Updated News From Kaup

ಎರ್ಮಾಳಿನ ವರ್ಚಸ್ ಶೆಟ್ಟಿ CA ಪರೀಕ್ಷೆಯಲ್ಲಿ ಉತ್ತೀರ್ಣ

Posted On: 12-07-2024 10:44AM

ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ಎರ್ಮಾಳಿನ ವರ್ಚಸ್ ಶೆಟ್ಟಿಯವರು ಉತ್ತೀರ್ಣರಾಗಿರುತ್ತಾರೆ.

ಇವರು ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ "ಕುಮುದ" ನಿಲಯದ ನಿವಾಸಿ ಯಾಗಿದ್ದು, ಪ್ರಸ್ತುತ ಬೆಳಗಾಂನಲ್ಲಿವಾಸ್ತವ್ಯವಿರುವ ದಿ.ಹಿಮಕರ ಶೆಟ್ಟಿ ಹಾಗೂ ಪೂರ್ಣಿಮ ಶೆಟ್ಟಿಯವರ ಸುಪುತ್ರ.

ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ವಿದ್ಯಾರ್ಥಿವೇತನ ವಿತರಣೆ ; ವಿವಿಧ ಸಂಘಗಳ ಉದ್ಘಾಟನೆ

Posted On: 12-07-2024 10:16AM

ಹೆಜಮಾಡಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಜುಲೈ 11ರಂದು ಮಣಿಪಾಲ ಟೆಕ್ನಾಲಜಿ ಸಂಸ್ಥೆಯ ವತಿಯಿಂದ ರೊನಾಲ್ಡ್ ಡಿಸೋಜಾ ಎಚ್ಆರ್ ಮ್ಯಾನೇಜರ್ ಇವರು 2023 -24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶದ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭ ಅವರು ಮಾತನಾಡಿ, ಪ್ರತಿ ವರ್ಷವೂ ಸಂಸ್ಥೆಯು ನೂರು ಶೇಕಡ ಫಲಿತಾಂಶ ದಾಖಲಿಸುವಂತಾಗಲಿ ಎಂದು ಹಾರೈಸಿದರು. ಪ್ರಸ್ತುತ 10ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತಮ ಫಲಿತಾಂಶ ದಾಖಲಿಸುವಂತೆ ಪ್ರೋತ್ಸಾಹಿಸಿದರು. ಶಾಲೆಯ ವಿವಿಧ ಸಂಘಗಳನ್ನು ಉದ್ಘಾಟನೆ ಮಾಡಿದರು.

ಸಂಸ್ಥೆಯ ಹಿರಿಯ ಶಿಕ್ಷಕಿ ಸಂಪಾವತಿ ಮಾತಮಾಡಿ, ಮಣಿಪಾಲ ಟೆಕ್ನಾಲಜಿ ಸಂಸ್ಥೆ ಈ 3 ವರ್ಷಗಳಿಂದ ಸಂಸ್ಥೆಗೆ ನೀಡಿದ ಇನ್ಸಿನರೇಟರ್, ಕಂಪ್ಯೂಟರ್, ಪ್ರಿಂಟರ್, ಪ್ರೊಜೆಕ್ಟರ್ , ವಾಟರ್ ಪ್ಯೂರಿಫೈಯರ್ ಈ ಮೊದಲಾದ ಕೊಡುಗೆಗಳನ್ನು ಸ್ವರಿಸುತ್ತಾ ಮಣಿಪಾಲ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಶಾಲಾ ಸಂಸತ್ ನ ಉಸ್ತುವಾರಿ ಶಿಕ್ಷಕಿ ಅನಿತಾ ವಿವಿಧ ಸಂಘಗಳ ಕಾರ್ಯವನ್ನು ತಿಳಿಸಿದರು.

ಹಿರಿಯ ಶಿಕ್ಷಕಿ ಸಂಪಾವತಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕರಾದ ದೀಪಾ ಉಡುಪ ಕಾರ್ಯಕ್ರಮ ನಿರೂಪಿಸಿದರು. ಸರೋಜಾ ಆಚಾರಿ ವಂದಿಸಿದರು. SDMC ಸದಸ್ಯರು, ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಪು : ಇನ್ನಂಜೆಯ ವರ್ಷಿಣಿ ಪಿ ಆರ್ CA ಪರೀಕ್ಷೆಯಲ್ಲಿ ಉತ್ತೀರ್ಣ

Posted On: 11-07-2024 11:13PM

ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ವರ್ಷಿಣಿ ಪಿ ಆರ್ ಉತ್ತೀರ್ಣರಾಗಿರುತ್ತಾರೆ.

