Updated News From Kaup

ಕಾಪು : ಘಂಟಾನಾದ ಸೇವೆಯಲ್ಲಿ ಇಷ್ಟಾರ್ಥ ಸಿದ್ಧಿ - ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

Posted On: 31-07-2025 04:31PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕುಟುಂಬದ ಎಲ್ಲಾ ಸದಸ್ಯರು ನವದುರ್ಗಾ ಲೇಖನ ಯಜ್ಞದ ಸಂಕಲ್ಪವನ್ನು ಮಾಡಿದರು. ಪತ್ನಿ ರಂಜಿತಾ ರಾಧಾ ದೇವಿಗೆ ಸೀರೆ ಮತ್ತು ಬಾಗಿನ ನೀಡಿದರು. ಪುತ್ರ ವಿಹಾನ್ ಕಾರ್ಣಿಕ್ ಜೊತೆಗಿದ್ದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ "ಅಮ್ಮನ ಅನುಗ್ರಹ ಪ್ರಸಾದ" ನೀಡಿ ಗೌರವಿಸಿದರು.

ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನಾಗರಪಂಚಮಿಯ ಪರ್ವಕಾಲದಲ್ಲಿ ಕಾಪು ಮಾರಿಯಮ್ಮನ ಸನ್ನಿದಾನಕ್ಕೆ ಬಂದಿದ್ದೇನೆ. ಎಲ್ಲಾ ಸೇವೆಯನ್ನು ಮಾಡುವ ಜೊತೆಗೆ ವಿಶೇಷವಾಗಿ ಘಂಟಾನಾದ ಸೇವೆಯನ್ನು ಮಾಡಿದೆನು. ಇಲ್ಲಿನ ಬೃಹತ್ ಘಂಟೆಯನ್ನು ಬಾರಿಸುವ ಮೂಲಕ ನನ್ನ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇನೆ ಎಂದರು. ಅಯೋಧ್ಯೆಯಲ್ಲಿ ದೇಶದ ಪ್ರಥಮ ಬೃಹತ್ ಗಾತ್ರದ ಘಂಟೆ ಇದ್ದರೇ, ಎರಡನೇಯದ್ದು ಉಡುಪಿಯ ಕಾಪುವಿನಲ್ಲಿ ಇರುವಂತದ್ದು. ಘಂಟಾನಾದ ಅದ್ಭುತವಾಗಿದೆ, ಕಂಪನಾಂಶಗಳನ್ನು ಕೇಳುತ್ತಿದ್ದರೇ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್. ಪಾಲನ್, ಗೌರವ ಸಲಹೆಗಾರ ನಿರ್ಮಲ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : 'ಕೋಟಿ ಚೆನ್ನಯೆರ್' ನಾಟಕ ಯಶಸ್ವಿ ಪ್ರದರ್ಶನ

Posted On: 30-07-2025 11:13AM

ಉದ್ಯಾವರ : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್'ದ ಬೀರೆರ್ 'ಕೋಟಿ ಚೆನ್ನಯೆರ್' ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು.

ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸಾರುವ ಉದ್ಯಾನವನದ ನೀಲ ನಕ್ಷೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅನಾವರಣಗೊಳಿಸಿದರು. ಉದ್ಯಾನವನಕ್ಕಾಗಿ ಕಡೆಕಾರಿನಲ್ಲಿ ಸರಕಾರಿ ಭೂಮಿ ಮಂಜೂರಾತಿಗೆ ಸರಕಾರಕ್ಕೆ ಮಾಜಿ ಸಚಿವರ ಮೂಲಕ ಸಂಘಟನೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಈ ಸಂಘಟನೆ ಮಾಡುವ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಶ್ರೀ ನಾರಾಯಣ ಗುರು ಯುವ ವೇದಿಕೆಯ ಗೌರವಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಶ್ರೇಯಸ್ ಕೋಟ್ಯಾನ್, ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಮಿಥುನ್ ಅಮೀನ್, ಭೂ ನ್ಯಾಯ ಮಂಡಳಿ ಸದಸ್ಯ ರೊಯ್ಸ್ ಫೆರ್ನಾಂಡಿಸ್, ಪ್ರಮುಖರಾದ ದಿವಾಕರ್ ಬೊಳ್ಜೆ, ಶಬರೀಶ್ ಸುವರ್ಣ, ಸಚಿನ್ ಸಾಲ್ಯಾನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ದಿವಾಕರ್ ಕಡೆಕಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ

