Updated News From Kaup
ಕಂಚಿನಡ್ಕ ರಾಜ್ಯ ಹೆದ್ದಾರಿ ಟೋಲ್ : ಪಡುಬಿದ್ರಿ ರೋಟರಿ, ಲಯನ್ಸ್, ಜೆಸಿಐ ಸಂಸ್ಥೆಗಳಿಂದ ಪ್ರತಿಭಟನೆಗೆ ಸಹಕಾರ
Posted On: 17 Aug 2024, 06:46 PM
ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ರಾಜ್ಯ ಹೆದ್ದಾರಿಯ ಟೋಲ್ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು ಇದನ್ನು ವಿರೋಧಿಸುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳಾದ ಪಡುಬಿದ್ರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಲಯನ್ಸ್ ಸ್ಫೂರ್ತಿ, ಜೆಸಿಐ ಪಡುಬಿದ್ರಿ ಶನಿವಾರ ಪಡುಬಿದ್ರಿ ಸೊಸೈಟಿ ಸಭಾಂಗಣದಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜೆಸಿಐ ಪಡುಬಿದ್ರಿ ಸಂಸ್ಥೆಯ ಪ್ರಮುಖರಾದ ವೈ ಸುಕುಮಾರ್ ಮಾತನಾಡಿ, ಅಭಿವೃದ್ಧಿಯ ಹೆಸರಲ್ಲಿ ಸರಕಾರವು ಕೇಂದ್ರ ಮತ್ತು ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಮಾಡುತ್ತಿದ್ದು, ಇದು ಜನ ಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನೀನ್ ಅರಾ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಜಿಲ್ಲೆಗೆ 2 ಟೋಲ್ ಈಗಾಗಲೇ ಇದೆ. ಈಗಾಗಲೇ ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿಗೆ ಹೆಜಮಾಡಿಯಲ್ಲಿ ಟೋಲ್ ಸಂಗ್ರಹ ಅಗುತ್ತಿದೆ. ಇದು ಹಗಲು ದರೋಡೆಯಾಗಿದೆ. ಹೆಜಮಾಡಿಯಿಂದ ಪಡುಬಿದ್ರಿ ಕಂಚಿನಡ್ಕಕ್ಕೆ ಕೇವಲ 5 ಕಿಲೋ ಮೀಟರ್ ಅಂತರವಿದ್ದು ಮತ್ತೆ ರಾಜ್ಯ ಟೋಲ್ ನಿಯಮಕ್ಕೆ ಮುಂದಾಗಿರುವುದು ಹಾಸ್ಯಾಸ್ಪದವಾಗಿದೆ ಎಂದರು. ಲಯನ್ಸ್ ಕ್ಲಬ್ ಜಿಲ್ಲಾ ಕೋರ್ಡಿನೇಟರ್ ಮಿಥುನ್ ಆರ್ ಹೆಗ್ಡೆ, ಮಾತನಾಡಿ ಯಾವುದೇ ಕಾರಣಕ್ಕೂ ಇನ್ನೊಂದು ಟೋಲ್ ಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆಯಲ್ಲಿ ಕಾರ್ಕಳದಿಂದ ಪಡುಬಿದ್ರಿವರೆಗಿನ ನಮ್ಮ ಸಂಸ್ಥೆಯ ಘಟಕಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು. ಜೆಸಿಐ ಪಡುಬಿದ್ರಿ ಅಧ್ಯಕ್ಷ ಸಂಜಿತ್ ಎರ್ಮಾಳು ಮಾತನಾಡಿ, ಈಗಾಗಲೇ ಹೆಜಮಾಡಿಯಲ್ಲಿ ಟೋಲ್ ಗೇಟ್ ಇದ್ದು, 60 ಕಿ.ಮೀ. ಒಳಗೆ ಇನ್ನೊಂದು ಸುಂಕ ವಸೂಲಿ ಕೇಂದ್ರ ಇರಲು ಸಾಧ್ಯವಿಲ್ಲ. ಅದರಲ್ಲೂ ಕಂಚಿನಡ್ಕ ಮತ್ತು ಹೆಜಮಾಡಿಗೆ ಕೇವಲ 5 ಕಿ.