Updated News From Kaup
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ : 41ನೇ ವಾರ್ಷಿಕೋತ್ಸವ ಸಂಪನ್ನ
Posted On: 18 Dec 2025, 06:22 PM
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ (ರಿ.) ಇದರ 41ನೇ ವಾರ್ಷಿಕೋತ್ಸವ ಸಮಾರಂಭವು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಬಳಿ ನಡೆಯಿತು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಲಭ್ಯ ಸದವಕಾಶವನ್ನು ಬಳಸಿಕೊಂಡು ಸಂಘಟಿತರಾಗಿ ಸಮಾಜಕ್ಕೆ ಆತ್ಮ ಸ್ಥೈರ್ಯ ನೀಡುವಂತಹ ಸಾಧನೆಯ ಮೂಲಕ ಜಿಲ್ಲಾ ರಾಜ್ಯೋತ್ಸವಕ್ಕೆ ಪಾತ್ರರಾಗಿದ್ದು, ಸುವರ್ಣ ಸಂಭ್ರಮದಲ್ಲಿ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿ ಎಂದರು.ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಅಡಳಿತ ಮೊಕ್ತೇಸರರಾದ ಎರ್ಮಾಳು ಬೀಡು ಅಶೋಕ ರಾಜರು ಮಾತನಾಡಿ, ಊರಿಗೆ ಸ್ತ್ರೀಯರೇ ನಿಧಿಯಾಗಿರುವ ಮಹಿಳಾ ಮಂಡಳಿ ಶ್ರೀನಿಧಿ ಮಹಿಳಾ ಮಂಡಳಿಯಾಗಿದ್ದು, ಮತ್ತಷ್ಟು ಸಾಧನೆಗಳ ಮೂಲಕ ಆದ್ದೂರಿಯಾಗಿ ಸುವರ್ಣ ಸಂಭ್ರಮವನ್ನು ಆಚರಿಸುವಂತಾಗಲಿ ಎಂದರು.ಸಮಾರಂಭದಲ್ಲಿ ಸಾಧಕಿಯರಾದ ಆಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪ್ರಶಾಂತ್ ಪೂಜಾರಿ, ಗಿನ್ನೆಸ್ ದಾಖಲೆಯ ಸಾಧಕಿ ವಿದುಷಿ ದೀಕ್ಷಾ ರಾಹುಲ್ ಆವರನ್ನು ಸನ್ಮಾನಿಸಲಾಯಿತು. ಗೃಹ ನಿರ್ಮಾಣಕ್ಕೆ ಮತ್ತು ಅನಾಥಾಶ್ರಮಗಳಿಗೆ ಸುಮಾರು 1.25 ಲಕ್ಷ ರೂ.ಗೂ ಅಧಿಕ ಮೊತ್ತದ ಧನ ಸಹಾಯ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪರಿಸರದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.ಜಿ.ಪಂ. ಮಾಜಿ ಉಪಾಧ್ಯಕ್ಷೆ/ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಮುಂಬೈ ಕಸ್ಟಮ್ಸ್ ನಿವೃತ್ತ ಅಸಿಸ್ಟೆಂಟ್ ಕಮೀಷನರ್ ಎರ್ಮಾಳು ರೋಹಿತ್ ಹೆಗ್ಡೆ, ಪುಣೆ ಹೋಟೆಲ್ ಉದ್ಯಮಿ ಸೀತಾರಾಮ ಎಲ್ ಶೆಟ್ಟಿ ಪುಚ್ಚೊಟ್ಟುಬೀಡು, ಪುಣೆ ಉದ್ಯಮಿ ನಾರಾಯಣ ಶೆಟ್ಟಿ ನೈಮಾಡಿ, ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇದರ ಸಹಾಯಕ ಪ್ರಾಧ್ಯಾಪಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ, ನಿವೃತ್ತ ಉಪಾನ್ಯಾಸಕ ವೈ. ರಾಮಕೃಷ್ಣ ರಾವ್ ಎರ್ಮಾಳು, ಪಡುಬಿದ್ರಿ ನವಶಕ್ತಿ ಮಹಿಳಾ ಮಂಡಳಿ ಆಧ್ಯಕ್ಷೆ ಭಾರತಿ ಜಿ. ಶೆಟ್ಟಿ, ಬಹುಮಾನ ವಿತರಕರಾದ ನಿವೃತ್ತ ಮುಖ್ಯೋಪಾಧ್ಯಾಯಿನಿ ಲಲಿತ ಪ್ರಭಾಕರ್ ರಾವ್ ವೇದಿಕೆಯಲ್ಲಿದ್ದರು.