Posted On: 30-07-2025 11:09AM

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, 2 ನೇ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ಕಾರ್ಯದರ್ಶಿಯಾಗಿ ಭಾಸ್ಕರ್ ಎನ್ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕರ್ನಿರೆ, ಕೋಶಾಧಿಕಾರಿಯಾಗಿ ತುಳಸಿ, ಸಂಘಟನಾ ಕಾರ್ಯದರ್ಶಿಯಾಗಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರು ತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಪೂರ್ಣಿಮಾ ವಿಧಿತ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಶ್ರವಣ್ ಕುಮಾರ್, ಸಮಾಜ ಸೇವಾ ನಿರ್ದೇಶಕರು ರಾಜೇಶ್ ಕೆ ಪಲಿಮಾರು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ಲಾವಣ್ಯ, ವಿದ್ಯಾರ್ಥಿ ಸಂಘಟನೆ ಕಾರ್ತಿಕ್ ಮತ್ತು ಸುದೀಪ್, ಮಹಿಳಾ ಸಂಘಟನೆ ಲತಾ ವಸಂತ್, ಪ್ರಚಾರ ನಿರ್ದೇಶಕರು ದೀಪಕ್ ಕರ್ನಿರೆ, ವಿದ್ಯಾ ನಿಧಿ ನಿರ್ದೇಶಕರಾಗಿ ಜೆನಿತ ಪಲಿಮಾರು ಆಯ್ಕೆಯಾಗಿದ್ದಾರೆ.

ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Posted On: 29-07-2025 09:13PM

ಎರ್ಮಾಳು : ಜನ ಕಲ್ಯಾಣಕ್ಕೆ ಪೂರಕವಾದ ಸೇವೆಯನ್ನು ಜನಾರ್ಧನ ಜನ ಕಲ್ಯಾಣ ಸಮಿತಿ ಮಾಡುತ್ತಿದೆ. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಮಾಜದ ಋಣ ತೀರಿಸುವ ಕಾರ್ಯ ಸಮಿತಿ ಮಾಡುತ್ತಿದೆ ಎಂದು ಎರ್ಮಾಳು ಜನಾರ್ಧನ ದೇವಳದ ಅರ್ಚಕರಾದ ವಿಷ್ಣುಮೂರ್ತಿ ಭಟ್ ಹೇಳಿದರು. ಅವರು ಮಂಗಳವಾರ ಜನಾರ್ಧನ ಜನಕಲ್ಯಾಣ ಸೇವಾ ಸಭಾಂಗಣದಲ್ಲಿ ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ.) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿದರು. ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಜಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಋಣಾತ್ಮಕವನ್ನು ಯೋಚಿಸದೆ ಧನಾತ್ಮಕ ಚಿಂತನೆಯ ಮೂಲಕ ಜೀವನದಲ್ಲಿ ಮುಂದೆ ಬರಬೇಕು ಎಂದು  ಹೇಳಿದರು.

 ಸಿ.ಎ.ಪರೀಕ್ಷೆಯಲ್ಲಿ ತೇರ್ಗಡೆಯಾದ ಅನುಷಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.   2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ 100 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ಎಲ್ಯದಡಿ, ಶಶಿಧರ ಶೆಟ್ಟಿ, ಯಶೋಧರ ಶೆಟ್ಟಿ, ಜ್ಯೋತಿ ಶೆಟ್ಟಿ,  ಸಂತೋಷ್ ಶೆಟ್ಟಿ ಬರ್ಪಾಣಿ,  ರಾಕೇಶ್ ಎಲ್ ಶೆಟ್ಟಿ, ತೆಂಕ ಗ್ರಾ.ಪಂ ಅಧ್ಯಕ್ಷೆ ಸುರೇಖ, ಸಮಿತಿಯ ಟ್ರಸ್ಟಿಗಳು ಉಪಸ್ಥಿತರಿದ್ದರು. ಅಮೃತ ಪ್ರಾರ್ಥಿಸಿದರು. ಸುರೇಶ್ ಜಿ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು. ಓಂಕಾರ್ ಕಲಾ ಸಂಗಮ ಪಡುಬಿದ್ರಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕಾಪು ತಾಲೂಕಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ

Posted On: 29-07-2025 03:29PM

ಕಾಪು : ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ಕಾಪು ತಾಲೂಕಿನಾದ್ಯಂತ ಭಕ್ತರು ತಮ್ಮ ಮೂಲ ನಾಗಬನಗಳಿಗೆ ಭೇಟಿಯಿತ್ತು, ತನು ತಂಬಿಲಾದಿ ಸೇವೆ ನೀಡಿ ಸಂಭ್ರಮದಿಂದ ಆಚರಿಸಿದರು.

ಕಾಪು ತಾಲೂಕಿನ ಹೆಜಮಾಡಿ, ಪಡುಬಿದ್ರಿ, ಎಲ್ಲೂರು, ಉಚ್ಚಿಲ, ಶಿರ್ವ, ಕಾಪು ಸೇರಿದಂತೆ ವಿವಿದೆಡೆ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲಾಯಿತು.