ಮೀ ಅಂತರ ಇದು ಜನರಿಗೆ ಹೊರೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನೀನ್ ಅರಾ, ಲಯನ್ಸ್ ಕ್ಲಬ್ ಜಿಲ್ಲಾ ಕೋರ್ಡಿನೇಟರ್ ಮಿಥುನ್ ಆರ್ ಹೆಗ್ಡೆ, ಲಯನ್ಸ್ ಪಡುಬಿದ್ರಿ ಅಧ್ಯಕ್ಷ ಸಂಪತ್ ಪಡುಬಿದ್ರಿ, ಕಾರ್ಯದರ್ಶಿ ಪ್ರಗತ್ ಗೋಪಾಲ್ ಶೆಟ್ಟಿ, ಕೋಶಾಧಿಕಾರಿ ಕಪಿಲ್, ಲಯನ್ಸ್ ಸ್ಫೂರ್ತಿ ಕ್ಲಬ್ ಅಧ್ಯಕ್ಷೆ ಸ್ನೇಹ ಪ್ರವೀಣ್, ಕೋಶಾಧಿಕಾರಿ ಕಸ್ತೂರಿ ಪ್ರವೀಣ್, ಜೆಸಿಐ ಪಡುಬಿದ್ರಿ ಅಧ್ಯಕ್ಷ ಸಂಜಿತ್ ಎರ್ಮಾಳು, ಜೆಸಿಐ ಪ್ರಮುಖ ವೈ ಸುಕುಮಾರ್ ಉಪಸ್ಥಿತರಿದ್ದರು.
ಎರ್ಮಾಳು : ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕ ಅನಾವರಣ
Posted On: 16 Aug 2024, 10:53 PM
ಎರ್ಮಾಳು : ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಎರ್ಮಾಳು ರಾಮಪ್ಪ ಜಿ. ಸಾಲ್ಯಾನ್ರವರ ಮನೆಯಲ್ಲಿ ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಗುರುವಾರ ಜರಗಿತು. ಪತ್ರಕರ್ತ ಚೇತನ್ ಶೆಟ್ಟಿ ರಾಷ್ಟ್ರಧ್ವಜಕ್ಕೆ ಪುಷ್ಪಾಚ೯ನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾನಪದ ವಿದ್ವಾಂಸ ಡಾ. ವೈ .ಎನ್ . ಶೆಟ್ಟಿ ನಾಮಫಲಕ ಅನಾವರಣ ಮಾಡಿದರು. ಸ್ವರಾಜ್ಯ 75, ಪೂಣ೯ ಪ್ರಜ್ಞ ಪದವಿ ಪೂವ೯ ಕಾಲೇಜು ಅದಮಾರು ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಹಸ್ತ ಚಿತ್ರ ಫೌಂಡೇಶನ್ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡು ಗಿಳಿಯಾರು, ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕ, ಎರ್ಮಾಳು ಬಡಾ ಮೊಗವೀರ ಸಭಾ ಸಂಘಟನೆಯ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಯರ ಕೊಡುಗೆಯೊಂದಿಗೆ ಎಮಾ೯ಳು ರಾಮಪ್ಪ ಜಿ ಸಾಲ್ಯಾನ್ ರವರ ಸ್ವಾತಂತ್ರ್ಯಹೋರಾಟದ ವಿಚಾರದ ಕುರಿತು ಕು. ಕವಿತಾ ಆಚಾಯ೯ ಮುದೂರು ಉಪನ್ಯಾಸಗೈದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ, ಅದಮಾರು ಕಾಲೇಜು ಪ್ರಾಂಶುಪಾಲರಾದ ಸಂಜೀವ ನಾಯ್ಕ, ಉಪನ್ಯಾಸಕ ಡಾ. ಜಯಶಂಕರ ಕಂಗಣ್ಣಾರು, ಮೊಗವೀರ ಮುಖಂಡ ಲಕ್ಷ್ಮಣ ಸುವಣ೯, ಶಾರದಾ ಎರ್ಮಾಳು, ಸ್ವರಾಜ್ಯ 75 ಸಂಚಾಲಕ ಪ್ರದೀಪ್ ಕುಮಾರ್ ಬಸ್ರೂರು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ವಹಿಸಿದ್ದರು. ಕಾಯ೯ಕ್ರಮದಲ್ಲಿ ವಿಧ್ಯಾಥಿ೯ಗಳು, ಹೋರಾಟಗಾರ ಎರ್ಮಾಳು ರಾಮಪ್ಪ ಜಿ. ಸಾಲ್ಯಾನ್ ಕುಟುಂಬಸ್ಥರು, ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು, ಕೇಶವ ಮೊಯಿಲಿ, ಶಿಕ್ಷಕ ಬಾಬುರಾಯ ಆಚಾರ್ಯ, ಬಡಾ ಗ್ರಾಮ ಪಂಚಾಯತ್ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಮನೀಷ್ ಸ್ವಾಗತಿಸಿದರು. ಕು. ಪ್ರೀಶ ನಿರೂಪಿಸಿದರು. ಕು. ಹಷಿ೯ತಾ ವಂದಿಸಿದರು.
