Updated News From Kaup

ಜುಲೈ 19 : ಉದ್ಯಾವರದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮ

Posted On: 18-07-2024 09:19PM

ಉದ್ಯಾವರ : ಕರ್ನಾಟಕ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಹಾಗೂ ಗ್ರಾಮ ಪಂಚಾಯತ್ ಉದ್ಯಾವರ ಇವರ ಜಂಟಿ ಆಶ್ರಯದಲ್ಲಿ ಜುಲೈ 19 ಶುಕ್ರವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಬಳಿಯ ಕಾಲೋನಿಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಉಚ್ಚಿಲ ದಸರಾ ಉತ್ಸವ - 2024 ವಿಜ್ರಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ : ಡಾ. ಜಿ. ಶಂಕರ್

Posted On: 18-07-2024 07:53PM

ಉಚ್ಚಿಲ : ಕಳೆದ 2 ವರ್ಷಗಳಲ್ಲಿ ವಿಶ್ವಮಟ್ಟದಲ್ಲಿ ಗುರುತಿಸುವಂತೆ ವೈಭವೋಪೇತ ಹಾಗೂ ಶಿಸ್ತುಬದ್ಧವಾಗಿ ನಡೆದ ಉಚ್ಚಿಲ ದಸರಾವನ್ನು ಈ ಬಾರಿ ಅಕ್ಟೋಬರ್ 3 ರಿಂದ 12ರವರೆಗೆ ಸರ್ವರ ಸಹಕಾರದೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವಿಜ್ರಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ. ದಸರಾ ಯಶಸ್ಸಿಗೆ ಭಕ್ತಾದಿಗಳ ಸಹಕಾರ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಕ್ಷೇತ್ರಾಡಳಿತ ಸಮಿತಿ, ಉಚ್ಚಿಲ ದಸರಾ ಸಮಿತಿಯ ಸಹಯೋಗದೊಂದಿಗೆ ಬುಧವಾರ ಉಚ್ಚಿಲ ಮೊಗವೀರ ಭವನದ ಶಾಲಿನಿ ಜಿ. ಶಂಕರ್ ವೇದಿಕೆಯಲ್ಲಿ ನಡೆದ ಉಚ್ಚಿಲ ದಸರಾ-2024 ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಭಾರತ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ - ವಾರ್ಷಿಕ ಮಹಾಸಭೆ, ಪುನಶ್ಚೇತನ ಕಾರ್ಯಾಗಾರ

Posted On: 18-07-2024 07:40PM

ಉಡುಪಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ ಇದರ ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಕಾರ್ಯಾಗಾರ ಜರಗಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಸಮಾಜ ಸೇವಕ ಫಾರೂಕ್ ಚಂದ್ರನಗರ ನೇಮಕ

Posted On: 18-07-2024 07:29PM

ಕಾಪು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ ಎಂದು ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸ ತಿಳಿಸಿದ್ದಾರೆ.

ನಾಳೆ (ಜುಲೈ 19) : ರೆಡ್ ಅಲಟ್೯ - ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

Posted On: 18-07-2024 07:23PM

ಉಡುಪಿ : ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದ ರೆಡ್ ಅಲಟ್೯ ಇರುವ ಕಾರಣ ಶುಕ್ರವಾರ (ಜುಲೈ 19) ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.

ಕಟಪಾಡಿ : ಕೆ ಸುಧಾಕರ ಪೈ ನಿಧನ

Posted On: 17-07-2024 08:14PM

ಕಟಪಾಡಿ : ಇಲ್ಲಿಯ ವಿಜಯಾ ಇಂಡಸ್ಟ್ರೀಸ್ ಮತ್ತು‌ ವಿಜಯ‌ ಸೋಲಾರ್ ಸಂಸ್ಥೆಯ ಸ್ಥಾಪಕ ಕೆ.ಪುರುಷೋತ್ತಮ ಪೈ ಅವರ ಪುತ್ರ ದುಬೈ ಉದ್ಯಮಿ ಕೆ ಸುಧಾಕರ ಪೈ(58) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಒಂದು ಜಿಲ್ಲೆ ಒಂದು ತಾಣ ಕಾಪು ತಾಲೂಕು ಆಯ್ಕೆ

Posted On: 17-07-2024 12:18PM

ಕಾಪು : ಇಲ್ಲಿನ ಲೈಟ್‌ಹೌಸ್ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ. ಇದರಿಂದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಇಲ್ಲವಾಗಿದೆ. ಕಾಪು ಲೈಟ್‌ ಹೌಸ್ ಮತ್ತು ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭೆಯಲ್ಲಿ ಆಗ್ರಹಿಸಿದರು.

ಕಟಪಾಡಿ : ಕಾರುಗಳ ನಡುವೆ ಸರಣಿ ಅಪಘಾತ

Posted On: 17-07-2024 11:44AM

ಕಟಪಾಡಿ : ಉಡುಪಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕರ್ತವ್ಯ ನಿರತ ಪೊಲೀಸ್ ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲ್ಕೊರೆತಕ್ಕೆ ತಡೆಕಲ್ಲು - ಡಿ.ಸಿ, ತಹಶಿಲ್ದಾರ್ ಭೇಟಿ

Posted On: 16-07-2024 11:01PM

ಪಡುಬಿದ್ರಿ : ಇಲ್ಲಿನ ನಡಿಪಟ್ಣದಲ್ಲಿ ಕಡಲ್ಕೊರೆತ ಉಂಟಾಗಿದ್ದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಪು ತಾಲ್ಲೂಕು ತಹಶಿಲ್ದಾರರಾದ ಡಾ.ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜುಲೈ 18 : ಪಲಿಮಾರು ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

Posted On: 16-07-2024 09:04PM

ಪಲಿಮಾರು : ಇಲ್ಲಿನ ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ ಜುಲೈ 18 ರಂದು ಪೂರ್ವಾಹ್ನ ಗಂಟೆ 11ಕ್ಕೆ ಪಲಿಮಾರು ಗ್ರಾಮ ಪಂಚಾಯತ್ ನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.