ಇವರು ಕಾಪು ತಾಲೂಕಿನ ಇನ್ನಂಜೆಯ ನಿವಾಸಿಯಾಗಿದ್ದ ಪ್ರಸ್ತುತ ಬೆಂಗಳೂರಿನಲ್ಲಿ ‌ವಾಸ್ತವ್ಯವಿರುವ ರವಿ ಪಿ., ಜಯಲಕ್ಷ್ಮಿ ಆರ್ ರವರ ಸುಪುತ್ರಿ.

ಕಾಪು : ಅನುಷಾ ಕರ್ಕೇರ CA ಪರೀಕ್ಷೆಯಲ್ಲಿ ಉತ್ತೀರ್ಣ

Posted On: 11-07-2024 09:19PM

ಕಾಪು : ಮುಂಬೈನ ಭಾಂಡುಪ್ ನಿವಾಸಿಗಳಾಗಿರುವ ಅಚ್ಚುತ ಕರ್ಕೇರ ಮತ್ತು ಯಶೋಧಾ ಕರ್ಕೇರ ದಂಪತಿಗಳ ಪುತ್ರಿ ಅನುಷಾ ಕರ್ಕೇರ ಇವರು ICAI (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ) ಇಲ್ಲಿನ CA ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರಿಗೆ ಇನ್ನಂಜೆಯ ಮಡುಂಬು ಬಂಗೇರ ಕುಟುಂಬಸ್ಥರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು - ವನಮಹೋತ್ಸವ ಕಾರ್ಯಕ್ರಮ

Posted On: 11-07-2024 07:02AM

ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು, ಕಾಪು ಇದರ ಸಸ್ಯಶ್ಯಾಮಲ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಗಿಡ ನೆಟ್ಟು, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜುಲೈ 10ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನದಾಸ ಶೆಟ್ಟಿಯವರು ಗಿಡ ನೆಟ್ಟು ಮಾಹಿತಿ ನೀಡುವುದರ ಮುಖಾಂತರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶಿವಲಿಂಗಪ್ಪ, ಹಿರಿಯ ಉಪನ್ಯಾಸಕ ಸುಧಾಕರ್ ಎಂ. ಏ, ಗಸ್ತು ಅರಣ್ಯ ಪಾಲಕ ಮಂಜುನಾಥ ಹಾಗೂ ಉಪನ್ಯಾಸಕರು , ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪವರ್ ಲಿಫ್ಟರ್ ಗಳಿಗೆ ಸ್ವಾಗತ

Posted On: 10-07-2024 07:10PM

ಮಂಗಳೂರು : ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಏಷ್ಯಾ-ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿ ಬೋಳ ಮತ್ತು 105 ಕೆಜಿ ವಿಭಾಗದಲ್ಲಿ ಎರಡು ಚಿನ್ನ ಗೆದ್ದು ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದ ವಿಜಯ್ ಕಾಂಚನ್ ರನ್ನು ಬಜಪೆ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಅಕ್ಷತಾ ಪೂಜಾರಿ ಬೋಳಾ ಅವರು ಪವರ್‌ಲಿಫ್ಟಿಂಗ್‌ನಲ್ಲಿ ಗಮನಾರ್ಹ ದಾಖಲೆಯನ್ನು ಹೊಂದಿದ್ದು, ಹಲವಾರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಏಷ್ಯನ್ ಮಟ್ಟ, ಕಾಮನ್‌ವೆಲ್ತ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಜಯಗಳಿಸಿದ್ದಾರೆ. ಆಕೆಯ ಅತ್ಯುತ್ತಮ ಸಾಧನೆಗಳು ಆಕೆಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಯನ್ನು ತಂದುಕೊಟ್ಟಿವೆ.