ಹಾಲು, ಹೂ, ಸಿಯಾಳ, ಅರಶಿನ ವ್ಯಾಪಾರ ಭರ್ಜರಿಯಾಗಿದ್ದು, ಮಳೆ ಇಲ್ಲದ ಕಾರಣ ಹೆಚ್ಚಿನ ಜನರು ನಾಗಬನಗಳಿಗೆ ಭೇಟಿ ನೀಡಲು ಉಪಯುಕ್ತವಾಯಿತು. ವಾಹನ ಸಂಚಾರ ಹೇರಳವಾಗಿತ್ತು. ಬೆಳಗ್ಗಿನ ಹೊತ್ತು ಪಡುಬಿದ್ರಿ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಸ್ವಲ್ಪ ಕಾಲ ಉಂಟಾಗಿತ್ತು.

ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಲಿ : ವಿನಯ ಕುಮಾರ್ ಸೊರಕೆ

Posted On: 29-07-2025 09:28AM

ಕಾಪು : ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು. ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.   

ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್‌ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.

ಮಂಗಳೂರು - ಉಡುಪಿ ನಡುವೆ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಕ್ಕೆ ಜಯರಾಮ ಆಚಾರ್ಯ ಕಾಪು ಆಗ್ರಹ

Posted On: 29-07-2025 09:20AM

ಕಾಪು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಂಗಳೂರು ಮತ್ತು ಉಡುಪಿ ನಡುವೆ (ಪರಿಸರ ಸ್ನೇಹಿ)ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಿಸಲು ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಕಾಪು ಆಗ್ರಹಿಸಿದ್ದಾರೆ.

45 ಆಸನಗಳು ಮತ್ತು 60-70 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿರುವ ಆರಾಮದಾಯಕ ಎಲೆಕ್ಟ್ರಿಕ್ ಬಸ್ (ಹವಾನಿಯಂತ್ರಿತ) ಪರಿಸರ ಸ್ನೇಹಿ ಮಂಗಳೂರು ಡಿಪೋದಲ್ಲಿ ಲಭ್ಯವಿದ್ದು, ಉಡುಪಿ ಮತ್ತು ಮಂಗಳೂರು ಮದ್ಯೆ ಓಡಾಟ ಪ್ರಾರಂಭಿಸಬೇಕು.

ಒಟ್ಟು 55 ಕಿಮೀ ದೂರವಿದ್ದು, ಪ್ರಮುಖ ನಿಲ್ದಾಣಗಳಲ್ಲಿ ಈ ಹಿಂದೆ ವೊಲ್ವಾ ಬಸ್ಸು ನಿಲುಗಡೆ ಇದ್ದ ಹಾಗೆ ನಿಲುಗಡೆ ನೀಡಬೇಕು. ಇದರಿಂದ ಮಂಗಳೂರು ಮತ್ತು ಉಡುಪಿ ನಡುವಿನ ದೈನಂದಿನ ಪ್ರಯಾಣಿಕರಿಗೆ, ಸಾರ್ವಜನಿಕರಿಗೂ, ಹೆಚ್ಚು ಅನುಕೂಲವಾಗಲಿದೆ.

ಈ ಬಗ್ಗೆ ಸಮಾಜಸೇವಕರಾದ ಕಾಪು ಜಯರಾಮ ಆಚಾರ್ಯರವರು ಕರ್ನಾಟಕ ಸರಕಾರದ ಟ್ರಾನ್ಸ್ಪೋರ್ಟ್ ಮತ್ತು ಮುಜುರಾಯಿ ಇಲಾಖೆ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ವಿನಂತಿಸಿದ್ದಾರೆ.

ಉದ್ಯಮಿ ನಿಶಾಂತ್ ವಿ.‌ ಅಂಚನ್ ಅವರಿಗೆ ಸಾಧನಾಶ್ರೀ ಪುರಸ್ಕಾರ

Posted On: 29-07-2025 08:59AM

ಕಾಪು : ಜೇಸಿಐ ಮಡಂತ್ಯಾರು ಘಟಕದ ಆಶ್ರಯದಲ್ಲಿ ರವಿವಾರ ನಡೆದ ವಲಯ 15ರ "ಮೃದಂಗ" ವ್ಯವಹಾರ ಸಮ್ಮೇಳನದಲ್ಲಿ ಜೇಸಿಐ ಮುಂಡ್ಕೂರು ಭಾರ್ಗವ ಘಟಕದ ಉಪಾಧ್ಯಕ್ಷ, ಉದ್ಯಮಿ ನಿಶಾಂತ್ ವಿ. ಅಂಚನ್ ಅವರನ್ನು ಜೇಸಿಐ ಸಾಧನಾಶ್ರೀ ಪುರಸ್ಕಾರದೊಂದಿಗೆ ಗೌರವಿಸಲಾಯಿತು‌.

ಜೇಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿ.ಎ., ವ್ಯವಹಾರ ವಿಭಾಗದ ವಲಯ ನಿರ್ದೇಶಕ ಅಶೋಕ್ ಗುಂಡ್ಯಲ್ಕೆ, ವಲಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನಿಸಲಾಯಿತು‌.

ನಿಕಟ ಪೂರ್ವ ವಲಯಾಧ್ಯಕ್ಷ ಗಿರೀಶ್ ಎಸ್.ಪಿ., ಪೂರ್ವ ವಲಯಾಧ್ಯಕ್ಷ ಸಂಪತ್‌ ಸುವರ್ಣ, ವಲಯಾಧಿಕಾರಿ ಗಣೇಶ್ ಆಚಾರ್ಯ, ಜೇಸಿಐ ಮುಂಡ್ಕೂರು ಭಾರ್ಗವದ ಅಧ್ಯಕ್ಷ ವಸಂತ್ ಪೂಜಾರಿ, ಜೇಸಿಐ ಮಡಂತ್ಯಾರು ಅಧ್ಯಕ್ಷೆ ಅಮಿತಾ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು‌.

ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ರಾಜೇಶ್ ಐ ದೇವಾಡಿಗ ಹೇರೂರು ಆಯ್ಕೆ

Posted On: 29-07-2025 08:57AM

ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ಗ್ರಾಮದ ಹೇರೂರು ಫ್ರೆಂಡ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ತುಳು ನಾಟಕ ಬರಹಗಾರ ರಾಜೇಶ್ ಐ ದೇವಾಡಿಗ ಇವರು ಅವಿರೋಧವಾಗಿ ಆಯ್ಕೆಯಾಗಿದ್ಧಾರೆ. ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುಧೀರ್ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ನಿರ್ಗಮನ ಅಧ್ಯಕ್ಷರಾದ ಸುರೇಶ್ ಮೂಲ್ಯ ಇವರು ತಮಗೆ ಸಹಕಾರ ನೀಡಿದ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು.

ನೂತನ ಅಧ್ಯಕ್ಷರಾದ ರಾಜೇಶ್ ಇವರು ಮುಂದಿನ ವರ್ಷದಲ್ಲಿ ಸಂಸ್ಥೆಯನ್ನು ಉತ್ತುಂಗಕ್ಕೆ ಏರಿಸುವ ಭರವಸೆ ನೀಡಿದರು. ಸರ್ವ ಸದಸ್ಯರ ಸಹಕಾರ ಆಶಿಸಿದರು.

ರವಿ ದೇವಾಡಿಗ ಪ್ರಾರ್ಥಿಸಿ, ರಾಜೇಶ್ ಜೋಗಿ ಕಾರ್ಯಕ್ರಮ ನಿರೂಪಿಸಿ, ವಿಜಯ್ ಧೀರಜ್ ರವರು ವಂದಿಸಿದರು.

ಕಾಲಾವಧಿ ಆಟಿ ಮಾರಿಪೂಜೆ : ಹರಕೆ ಕೋಳಿ ಸಮರ್ಪಣೆ ಕುರಿತು ಸ್ಪಷ್ಟೀಕರಣ

Posted On: 28-07-2025 07:30PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಜುಲೈ 29 ಮತ್ತು 30ರಂದು ನಡೆಯಲಿರುವ ಕಾಲಾವಧಿ ಆಟಿ ಮಾರಿಪೂಜೆಯಲ್ಲಿ ಹರಕೆ ಕೋಳಿ ಸಮರ್ಪಿಸುವ ಬಗ್ಗೆ ಭಕ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲ ಏರ್ಪಟ್ಟಿದ್ದು, ಈ ಹಿಂದೆ ತಾಯಿ ಮಾರಿಯಮ್ಮನಿಂದ ಊರಿನ ಕೋಳಿ ಹರಕೆಯಾಗಿ ಸಮರ್ಪಿಸುವ ಬಗ್ಗೆ ವಾಕ್ಷ್ಯ ಆಗಿದ್ದರೂ ಸಹ ಆಟಿ ಮಾರಿಪೂಜೆಯಲ್ಲಿ ಈ ಹಿಂದಿನಂತೆಯೇ ಹರಕೆಯ ಕೋಳಿಯನ್ನು ಸಮರ್ಪಿಸಬಹುದಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇವರು ಸ್ಪಷ್ಟೀಕರಣ ನೀಡಿದ್ದಾರೆ.

ಭಕ್ತಾದಿಗಳು ಸಹಕರಿಸಬೇಕಾಗಿ ವಿನಂತಿ.