ಶಿರ್ವ ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ : ಸ್ವಾತಂತ್ರ್ಯೋತ್ಸವ ಆಚರಣೆ ; ಆಕ್ಸಿಲಿಯಮ್ ನಿವಾಸ ಭೇಟಿ
Posted On: 16 Aug 2024, 10:16 PM
ಶಿರ್ವ : ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆ ವತಿಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಕ್ಸಿಲಿಯಮ್ ನಿವಾಸ ಶಿರ್ವ ಇಲ್ಲಿನ 43 ಮಕ್ಕಳಿಗೆ ಬೆಡ್ಶೀಟ್ ಮತ್ತು ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಶಿರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ| ಲೆಸ್ಲಿ ಡಿಸೋಜ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಪೂಜಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಲ್ಸನ್ ರೋಡ್ರಿಗಸ್, ಪಂಚಾಯತ್ ಸದಸ್ಯೆ ಜೆಸಿಂತಾ ಡಿಸೋಜ, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ಆರಾನ್ಹ, ಉಪಸ್ಥಿತರಿದ್ದರು. ಆಕ್ಸಿಲಿಯಮ್ ಕಾನ್ವೆಂಟಿನ ಮೇಲ್ವಿಚಾರಕಿ ಸೀ.ಲೀಮಾ, ಧರ್ಮ ಭಗಿನಿಯರು, ಶಿರ್ವ ಶಾಖೆಯ ಸಿಬ್ಬಂದಿಗಳು ಸಹಕಾರ ನೀಡಿದರು. ಸೈಂಟ್ ಮಿಲಾಗ್ರಿಸ್ ಸಹಕಾರಿ ಶಿರ್ವ ಶಾಖಾ ವ್ಯವಸ್ಥಾಪಕಿ ಪ್ರಮೀಳ ಲೋಬೋ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕ ವಿಲ್ಸನ್ ಡಿಸೋಜ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ಬ್ಲೆಸ್ಸಿ ಜಾಜ್೯ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಗಾಯನ, ನೃತ್ಯರೂಪಕ ಜರಗಿತು.
ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು : 78ನೇ ಸ್ವಾತಂತ್ರ್ಯೋತ್ಸವ ಆಚರಣೆ
Posted On: 15 Aug 2024, 11:16 PM
ಕಾಪು : ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸೇವಾದಳದ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು ಮತ್ತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಮ್ಸಿ ಅಧ್ಯಕ್ಷರು, ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿ ವೃಂದ, ಪೋಷಕರು ಉಪಸ್ಥಿತರಿದ್ದರು.
