Updated News From Kaup
ಯುವವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ರಜತ ಸಂಭ್ರಮ - ವನಮಹೋತ್ಸವ ಕಾರ್ಯಕ್ರಮ
Posted On: 22-07-2024 06:53AM
ಉಡುಪಿ : ಯುವವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು ಇದರ ರಜತ ಸಂಭ್ರಮದ ಎರಡನೇ ಕಾರ್ಯಕ್ರಮವಾದ ವನಮಹೋತ್ಸವವು ಜರಗಿತು. ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇದರ ಮಾಲಕರು, ಜಯಂಟ್ಸ್ ಗ್ರೂಪ್ ನ ಸಂಚಾಲಕರಾಗಿರುವ ಮಧುಸೂಧನ್ ಹೇರೂರು ಇವರು ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹಸಿರೇ ಉಸಿರು ಅದಕ್ಕಾಗಿ ಗಿಡ ನೆಟ್ಟು ಪಾಲಿಸಿ ಪೋಷಿಸಿ ಹಾಗೂ ಸಂರಕ್ಷಿಸಿ, ಪ್ರತಿಯೊಂದು ಗಿಡಗಳಿಗೂ ದೈವೀಕ ಶಕ್ತಿ ಇದ್ದು ಗಿಡಗಳೊಂದಿಗೆ ನಾವಿದ್ದಾಗ ಮಾತ್ರ ಆಯಾ ಶಕ್ತಿಗಳ ಸಂಚಲನ ಸಾಧ್ಯ ಎಂದು ತಿಳಿಸಿದರು.
ಕುತ್ಯಾರು : ಕುತ್ಕುಲ್ ಬಳಿ ಕಾಲು ಸಂಕ ಇಲ್ಲದೆ ಗ್ರಾಮಸ್ಥರ ಪರದಾಟ
Posted On: 21-07-2024 07:14PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಕುಲ್ ಬಳಿ ಕಾಲು ಸಂಕ ಇಲ್ಲದೆ ಗ್ರಾಮಸ್ಥರಿಗೆ ಸಮಸ್ಯೆ ಆಗಿದ್ದು, ಈ ಬಗ್ಗೆ ಪಂಚಾಯತ್ ಗೆ ಮನವಿ ನೀಡಿದ್ದು ಈ ಬಗ್ಗೆ ಜನಪ್ರತಿನಿಧಿಗಳು ತುರ್ತು ಗಮನ ಹರಿಸಬೇಕಾಗಿ ಸಮಾಜ ಸೇವಕ ಅಲ್ವಿನ್ ಪ್ರಕಾಶ್ ಡಿಸೋಜ, ಕೇಂಜ ಕುತ್ಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ಪಡುಬಿದ್ರಿ : ಬಿಲ್ಲವ ಸಂಘದಲ್ಲಿ ಆಟಿದ ಲೇಸ್
Posted On: 21-07-2024 06:41PM
ಪಡುಬಿದ್ರಿ : ತುಳುನಾಡಿನ ಪ್ರತಿ ಪದ್ದತಿಗೂ ಅದರದೇ ಮಹತ್ವವಿದೆ. ಹಿರಿಯರಿಂದ ಸಂಸ್ಕೃತಿ ಉಳಿದಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಆಟಿಯ ತಿನಿಸುಗಳು ವಿಶೇಷವಾಗಿದ್ದು, ಈ ತಿಂಗಳಿನಲ್ಲಿ ಇದು ದೇಹಕ್ಕೆ ಅವಶ್ಯವಾಗಿದೆ. ಹೆತ್ತವರ ಜೊತೆಗೆ ಮಕ್ಕಳು ಇಂತಹ ಕಾರ್ಯಕ್ರಮಗಳಿಗೆ ಬಂದರೆ ಯಶಸ್ವಿಯಾದಂತೆ. ಆಟಿಯ ಪದ್ಧತಿಗಳನ್ನು ಮುಂದುವರೆಸೋಣ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹೇಳಿದರು. ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾಗ್ರಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಹಾಗೂ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಆಶ್ರಯದಲ್ಲಿ ಜರಗಿದ ಆಟಿದ ಲೇಸ್ ಕಾರ್ಯಕ್ರಮವನ್ನು ಕಲಸಕ್ಕೆ ಭತ್ತ ತುಂಬುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಭೇಟಿ
Posted On: 21-07-2024 06:33PM
ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಉಚ್ಚಿಲ ರೋಟರಿ ಕ್ಲಬ್ ಪದಗ್ರಹಣ
Posted On: 21-07-2024 03:01PM
ಉಚ್ಚಿಲ : ಸಾಮಾಜಿಕ ವ್ಯವಸ್ಥೆಯಲ್ಲಿ ನಾವು ಮಾಡುವ ಸೇವೆ ದೊಡ್ಡದಾಗಬೇಕಂತಿಲ್ಲ ಸಣ್ಣದಾದರೂ ಸೇವೆಯೇ ಆಗಿದೆ. ನಾಯಕತ್ವದ ಜೊತೆಗೆ ಜವಾಬ್ದಾರಿಯ ಬಗೆಗೂ ತಿಳಿಯುವ ಕಾರ್ಯ ರೋಟರಿ ಸಂಸ್ಥೆಯಲ್ಲಿದೆ. ಹೆಚ್ಚಿನ ಸದಸ್ಯರು ಸೇರ್ಪಡೆಯಾಗುವ ಮೂಲಕ ಸಂಸ್ಥೆಯನ್ನು ಬಲಪಡಿಸಬೇಕು ಎಂದು ಝೋನ್ V ಆರ್.ಐ. ಜಿಲ್ಲೆ 3182 ಮಾಜಿ ಅಸಿಸ್ಟೆಂಟ್ ಗವರ್ನರ್ ರೋ. ಪಿಎಚ್ಎಫ್ ಸೂರ್ಯಕಾಂತ್ ಶೆಟ್ಟಿ ಹೇಳಿದರು. ಅವರು ಉಚ್ಚಿಲದಲ್ಲಿ ಜರಗಿದ ಉಚ್ಚಿಲ ರೋಟರಿ ಸಂಸ್ಥೆಯ 2024 -25ನೇ ಸಾಲಿನ ಪದಗ್ರಹಣ ಅಧಿಕಾರಿಯಾಗಿ ಪದಗ್ರಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ : ಶಾಸಕ ಯಶ್ ಪಾಲ್ ಸುವರ್ಣ ಚಾಲನೆ
Posted On: 20-07-2024 07:22PM
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ~ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ ಜನಪ್ರಿಯ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು.
ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಶೆಡ್
Posted On: 20-07-2024 02:00PM
ಪಡುಬಿದ್ರಿ : ಇಲ್ಲಿನ ಕಡಲ ಕಿನಾರೆಯ ನಡಿಪಟ್ಣ ಪ್ರದೇಶದಲ್ಲಿ ಕಡಲ್ಕೊರೆತ ಹೆಚ್ಚಿದ್ದು ಕೆಲವು ದಿನಗಳ ಹಿಂದೆ ಅಪಾಯದಂಚಿನಲ್ಲಿದ್ದ ಮೀನುಗಾರಿಕಾ ಶೆಡ್ ಕಡಲಬ್ಬರಕ್ಕೆ ಸಿಲುಕಿ, ಹಾನಿಯಾಗಿದೆ. ಮೀನುಗಾರಿಕಾ ರಸ್ತೆಗೂ ಹಾನಿಯಾಗುವ ಸಂಭವವಿದೆ.
ಜುಲೈ 21: ಕುಲಾಲ ಸಂಘ ನಾನಿಲ್ತಾರು ವತಿಯಿಂದ ಆಟಿಡೊಂಜಿ ಕೂಟ
Posted On: 19-07-2024 08:30PM
ಕಾರ್ಕಳ : ತಾಲೂಕಿನ ಮುಂಡ್ಕೂರು ಮುಲ್ಲಡ್ಕದ ಕುಲಾಲ ಸಂಘ (ರಿ.) ನಾನಿಲ್ತಾರು ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಕುಲಾಲ ಭವನ ನಾನಿಲ್ತಾರು ಇಲ್ಲಿ ಜುಲೈ 21, ಆದಿತ್ಯವಾರದಂದು ಜರಗಲಿದೆ ಎಂದು ಸಂಘದ ಅಧ್ಯಕ್ಷರಾದ ಜಯರಾಮ ಕುಲಾಲ್ ಅಗರಟ್ಟ ಪ್ರಕಟಣೆಯಲ್ಲಿ ತಿಳಿಸಿರುವರು.
ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ
Posted On: 19-07-2024 08:21PM
ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಮತ್ತು ಉದ್ಯಾವರ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ನಡೆದ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಪಿ ಜಿಲ್ಲಾಧಿಕಾರಿ ಮಾತನಾಡಿದರು.
ನಾಳೆ (ಜುಲೈ 20) : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Posted On: 19-07-2024 07:57PM
ಉಡುಪಿ : ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಆದೇಶ ಹೊರಡಿಸಿದೆ.