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ ಆಧ್ಯಕ್ಷೆ ರೇಖಾ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಅಮಣಿ ಕುಂದರ್ ವರದಿ ವಾಚಿಸಿದರು. ಉಪಾಧ್ಯಕ್ಷೆ ವಾಣಿಶ್ರೀ ಗಣೇಶ್, ಕಲಾವತಿ ದಯಾನಂದ್ ಸನ್ಮಾನಿತರನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಅಮೃತಕಲಾ ಶೆಟ್ಟಿ ಪ್ರತಿಭಾ ಪುರಸ್ಕೃತರನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಅಮೃತಕಲಾ ಶೆಟ್ಟಿ ಪ್ರತಿಭಾ ಪುರಸ್ಕೃತರನ್ನು ಪರಿಚಯಿಸಿದರು. ಕೋಶಾಧಿಕಾರಿ ವಿಮಲ ಕೆ. ಸಾಲ್ಯಾನ್ ವಂದಿಸಿದರು. ಮಾಜಿ ಅಧ್ಯಕ್ಷರಾದ ಜ್ಯೋತಿ ಶೆಟ್ಟಿ ನಿರೂಪಿಸಿದರು.ಬಳಿಕ ನೃತ್ಯ ವೈವಿಧ್ಯ, ಕಾಪು ರಂಗತರಂಗ ತಂಡದ ಶೋಬಾಜಿ ತುಳು ನಾಟಕ ಪ್ರದರ್ಶನಗೊಂಡಿತು
ಡಿ. 20 - 21 : ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ವಿವಿಧ ಕಾರ್ಯಕ್ರಮಗಳು
Posted On: 18 Dec 2025, 05:45 PM
ಕಾಪು : ಇಲ್ಲಿನ ವಿದ್ಯಾನಿಕೇತನ ಸಮೂಹ ಸಂಸ್ಥೆಯಲ್ಲಿ ಡಿಸೆಂಬರ್ 20 ರಂದು ವಿದ್ಯಾ ಕಾಸ್ಟ್ಯೂಮ್ ಗಾಲ 2025 (ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ, ಹಾಗೂ ಡಿಸೆಂಬರ್ 21 ರಂದು ವಿದ್ಯೋತ್ಸವ - 2025 (ವಾರ್ಷಿಕೋತ್ಸವ) ಜರಗಲಿದೆ.
ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಮ್ಮ ಕಾಪು ನ್ಯೂಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಡಿ. 21 : ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ
Posted On: 18 Dec 2025, 05:33 PM
ಉಡುಪಿ : ಉಡುಪಿ ಜಿಲ್ಲೆಯ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ ಡಿಸೆಂಬರ್ 21ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಿದೆ. ಈ ಪರೀಕ್ಷೆಯ ಮೂಲಕ ರೂ. 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಈ ವಿದ್ಯಾರ್ಥಿವೇತನ ಪರೀಕ್ಷೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ಇ ಹಾಗೂ ಐಬಿ ಸೇರಿದಂತೆ ಎಲ್ಲಾ ಪಠ್ಯಕ್ರಮಗಳ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿವಿಧ ತರಗತಿಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾದ ಪರೀಕ್ಷೆಯಲ್ಲಿನ ಸಾಧನೆಯ ಆಧಾರದ ಮೇಲೆ ಶುಲ್ಕದಲ್ಲಿ ರಿಯಾಯಿತಿಯನ್ನು ಪಡೆಯಬಹುದು.
ಶಾಲಾ ಆಡಳಿತದ ಪ್ರಕಾರ, ಈ ಉಪಕ್ರಮವು ಶೈಕ್ಷಣಿಕ ಶ್ರೇಷ್ಠತೆಯನ್ನು ಉತ್ತೇಜಿಸುವುದು ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.
ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಆಸನಗಳು ಸೀಮಿತವಾಗಿರುವುದರಿಂದ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ವಿದ್ಯಾರ್ಥಿವೇತನ ಪರೀಕ್ಷೆಯು ಉಡುಪಿಯ ಕೆದಿಯೂರು ಹೋಟೆಲ್ನ ಶೇಷಶಯನ ಸಭಾಭವಮದಲ್ಲಿ ನಡೆಯಲಿದೆ.
ಅರ್ಹತೆ ಮತ್ತು ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆಡಳಿತವನ್ನು ಸಂಪರ್ಕಿಸಬಹುದು.