ಪಡುಬಿದ್ರಿಯ ಕಂಚಿನಡ್ಕ ಟೋಲ್ ಗೇಟ್ : ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ - ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
Posted On: 15 Aug 2024, 11:10 PM
ಪಡುಬಿದ್ರಿ : ರಾಜ್ಯ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು. ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ. ಕಳೆದ ತಿಂಗಳು ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕಾಲೇಜಿನ ರದ್ದತಿ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊಟ್ಟ ಮಾತಿನಂತೆ ನಡೆದ ಫಲವಾಗಿ ಇಂದು ನೌಕರರು ನೆಮ್ಮದಿಯಿಂದ ಇದ್ದಾರೆ. ಈಗ ಟೋಲ್ ಗೇಟ್ ವಿಚಾರದಲ್ಲಿ ಜನರ ಪರ ಇರುವೆ ಎಂದು ಸಚಿವರು ತಿಳಿಸಿದರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಆಗಸ್ಟ್ 24ರ ಸಾರ್ವಜನಿಕ ಪ್ರತಿಭಟನೆಯ ಕಾವು ಏರುತ್ತಿದೆ. ಪಡುಬಿದ್ರಿಯಿಂದ ಕಾರ್ಕಳದವರೆಗೂ ಇರುವ ಸುಮಾರು 40 ಗ್ರಾಮಗಳ ಜನತೆಗೆ ಕಬ್ಬಿಣದ ಕಡಲೆಯಾಗಬಲ್ಲ ಕಂಚಿನಡ್ಕ ಟೋಲ್ಗೇಟ್ ತಮಗೆ ಬೇಡವೇ ಬೇಡ ಎಂದರು. ಹೋರಾಟ ಸಮಿತಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಅವರು ಮಾತನಾಡಿ, ನಾವು ಪ್ರಸ್ತಾವಿತ ಟೋಲ್ಗೇಟ್ಗೆ ಸಂಪೂರ್ಣ ವಿರೋಧ ವ್ಯಕ್ತ ಪಡಿಸುತ್ತೇವೆ ಎಂದರು. ಸಮಿತಿಯು ಸಿದ್ಧಪಡಿಸಿದ ಈ ಕುರಿತಾದ ಮನವಿಯೊಂದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಸಂದರ್ಭ ಅವರಿಗೆ ನೀಡಲಾಯಿತು ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಕುಮಾರ್, ಉಡುಪಿ ಜಿ. ಪಂ. ಸಿಇಒ ಪ್ರತೀಕ್ ಬಾಯಲ್, ನೂರಾರು ಮಂದಿ ಪ್ರತಿಭಟನಾಕಾರು ಉಪಸ್ಥಿತರಿದ್ದರು. ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಪಡುಬಿದ್ರಿ ರೈಲು ನಿಲ್ದಾಣದಲ್ಲಿ ಮತ್ಸ್ಯಗಂಧ ನಿಲುಗಡೆಗೆ ರೈಲ್ವೆ ಸಚಿವರಿಗೆ ಕಾಪು ಶಾಸಕರಿಂದ ಮನವಿ
Posted On: 15 Aug 2024, 10:56 PM
ಕಾಪು : ಪಡುಬಿದ್ರಿ - ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ ಲೋಕಮಾನ್ಯ ತಿಲಕ್ ಮತ್ಸ್ಯಗಂಧ ರೈಲು ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಗುರುವಾರ ಸಂಜೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣನವರಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ ಸಲ್ಲಿದರು. ಕಾಪು ಮಂಥನ ಬೀಚ್ ರಿಸಾರ್ಟ್ಗೆ ಔಪಚಾರಿಕ ಭೇಟಿ ಸಂದರ್ಭ ಮನವಿ ನೀಡಿದರು. ಮನವಿಯಲ್ಲಿ, ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಣಿಯೂರು ಗ್ರಾಮದಲ್ಲಿರುವ ಪಡುಬಿದ್ರಿ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ ಲೋಕಮಾನ್ಯ ತಿಲಕ್ ಮತ್ಸ್ಯಗಂಧ ರೈಲ್ವೆ ನಿಲುಗಡೆಗೆ ಅವಕಾಶ ನೀಡಬೇಕು. ಉಚ್ಚಿಲ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ತೆಂಕ, ಬೆಳಪು, ಶಿರ್ವ, ಮುದರಂಗಡಿ ಹಾಗೂ ಕಾರ್ಕಳದ ಕಡೆಯಿಂದ ನೂರಾರು ಜನರು ಮಂಬಯಿಗೆ ಪ್ರವಾಸ ಬೆಳೆಸಲು, ದೂರದ ಉಡುಪಿ ಅಥವಾ ಮೂಲ್ಕಿ ನಿಲ್ದಾಣಕ್ಕೆ ಹೋಗಬೇಕಿದೆ. ಮುಂಬಯಿಯಿಂದ ಪ್ರಯಾಣಿಸುವರಿಗೆ ಪಡುಬಿದ್ರಿ - ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೊಂಡರೆ ಸಹಕಾರಿ ಆಗಲಿದೆ. ತಾವು ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ ಮತ್ಸ್ಯಗಂಧ ರೈಲು ನಿಲುಗಡೆಗೆ ಅವಕಾಶ ಕಲ್ಪಿಸುವಲ್ಲಿ ಸೂಕ್ತ ಕ್ರಮ ವಹಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಪುರಸಭಾ ಸದಸ್ಯರಾದ ಹರಿಣಾಕ್ಷಿ, ಶೈಲೇಶ್, ರತ್ನಾಕರ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ರೈತ ಮೋರ್ಚಾದ ಕೃಷ್ಣ ರಾವ್, ಹರೀಶ್ ಶೆಟ್ಟಿ ಗುರ್ಮೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಕಾಪು ಕಳತ್ತೂರು : 78ನೇ ಸ್ವಾತಂತ್ರೋತ್ಸವ ಆಚರಣೆ
Posted On: 15 Aug 2024, 10:45 PM
ಕಾಪು : ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಹಾಗೂ ಫ್ರೆಂಡ್ಸ್ ಕ್ಲಬ್ ಕಳತ್ತೂರು ಜಂಟಿಯಾಗಿ ಆಯೋಜಿಸಿದ್ದ 78ನೇ ಸ್ವಾತಂತ್ರೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ರಾಜ್ಯ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರಾದ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಕುಶಲ ಶೇಖರ್ ಶೆಟ್ಟಿ ಅಡಿಟೋರಿಯಂನ ಆಡಳಿತ ನಿರ್ದೇಶಕ ಶೇಖರ್ ಬಿ.ಶೆಟ್ಟಿ ಕಳತ್ತೂರು, ಕುತ್ಯಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಜನಾರ್ಧನ್ ಆಚಾರ್ಯ, ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರೋಹಿತ್, ರಂಗನಾಥ ಶೆಟ್ಟಿ, ಸುನೀತ ರಂಗನಾಥ ಶೆಟ್ಟಿ, ಅಮರನಾಥ ಶೆಟ್ಟಿ ಪಾಂಗಾಳ, ಸುಂದರ್ ರ ಬಿ. ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಶಶಾಂಕ್ ಮಡಿವಾಳ ವಂದಿಸಿದರು.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ : 78ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 05:03 PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ನೆರವೇರಿಸಿದರು. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕರುಣಾಕರ್ ಎಮ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೆ ಪಿಸಿ ಸಿ ಸಂಯೋಜಕರಾದ ನವೀನ್ ಚಂದ್ರ ಜೆ ಶೆಟ್ಟಿ, ವೈ ಸುಕುಮಾರ್, ನವೀನ್ ಎನ್ ಶೆಟ್ಟಿ, ಅಬ್ದುಲ್ ರೆಹಮಾನ್, ರಮೀಜ್ ಹುಸೇನ್, ನಿಯಾಝ್, ಕೀರ್ತಿ ಕುಮಾರ್, ದಿನೇಶ್ ಕಂಚಿನಡ್ಕ, ಸಂಜೀವಿ ಪೂಜಾರಿ, ಲಿಯಾತತ್, ಮುನ್ನ, ಜ್ಯೋತಿ ಮೆನನ್, ವೈ ಸುಧೀರ್ ಕುಮಾರ್, ಸುಚರಿತ,, ಸುನಂದಾ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಧಾಕರ್ ಕೆ ನಿರೂಪಿಸಿ, ವಂದಿಸಿದರು.
