್ ದಿವಸ್" ಪ್ರತಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ. ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ.

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

Posted On: 25-07-2024 07:45PM

ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸೀಸ್ ನ ಸಹಕಾರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ಪಡುಬಿದ್ರಿ : ಪತ್ರಿಕಾ ದಿನಾಚರಣೆ, ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿನಿಧಿ ವಿತರಣೆ

Posted On: 25-07-2024 07:28PM

ಪಡುಬಿದ್ರಿ : ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ ಹಾಗೂ ನ್ಯಾಯ ನಿಷ್ಟುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣಗಳನ್ನು ಹೊಂದಿರಬೇಕು ಎಂದು ತುಳು ಜಾನಪದ ಸಂಶೋಧಕ ಡಾ.ವೈ. ಎನ್. ಶೆಟ್ಟಿ ಹೇಳಿದರು. ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪಡುಬಿದ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪತ್ರಿಕಾ ದಿನಚರಣೆ ಹಾಗೂ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ- ದತ್ತಿನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಿ ಉಪನ್ಯಾಸಗೈದರು. ಪತ್ರಕರ್ತರಲ್ಲಿ ಹಲವಾರು ಮಂದಿ ಆದರ್ಶ ವ್ಯಕ್ತಿತ್ವದವರಿದ್ದಾರೆ. ಈ ಪೈಕಿ ಹಿರಿಯ ಪತ್ರಕರ್ತ ದಿ. ಜಯಂತ್ ಅವರನ್ನು ಪರಿಗಣಿಸಬಹುದು ಎಂದು ಅವರು ನುಡಿದರು.

ಪಡುಬಿದ್ರಿ : ಕಡಲಬ್ಬರಕ್ಕೆ ಸಿಲುಕಿದ ಮೀನುಗಾರರ ವಿಶ್ರಾಂತಿ ಗೃಹ, ತೆಂಗಿನಮರಗಳು

Posted On: 25-07-2024 06:00PM

ಪಡುಬಿದ್ರಿ : ಇಲ್ಲಿನ ಕಡಲ ಕಿನಾರೆಯ ನಡಿಪಟ್ಣ ಪ್ರದೇಶದಲ್ಲಿ ಮೀನುಗಾರರ ವಿಶ್ರಾಂತಿ ಗೃಹ, ತೆಂಗಿನ ಮರಗಳು ಸಮುದ್ರ ಪಾಲಾಗಿದೆ.

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

Posted On: 25-07-2024 07:05AM

ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ಮಾತನಾಡಿ, ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಆಗ ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ ಎಂದರು.

ಉಡುಪಿ : ಆಟಿಡೊಂಜಿ ದಿನ ಮತ್ತು ಬಲೆ ತುಲುಟು ಪುದರ್ ಬರೆಕ ಅಭಿಯಾನ

Posted On: 25-07-2024 06:53AM

ಉಡುಪಿ : ಕರಾವಳಿ ಯುವಕ/ಯುವತಿ ಮಂಡಲ(ರಿ.) ಬಡಾನಿಡಿಯೂರ್ ಇವರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರಾದ ಸುಲೋಚನಾ ಪಚ್ಚಿನಡ್ಕ ತುಳುನಾಡಿನ ಆಟಿ ತಿಂಗಳ ಆಚರಣೆಗಳ ಮಹತ್ವದ ಬಗ್ಗೆ ತಿಳಿಸಿದರು.

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ಅಪ್ಪ ಸೇವೆ

Posted On: 22-07-2024 08:25PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ವಾರ್ಷಿಕ ಸಾಮೂಹಿಕ ಅಪ್ಪ ಸೇವೆ ಸೋಮವಾರ ಸಂಜೆ ಸಂಪನ್ನಗೊಂಡಿತು.

ಪಡುಬಿದ್ರಿ ರೋಟರಿ ಕ್ಲಬ್ 2025-26 ಸಾಲಿನಲ್ಲಿ ಬೆಳ್ಳಿ ಹಬ್ಬ ಸಂಭ್ರಮ - ಅಧ್ಯಕ್ಷರಾಗಿ ವೃೆ.ಸುಧೀರ್ ಕುಮಾರ್ ಆಯ್ಕೆ

Posted On: 22-07-2024 07:03AM

ಪಡುಬಿದ್ರಿ : ರೋಟರಿ ಕ್ಲಬ್ 2025-26 ಸಾಲಿನಲ್ಲಿ 25 ರ ಸಂವತ್ಸರದ‌ ಆಚರಣೆಯಲ್ಲಿದ್ದು ಇದರ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿ ವೃೆ.ಸುಧೀರ್ ಕುಮಾರ್ ಆಯ್ಕೆಗೊಂಡಿರುತ್ತಾರೆ.