ವಿಜಯ್ ಕಾಂಚನ್ ಮಂಗಳೂರಿನಲ್ಲಿ ಬಾಲಾಂಜನೇಯ, ರಾಮಾಂಜನೇಯ, ಪವರ್ ಜೋನ್, ಬ್ಲ್ಯಾಕ್ ರಾಕ್ ಮತ್ತು ಮೈ ಫಿಟ್ನೆಸ್ ಜಿಮ್ ಸೇರಿದಂತೆ ಅನೇಕ ಜಿಮ್‌ಗಳಲ್ಲಿ ತರಬೇತಿ ನೀಡುವುದಲ್ಲದೆ, ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಈ ಸಂದರ್ಭ ಗೀತಾಂಜಲಿ ಸುವರ್ಣ, ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಷನ್ ತರಬೇತುದಾರ ದಿನೇಶ್ ಕರ್ಕೇರ, ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ, ಸದಾನಂದ ಅಮೀನ್, ಲಕ್ಷ್ಮಣ್, ಮಂಜುನಾಥ್ ಹೊಸಬೆಟ್ಟು, ರಘು ಬೈಕಂಪಾಡಿ, ಕಾರ್ತಿಕ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ

Posted On: 10-07-2024 06:05PM

ಉಚ್ಚಿಲ : 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಅರ್ಚಕರಾಗಿ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ, ಗೌರವ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷರಾಗಿ ಕೆ. ವಿಶ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು , ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದರ್ಶಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ‌.ಮೂ.ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್. ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು , ಕರುಣಾಕರ ಮೊಯಿಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಕರ್ಕೇರ, ಗಣೇಶ್ ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಯಿಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಶಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.

ಕಾಂತಾವರ ಗ್ರಾಮಸಭೆ ; ಅಭಿನಂದನೆ

Posted On: 10-07-2024 10:37AM

ಕಾಂತಾವರ : ಇಲ್ಲಿನ ಗ್ರಾಮ ಪಂಚಾಯತ್ ನ ಈ ವರ್ಷದ ಪ್ರಥಮ ಗ್ರಾಮಸಭೆ ಕಾಂತಾವರ ಕನ್ನಡ ಸಂಘದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಯು ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಮಾಹಿತಿ ನೀಡಿದರು.

ಗ್ರಾಮದ ಶ್ರೀ ಕಾಂತೇಶ್ವರ ಹೈಸ್ಕೂಲ್ ಕಳೆದ ನಾಲ್ಕು ವರ್ಷಗಳಿಂದ ಶೇಕಡಾ ನೂರು ಫಲಿತಾಂಶ ಪಡೆದಿದ್ದು, ಅದರ ಮುಖ್ಯೋಪಾಧ್ಯಾಯರಾದ ತಿಪ್ಪೆಸ್ವಾಮಿ ಇವರನ್ನು ಅಭಿನಂದಿಸಲಾಯಿತು.

ಅದೇ ರೀತಿ ಗ್ರಾಮದಲ್ಲಿ ಮೆಸ್ಕಾಂ ಇಲಾಖೆಯ ಉತ್ತಮ ಕಾರ್ಯ ನಿರ್ವಹಣೆಗಾಗಿ ಇಲಾಖೆಯ ಸುಧೀಂದ್ರ ಇವರನ್ನು ಕೂಡಾ ಅಭಿನಂದಿಸಲಾಯಿತು.

ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಮತ್ತು ಪಂಚಾಯತ್ ನ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಿ : ಶ್ರೀನಿಧಿ ಹೆಗ್ಡೆ

Posted On: 10-07-2024 06:55AM

ಉಡುಪಿ : ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರು ಕೂಡ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇನ್ನು ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ ಹೇಳುವ ಕೆಲಸಕ್ಕೂ ಮುಂದಾಗಲಿಲ್ಲ ಎನ್ನುವುದು ವಿಪರ್ಯಾಸ.

ದೂರದ ಬೆಳಗಾವಿಯ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಕುರಿತು ಕಾಳಜಿ ವಹಿಸದೇ ಇರುವುದು ನಮ್ಮ ಜಿಲ್ಲೆಯ ದುರಾದೃಷ್ಟವೆ ಸರಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದ ಕಾರಣಕ್ಕೆ ರಾಜ್ಯ ಸರ್ಕಾರ ಜಿಲ್ಲೆಯನ್ನು ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಈ ಹಿಂದೆ ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾದಾಗ ಅಂದು ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿ ಇತ್ತು. ಅದು ಇಂದು ಮುಂದುವರೆದಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಶಾಲಾ ಮಕ್ಕಳಿಗೆ 3-4 ದಿನ ರಜೆ ಘೋಷಣೆ ಆಗಿದೆ, ಉಸ್ತುವಾರಿ ಸಚಿವರು ಕೂಡ ರಜೆಯಲ್ಲಿ ಯಾವ ಊರಿಗೆ ಹೋಗಿರುವರು ಎಂಬ ಪ್ರಶ್ನೆಗಳೂ ಕೇಳಬೇಕಾಗಿದೆ. ಜಿಲ್ಲೆಯಲ್ಲಿ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ, ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ, ನೂರಾರು ಕುಟುಂಬಗಳ ಜೀವನ ಅಸ್ತವ್ಯಸ್ತ ಆಗಿದ್ದರು ಮಾನ್ಯ ಸಚಿವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಒಂದೇ ಒಂದು ಸಭೆ ನಡೆಸಿಲ್ಲ.