ಕಾಪು : ದಂಡತೀರ್ಥ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 04:32 PM
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾಪು ರೋಟರಿ ಕ್ಲಬ್ ನ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಇವರು ಮಾತನಾಡಿ, ದೇಶದಾದ್ಯಂತ ಇಂದು ಶಾಲಾ-ಕಾಲೇಜು, ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ - ಬಲಿದಾನಗೈದ ವೀರ ನಾಯಕರನ್ನು ಸ್ಮರಿಸುತ್ತಿದ್ದೇವೆ. ವಿದ್ಯಾರ್ಥಿಗಳಾದ ತಾವು ಇಂತಹ ನಾಯಕರ ದೇಶಭಕ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಮೂಡಿಬರಬೇಕು ಹಾಗೂ ಪರಸ್ಪರ ಸಮಾನತೆ, ಪ್ರೀತಿ, ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಸಂದೇಶವನ್ನು ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಚಾಲಕರಾದ ಡಾ| ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು. ಸಮಾರಂಭದಲ್ಲಿ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ಹಾಗೂ ಶಿಕ್ಷಕ - ಶಿಕ್ಷಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ರಿತಿಕಾ. ಆರ್. ಶೆಟ್ಟಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಕುಶಿ. ಆರ್. ಶೆಟ್ಟಿ ಸ್ವಾಗತಿಸಿ, ಶಿಫಾನ ವಂದಿಸಿದರು. ಕಾರ್ಯಕ್ರಮವನ್ನು ಅಮೂಲ್ಯ ರಾವ್ ನಿರೂಪಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು : ಆನ್ ಲೈನ್ ವ್ಯಾಸಂಗ, ಸಮಾಲೋಚನೆ ಕೋರ್ಸ್ಗಳ ಆರಂಭ
Posted On: 15 Aug 2024, 04:21 PM
ಉಚ್ಚಿಲ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಐ.ಐ.ಟಿ - ಮದ್ರಾಸ್ ಇವರಿಂದ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್ಗಳ ಆರಂಭ ಸಮಾರಂಭ ಗುರುವಾರ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಐ.ಐ.ಟಿ - ಮದ್ರಾಸ್ ಇವರಿಂದ ನೀಡುವ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಅಧ್ಯಕ್ಷರಾದ ಡಾ. ಹೆಜ್.ಎಸ್ ಶೆಟ್ಟಿ, ಐ.ಐ.ಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಚನೈ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಂ.ಜೆ ಶಂಕರಮಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಹೊಸ ಹೊಸ ದಿಗಂತ ಕನ್ನಡ ದೈನಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪಿ.ಎಸ್ ಪ್ರಕಾಶ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಕೆ ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ಐ.ಐ.ಟಿ ಮದ್ರಾಸ್ ಮುಖ್ಯ ನಿರ್ವಹಣಾಧಿಕಾರಿಗಳಾದ ಜಿ. ವೀರರಾಘವನ್ ಉಪಸ್ಥಿತರಿದ್ದರು.
