Updated News From Kaup

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ಗಿರಿಧರ್ ಎಸ್. ಸುವರ್ಣ ಮೂಳೂರು ಆಯ್ಕೆ

Posted On: 16-07-2024 08:52PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ 2024-2027 ನೇ ಸಾಲಿನ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರಾಗಿ ಗಿರಿಧರ್ ಎಸ್. ಸುವರ್ಣ ಮೂಳೂರು ಇವರು ಸರ್ವಾನುಮತದಿಂದ ನಿಯುಕ್ತಿಗೊಂಡಿರುತ್ತಾರೆ.

ಕಾಪು : ಕುತ್ಯಾರು, ಮೂಡಬೆಟ್ಟುವಿನಲ್ಲಿ ಮರ ಬಿದ್ದು ಹಾನಿ ; ತಹಶಿಲ್ದಾರ್ ಡಾ. ಪ್ರತಿಭಾ ಆರ್. ಭೇಟಿ

Posted On: 16-07-2024 08:35PM

ಕಾಪು : ತಾಲೂಕಿನಲ್ಲಿ ಮಳೆ ಗಾಳಿಗೆ ಕುತ್ಯಾರು ಗ್ರಾಮದಲ್ಲಿ ಮನೆಯೊಂದಕ್ಕೆ ಮತ್ತು ಮೂಡಬೆಟ್ಟು ಗ್ರಾಮದಲ್ಲಿ ರಸ್ತೆಗೆ ಮರ ಬಿದ್ದು ತೊಂದರೆಯಾಗಿದ್ದು ತಾಲೂಕು ಆಡಳಿತ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಿದೆ.

ಶಿರ್ವ : ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ "ಹ್ಯಾಕಥಾನ್"ನಲ್ಲಿ ಪ್ರಶಸ್ತಿ

Posted On: 16-07-2024 11:46AM

ಶಿರ್ವ : ಎ. ಜೆ. ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ (IEEE) ವಿದ್ಯಾರ್ಥಿ ಘಟಕವು ಜುಲೈ 13ರಂದು ಆಯೋಜಿಸಿದ್ದ “ಸಂಕಲ್ಪಾ 2024” (8 ಗಂಟೆಗಳ ಹ್ಯಾಕಥಾನ್)ದಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶೀನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಭಾಗವಹಿಸಿ ಪ್ರಥಮ ಸ್ಥಾನಗಳಿಸಿರುತ್ತಾರೆ.

ಉಡುಪಿ : ಮನೆಯೇ ಗ್ರಂಥಾಲಯ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

Posted On: 16-07-2024 11:12AM

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ "ಮನೆಯೇ ಗ್ರಂಥಾಲಯ" ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು.

ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲ್ಕೊರೆತ ; ಅಪಾಯದಂಚಿನಲ್ಲಿ ಮೀನುಗಾರಿಕಾ ಶೆಡ್

Posted On: 16-07-2024 10:21AM

ಪಡುಬಿದ್ರಿ : ಇಲ್ಲಿನ ಕಡಲ ತೀರದ ನಡಿಪಟ್ಣದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಇದರ ಪರಿಣಾಮವಾಗಿ ಪಡುಬಿದ್ರಿಯ ಸುಮಾರು 50 ಕುಟುಂಬದ ಜೀವನವನ್ನು ಅವಲಂಬಿಸಿರುವ ನಾಡದೋಣಿ ಮಹೇಶ್ವರಿ ಡಿಸ್ಕೊ ಫಂಡ್ ನ ಮೀನುಗಾರಿಕೆಯ ಶೆಡ್ ಅಪಾಯದಂಚಿನಲ್ಲಿದೆ.