ಸಚಿವರು ತಮ್ಮ ನಾಯಕರ ಮುಖ್ಯಮಂತ್ರಿಯ ಗದ್ದುಗೆ ಆಟದ ಬೇಗುದಿ ಕಾರ್ಯದಲ್ಲಿ ನಿರತರಾಗಿರಬೇಕು ಅಥವಾ ಗೃಹ ಲಕ್ಷ್ಮಿ ಯೋಜನೆಗೆ ಹಣವನ್ನು ಹೊಂದಿಸಲು ವಾಲ್ಮಿಕಿ ನಿಗಮದ ಹಣವನ್ನು ತಾವು ವಿನಿಯೋಗಿಸುವ ಪ್ರಯತ್ನದಲ್ಲಿ ಇದ್ದಾರೆಯೇ..?? ಎಂದು ಕೇಳಬೇಕಾದ ಪರಿಸ್ಥಿತಿ ಬಂದಿದೆ.

ಕರಾವಳಿಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚುತ್ತಿದ್ದರೂ ಆರೋಗ್ಯ ಸಚಿವರು ಮಂಗಳೂರಿಗೆ ಬಂದು ಈಜುಕೊಳದಲ್ಲಿ ತನ್ನ ಸಮಯ ಕಳೆದಿರುವುದು ಒಂದು ಕಥೆ ಆದರೆ, ಇತ್ತ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಸಂತ್ರಸ್ತರ ಬೇಟಿ ಮಾಡದೆ ರಾಜಧಾನಿಯಲ್ಲೇ ಕುಳಿತು ಮಾಧ್ಯಮ ಹೇಳಿಕೆ ನೀಡಿ ಹಾರಿಕೆ ಉತ್ತರ ನೀಡುತ್ತಾ ಇರುವುದು ಜಿಲ್ಲಾ ಜನತೆಯ ವಿಪರ್ಯಾಸವೇ ಸರಿ ಹಾಗೂ ಇದು ಜಿಲ್ಲಾ ಉಸ್ತುವಾರಿ ಸಚಿವರ ಬಾಲಿಶತನವನ್ನು ತೋರಿಸುತ್ತದೆ. ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕು ಎಂದು ಈ ಮೂಲಕ ಬಂಡ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಪು : 50 ಲಕ್ಷ ರೂ. ಅನುದಾನದಲ್ಲಿ ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿದೆ ಗೋಶಾಲೆ, ಗೋರುದ್ರಭೂಮಿ

Posted On: 09-07-2024 06:52PM

ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಮಂಗಳವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಅವರು‌ ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಉಪಾಧ್ಯಕ್ಷರಾದ ಉಷಾ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಿ ಆಚಾರ್ಯ, ಹರೀಶ್ ಬೆಳ್ಳಿಬೆಟ್ಟು, ದಯಾನಂದ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸ್ಥಳೀಯ ಪ್ರಮುಖರಾದ ನಾಗೇಶ್ ಭಟ್, ಹರೀಶ್ ಶೆಟ್ಟಿ ಅದಮಾರು, ಸುಕೇಶ್ ಉಳ್ಳೂರು, ಗಣೇಶ್, ಕೃಷ್ಣಾನಂದ ರಾವ್, ಪ್ರೇಮಾನಂದ ಶೆಟ್ಟಿ, ಸಂದೇಶ್ ಪಾದೆಬೆಟ್ಟು, ಪಶು ವೈದ್ಯಾಧಿಕಾರಿಗಳಾದ ಅರುಣ್, ನಿರ್ಮಿತಿ ಕೇಂದ್ರದ ಮುಖೇಶ್, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಉಪಸ್ಥಿತರಿದ್ದರು.