ಮುಂಡ್ಕೂರು ಮುಲ್ಲಡ್ಕ : ಡಿಸೆಂಬರ್ 21 ರಂದು ಕುಲಾಲ ಕ್ರೀಡಾಕೂಟ
Posted On: 18 Dec 2025, 04:57 PM
ಕಾರ್ಕಳ ತಾಲೂಕಿನ ಕುಲಾಲ ಸಂಘ (ರಿ.) ನಾನಿಲ್ತಾರ್ ಮುಲ್ಲಡ್ಕ ಮೂಂಡ್ಕೂರು ಇದರ ವತಿಯಿಂದ ಯುವ ವೇದಿಕೆ ಆಶ್ರಯದಲ್ಲಿ ಡಿಸೆಂಬರ್ 21ರ ಆದಿತ್ಯವಾರ "ಕುಲಾಲ ಕ್ರೀಡಾಕೂಟ - 2025" ನಡೆಯಲಿದೆ.
ವಾಲಿಬಾಲ್, ಹಗ್ಗಜಗ್ಗಾಟ, ತ್ರೋಬಾಲ್ ಪಂದ್ಯಾಟ ಹಾಗೂ ಇನ್ನಿತರ ಮನರಂಜನೆ ಕ್ರೀಡಾಕೂಟ ದಿವಂಗತ. ಗಿರಿಜಾ ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯರಾಮ ಕುಲಾಲ್ ನಮ್ಮ ಕಾಪು ನ್ಯೂಸ್ ನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಡಿಸೆಂಬರ್ 20: ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ
Posted On: 17 Dec 2025, 08:48 PM
ಕಾಪು: ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರು ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಈ ತಿಂಗಳ 20 ಶನಿವಾರ 2.30ಕ್ಕೆ ನಡೆಯಲಿದೆ.
ತಮ್ಮ ಆಗಮನದ ನಿರೀಕ್ಷೆ ಯಲ್ಲಿ, ಅಧ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು.
ವಿದ್ಯಾವರ್ಧಕ ಸಂಘ(ರಿ) ಕಳತ್ತೂರು.
ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ.
ಮುಖ್ಯ ಶಿಕ್ಷಕರು ಅಧ್ಯಾಪಕರು,ಅಧ್ಯಾಪಕತೇರ ವೃಂದ ಹಾಗೂ ಶಾಲಾ ನಾಯಕ..
ಜನವರಿ 11. ಕುಲಾಲ ಸಂಘ (ರಿ) ಬುಕ್ಕಿಗುಡ್ಡೆ ಪೆರ್ಡೂರು ಅಶ್ರಯದಲ್ಲಿ 3 ನೇ ವರ್ಷದ ಕುಲಾಲ ಟ್ರೋಫಿ 2026
Posted On: 16 Dec 2025, 09:51 PM
ಪೆರ್ಡೂರು: ಕುಲಾಲ ಸಂಘ (ರಿ ) ಬುಕ್ಕಿಗುಡ್ಡೆ ಪೆರ್ಡೂರು, ಕುಲಾಲ ಸೇವಾದಳ ಇವರ ಆಶ್ರಯದಲ್ಲಿ ಜನವರಿ 11 ರಂದು ಪೆರ್ಡೂರು ಪ್ರೌಢ ಶಾಲಾ ಮೈದಾನದಲ್ಲಿ ಕುಲಾಲ ಸಮಾಜ ಬಾಂಧವರಿಗಾಗಿ ಜಿಲ್ಲಾ ಮಟ್ಟದ 90 ಗಜಗಳ ಸೀಮಿತ ಓವರ್ ಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಪೆರ್ಡೂರು ಕುಲಾಲ ಸಂಘ ಪ್ರಕಟಣೆಯಲ್ಕಿ ತಿಳಿಸಿದೆ.
9844616085, 9902205793, 9844552875.
ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಎಚ್ ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬ ಆಚರಣೆ
Posted On: 16 Dec 2025, 07:00 PM
ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರಕಾರದ ಬೃಹತ್ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿಯವರ 66ನೇ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು."
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರಕಾರದ ಬೃಹತ್ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿಯವರ 66ನೇ ಹುಟ್ಟುಹಬ್ಬವನ್ನು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ ಯೋಗೀಶ್ ವಿ. ಶೆಟ್ಟಿ ನೇತೃತ್ವದಲ್ಲಿ ಉಡುಪಿಯ ಆಶಾ ನಿಲಯ ವಿಕಲಚೇತನ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸಿ,ಮಕ್ಕಳಿಗೆ ಮತ್ತು ಸಿಬ್ಬಂಧಿಗಳಿಗೆ ಉಟೋಪಚಾರ ನೀಡಿ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು, ಆಶಾ ನಿಲಯದ ಸಿಬ್ಬಂಧಿ ವರ್ಗದವರು ಸಹಕರಿಸಿದರು.
ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರು ಮಾತನಾಡುತ್ತಾ ಕುಮಾರಣ್ಣನವರು ಕೇಂದ್ರ ಸಚಿವರಾಗಿ, 2 ಸಲ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಟ್ಟಂತಹ ಕೊಡುಗೆ,ಕೇಂದ್ರ ಸಚಿವರಾಗಿ ದೇಶಕ್ಕೆ ಮಾಡಿರುವ ಸೇವೆ ಹಾಗೂ ವಿಶೇಷ ಮಕ್ಕಳು, ವಿಕಲಚೇತನರೆಂದರೆ ಕರುಣೆ ತೋರಿಸುವ ತಾಯಿ ಹೃದಯದ ಕುಮಾರಣ್ಣನವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂತೋಷವಾಗುತ್ತದೆ, ಅವರಿಗೆ ಅರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಭಗವಂತನು ಕರುಣಿಸಲಿ, ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿ ಮುಂದಿನ ದಿನಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಲಿ ಎಂದು ಜಿಲ್ಲಾ ಜನತೆಯ ಪರವಾಗಿ ಶುಭವನ್ನು ಹಾರೈಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾಸುದೇವ ರಾವ್, ಜಯಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಸುಧಾಕರ್ ಶೆಟ್ಟಿ, ಉದಯ್ ಹೆಗ್ಡೆ,ಗಂಗಾಧರ ಬಿರ್ತಿ, ದಕ್ಷಿತ್ ಶೆಟ್ಟಿ, ಉಮೇಶ್ ಕರ್ಕೇರ, ಶಾಲಿನಿ ಆರ್ ಶೆಟ್ಟಿ ಕೆಂಚನೂರು, ದೇವರಾಜ್ ತೊಟ್ಟಮ್, ರಮೇಶ್ ಕುಂದಾಪುರ, ಕಿಶೋರ್ ಬಳ್ಳಾಲ್, ರಾಮರಾವ್ ಉಡುಪಿ, ಕೀರ್ತಿರಾಜ್, ಅಶ್ರಫ್ ಪಡುಬಿದ್ರಿ, ವಿಶಾಲಾಕ್ಷಿ ಶೆಟ್ಟಿ, ವಸಂತಿ, ರಂಗ ಆರ್ ಕೋಟ್ಯಾನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಪಾಯಕಾರಿ ರಸ್ತೆ ವೇಗ ನಿಯಂತ್ರಕ ಅಳವಡಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತಕ್ಕೆ ಕಾಪು ಜಯರಾಮ ಆಚಾರ್ಯ ಅಗ್ರಹ
Posted On: 16 Dec 2025, 06:45 PM
ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು, ಮುಂಭಾಗದಲ್ಲಿರುವ NH:66 ಅಂಡರ್ಪಾಸ್ನಲ್ಲಿರುವ ಡೈವರ್ಶನ್ ನಲ್ಲಿ ಹೆಚ್ಚಿನ ವಾಹನಗಳು ಅತಿಯಾದ ವೇಗದಲ್ಲಿ ಚಲಿಸುತ್ತಿದ್ದು ಇದನ್ನು ಮನವಿ ಪತ್ರದ ಮೂಲಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಸಹಿತವಾಗಿ ಉಡುಪಿ ಜಿಲ್ಲಾಧಿಕಾರಿ, ಕಾಪು ತಹಶೀಲ್ದಾರ್ ಮತ್ತು ಕಾಪು ಪುರಸಭಾ ಮುಖ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ.
ಉಡುಪಿ - ಮಂಗಳೂರಿಗೆ ಸರ್ವಿಸ್ ರಸ್ತೆಗಳಲ್ಲಿ ಎಕ್ಸ್ಪ್ರೆಸ್ ಬಸ್ಗಳು, ಇತರೆ ವಾಹನಗಳು ಯಾವಾಗಲು ಚಲಿಸುತ್ತಿದ್ದು ಇವುಗಳು ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. (ಈ ಪ್ರದೇಶಗಳಲ್ಲಿ ಹಲವು ಅಪಘಾತಗಳು ಸಂಭವಿಸಿವೆ)
ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸಲು, ಸರ್ವಿಸ್ ರಸ್ತೆಗಳ ಎರಡೂ ಬದಿಗಳಲ್ಲಿ ಗುರುತಿಸಲಾದ 4 ಸ್ಥಳಗಳಲ್ಲಿ ಸೂಕ್ತವಾದ ಸಣ್ಣ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಲು ಹಾಗೂ ಚಾಲಕರು ಮತ್ತು ಸಾರ್ವಜನಿಕರು ಅಂಡರ್ಪಾಸ್ ಸಮೀಪಿಸುವಾಗ ಸಂಚಾರ ವೇಗವನ್ನು ನಿಯಂತ್ರಿಸಲು ಅಂಡರ್ಪಾಸ್ ಬದಿ, ಟ್ರಾಫಿಕ್ ಸಿಗ್ನಲ್ ಗಳನ್ನು ಹಾಕುವರೇ ವಿನಂತಿಸುತ್ತೇನೆ.