ಪಡುಬಿದ್ರಿ ಸಿ.ಎ.ಸೊಸೈಟಿ : ನೂತನ ಎಲೆಕ್ಟ್ರಿಕಲ್ ಸ್ಕೂಟರ್ ಡೀಲರ್ ಶಿಪ್ ಯೋಜನೆಗೆ ಚಾಲನೆ

Posted On: 16-07-2024 09:35AM

ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.), ಇ- ಅಶ್ವ ಆಟೋಮೇಟಿವ್ ಇವರೊಂದಿಗೆ ಆರಂಭಿಸಿರುವ ನೂತನ ಯೋಜನೆ ಎಲೆಕ್ಟ್ರಿಕಲ್ ಸ್ಕೂಟರ್ ಡೀಲರ್ ಶಿಪ್ ಸೋಮವಾರದಂದು ಸೊಸೈಟಿಯ ಸಿಟಿ ಶಾಖೆಯ ಆವರಣದಲ್ಲಿ ಶುಭಾರಂಭಗೊಂಡಿತು. ಇ–ಅಶ್ವ ಆಟೋಮೇಟೀವ್ ನ ಪಾಲುದಾರರಾದ ಕಪಿಲ್ ಕುಮಾರ್ ಹಾಗೂ ಜಗದೀಪ್ ಡಿ. ಸುವರ್ಣ ಸ್ಕೂಟರ್ ನ ಕೀಯನ್ನು ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಇವರಿಗೆ ಹಸ್ತಾಂತರಿಸುವ ಮೂಲಕ ಯೋಜನೆಯು ಚಾಲನೆಗೊಂಡಿತು.

ಜನತೆಯ ಸಂಕಷ್ಟಗಳಿಗೆ ಹಾಗೂ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತೇನೆ : ಐವನ್ ಡಿಸೋಜ

Posted On: 16-07-2024 09:31AM

ಹೆಜಮಾಡಿ : ಅವಿನಾಭಾವ ಸಂಬಂಧವಿರುವ ಕಾಪು ಕ್ಷೇತ್ರದ ಹೆಜಮಾಡಿ ಭಾಗದಲ್ಲಿ ಅಭಿನಂದನೆ ಸ್ವೀಕರಿಸುವುದು ನನ್ನ ಭಾಗ್ಯ. ಈ ಭಾಗದ ಜನತೆಯ ಸಂಕಷ್ಟಗಳಿಗೆ ಹಾಗೂ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತೇನೆ. ನಿಮ್ಮ ಪ್ರೀತಿಗೆ ಅಭಾರಿಯಾಗಿದ್ದೇನೆ. ನಾನು ಹಾಗು ಪತ್ನಿ ಡಾ. ಕವಿತಾರವರು ಸದಾ ಜನರ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತೇವೆ ಎಂದು ಐವನ್ ಡಿಸೋಜಾರವರು ಹೇಳಿದರು. ಅವರು ಹೆಜಮಾಡಿ ಬಿಲ್ಲವ ಸಂಘದಲ್ಲಿ ಸಾರ್ವಜನಿಕ ಅಭಿನಂದನಾ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

ಮೂಳೂರು - ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Posted On: 15-07-2024 08:22PM

ಉಚ್ಚಿಲ : ರಾ.ಹೆ. 66ರ ಮೂಳೂರು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಗೂಡಂಗಡಿಯೊಂದರ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಗಾಯಗೊಂಡಿರುತ್ತಾನೆ.

ಜುಲೈ 16 (ನಾಳೆ) : ಮಳೆ ಹಿನ್ನೆಲೆಯಲ್ಲಿ ಉಡುಪಿ, ದ.ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Posted On: 15-07-2024 07:40PM

ಕಾಪು : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿದ್ಯಾರ್ಥಿಗಳ ಹಿತರಕ್ಷಣೆಯಿಂದ ಉಭಯ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ (ಜುಲೈ 16)ದಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜುಲೈ 17 : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ - 'ಉಚ್ಚಿಲ ದಸರಾ-2024'ರ ಪೂರ್ವಭಾವಿ ಸಭೆ

Posted On: 15-07-2024 09:32AM

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದ ಈ ಬಾರಿಯ ದಸರಾ ಉತ್ಸವದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಜುಲೈ 17ರಂದು ಅಪರಾಹ್ನ ಗಂಟೆ 3 ಕ್ಕೆ ಉಚ್ಚಿಲದ ಮೊಗವೀರ ಭವನದಲ್ಲಿ ಸಭೆ ನಡೆಸಲು ನಿರ್ಣಯಿಸಲಾಗಿದೆ.