ಈ ವ್ಯವಸ್ಥೆಯಿಂದ ವಾಹನಗಳು ನಿಧಾನವಾಗಿ ಜನನಿಬಿಡ ಸಂಚಾರ ಪ್ರದೇಶದಲ್ಲಿ ನಿಯಂತ್ರಿತ ವೇಗದೊಂದಿಗೆ ಅಪಘಾತಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅಂತೆಯೇ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬೆಳ್ಳಿ ರಥದಲ್ಲಿ ಶ್ರೀ ದೇವಿಯ ಮೆರವಣಿಗೆ ತಿಂಗಳಿಗೆ ಎರಡು ಬಾರಿ ಅಂಡರ್ ಪಾಸ್ ಮೂಲಕ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ತೆರಳುವುದನ್ನು ದಯವಿಟ್ಟು ಗಮನಿಸಬೇಕು.
ಟ್ರಾಫಿಕ್ ಸ್ಪೀಡ್ ಬ್ರೇಕರ್ ವ್ಯವಸ್ಥೆಯಾದರೆ ಈ ಮಾರ್ಗವನ್ನು ಬಳಸುವ ಎಲ್ಲಾ ಪ್ರಯಾಣಿಕರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುತ್ತದೆ. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕ್ರಮ ಕೈಗೊಳ್ಳಬೇಕು ಎಂದು ಕಾಪು ಜಯರಾಮ ಆಚಾರ್ಯ ಅಗ್ರಹಿಸಿದ್ದಾರೆ.
ಅಕ್ಷತಾ ಪೂಜಾರಿಗೆ ಪೋಲಿಸರಿಂದ ಹಲ್ಲೆ- ವಕೀಲ ಪ್ರವೀಣ್ ಪೂಜಾರಿ ಆಕ್ರೋಶ.
Posted On: 15 Dec 2025, 10:46 AM
ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ದಾಂಧಲೆ ನಡೆಸಿರುವುದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡಿಸಿದೆ.
ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ, ಕೊಡವೂರಿನಲ್ಲಿ ಆರೋಪಿಯ ಮನೆ ಇದ್ದರೂ,ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ,ಕೇವಲ ಪುರುಷ ಪೋಲಿಸರು ನುಗ್ಗಿ,ಅಕ್ಷತಾ ಪೂಜಾರಿ ಎಂಬ ಮುಗ್ದ ಯುವತಿಯನ್ನು ಹಲ್ಲೆ ನಡೆಸಿದ್ದಾರೆ.ನಂತರ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ಹೇಳಿಕೆಯನ್ನು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದಾರೆ.
ಹಲ್ಲೆಯಿಂದ ಗಂಭೀರ ನೋವುಂಟಾಗಿ ಆಕೆಯೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನ್ಯಾಯಕ್ಕೊಳಗಾದ ಕುಟುಂಬದ ಜೊತೆಗೆ ಬಿಲ್ಲವ ವೇದಿಕೆ ನಿಂತಿದ್ದು,ಮಹಿಳಾ ಪೋಲಿಸರಿಲ್ಲದೇ ಅಕ್ರಮವಾಗಿ ಮನೆಗೆ ನುಗ್ಗಿ,ಯುವತಿಗೆ ಹಲ್ಲೆ ನಡೆಸಿದ ಪೋಲಿಸರನ್ನು ಬಂಧಿಸಬೇಕು.ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಲಿದ್ದು, ಪ್ರತಿಭಟನೆಯನ್ನು ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.
ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿ ಸಭೆ
Posted On: 14 Dec 2025, 01:27 AM
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಬಾವಿ ಸಭೆ ಡಿಸೆಂಬರ್ 13ರ ಶನಿವಾರ ನ ಡೆಯಿತು, 3 ದಿನಗಳ ಕಾಲ ಕಾಪು ಸಮುದ್ರ ಕಿನಾರೆಯಲ್ಲಿ ನಡೆಯುವ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜ ಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿ ತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
