Updated News From Kaup

ಕಾಂತಾವರ : ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜೀಣೋದ್ಧಾರ ಬ್ರಹ್ಮಕಲಶ ನಡೆಸುವ ಬಗ್ಗೆ ಪೂರ್ವಭಾವಿ ಸಭೆ

Thumbnail
Posted On: 16 Sep 2024, 03:43 PM

ಕಾಂತಾವರ : ಗ್ರಾಮದ ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮ ಬೈದರ್ಕೆಳ ಯುವ ಸೇವಾ ಸಮಿತಿಯಿಂದ ಪಂಚಕಜ್ಜಾಯ ಸೇವೆ ಮತ್ತು ಜೀಣೋದ್ಧಾರ ಬ್ರಹ್ಮಕಲಶ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮ ಬೈದರ್ಕಳ ಯುವ ಸೇವಾ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು : ವಾರ್ಷಿಕ ಮಹಾಸಭೆ

Thumbnail
Posted On: 16 Sep 2024, 03:32 PM

ಕಾಪು : ಪರಿಸರದ ಜನಪ್ರಿಯ ಆರ್ಥಿಕ ಸಂಸ್ಥೆ ಅಕ್ಷಯಧಾರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 2023–24ನೇ ಸಾಲಿನ ವಾರ್ಷಿಕ ಮಹಾಸಭೆ ಕಾಪು ಭಾಸ್ಕರ ಸೌಧದಲ್ಲಿ ಜರಗಿತು. ಸೊಸೈಟಿಯ ಅಧ್ಯಕ್ಷ ಲವ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಆರ್ಥಿಕ ಸಂಸ್ಥೆ ಮಧ್ಯಮ ವರ್ಗದ, ಸಣ್ಣ ಉದ್ದಿಮೆದಾರರ ಅಗತ್ಯತೆಗಳಿಗೆ ಸ್ಪಂದಿಸಿ, ಅವರ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುತ್ತಿದೆ. ಸೊಸೈಟಿಯು ಗ್ರಾಹಕರಿಗೆ ಗುಣಮಟ್ಟದ ಸೇವೆ, ಸೌಲಭ್ಯ ನೀಡುತ್ತಿದ್ದು, ನಮ್ಮ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿ ಎಂದರು. ಶೇರುದಾರರಿಗೆ, ಠೇವಣಿದಾರರಿಗೆ ಹಾಗೂ ವಿವಿಧ ಖಾತೆಗಳನ್ನು ತೆರೆದು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಗ್ರಾಹಕರಿಗೂ ಅಭಿನಂದನೆ ಸಲ್ಲಿಸಿದರು. ಸೊಸೈಟಿಯ ಷೇರುದಾರರಾದ ಉಮನಾಥ ಬಂಗೇರ, ಶೀಲ ರಾಜ್ ಪುತ್ರನ್ ಪೊಲಿಪು, ಸೀತಾರಾಮ್ ಸಾಲಿಯನ್, ಸುಂದರ್ ಸುವರ್ಣ ಪೊಲಿಪು, ಸೀತಾಲಕ್ಷ್ಮಿ ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ ನೀಡಿದರು. ಈ ಸಂಧರ್ಭ ಸೊಸೈಟಿಯ ಶೇರುದಾರರಾದ ಹಾಗೂ ಸಂಸ್ಥೆಯ ಮಾರ್ಗದರ್ಶಕರಾಗಿದ್ದ ಈ ಬಾರಿ ಕಾಪು ಪುರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರಿಣಾಕ್ಷಿ ದೇವಾಡಿಗ ಅವರನ್ನು ಸೊಸೈಟಿಯ ಪರವಾಗಿ ಸನ್ಮಾನಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷರು, ನಿರ್ದೇಶಕರುಗಳು, ಸಿಬ್ಬಂದಿ, ಶೇರುದಾರರು, ಗ್ರಾಹಕರು, ಠೇವಣಿದಾರರು ಉಪಸ್ಥಿತರಿದ್ದರು. ನಿರ್ದೇಶಕ ಶಿವರಾಮ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಅಮಿತಾ ದೇವಾಡಿಗ ವಾರ್ಷಿಕ ವರದಿಯನ್ನು ಮಂಡಿಸಿದರು. ಸೊಸೈಟಿಯ ನಿರ್ದೇಶಕ ಜಗದೀಶ್ ಮೆಂಡನ್ ಗತ ವರ್ಷದ ಆಯ ವ್ಯಯ ಪಟ್ಟಿ ವಾಚಿಸಿದರು. ನಿರ್ದೇಶಕ ಪ್ರದೀಪ್ ಕುಮಾರ್ ಉಳಿಯರಗೋಳಿ ಸನ್ಮಾನಿತರನ್ನು ಪರಿಚಯಿಸಿದರು. ಅಮಿತಾ ದೇವದಾಸ್ ವಂದಿಸಿದರು.

ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ; ಸನ್ಮಾನ

Thumbnail
Posted On: 16 Sep 2024, 03:21 PM

ಉಚ್ಚಿಲ : ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ಆಚರಿಸಲಾಯಿತು. ಇಂಜಿನಿಯಸ್೯ ದಿನದ ಪ್ರಯುಕ್ತ ಇಂಜಿನಿಯರ್ ಅರಿಫ್ ಕಾಸಿಂ ಉಚ್ಚಿಲ ಇವರನ್ನು ಸನ್ಮಾನಿಸಲಾಯಿತು. ಉಚ್ಚಿಲ ರೋಟರಿ ಕ್ಲಬ್ ಅಧ್ಯಕ್ಷರಾದ ಇಬಾದುಲ್ಲ ಅಧ್ಯಕ್ಷತೆ ‌ವಹಿಸಿದ್ದರು. ಈ ಸಂದರ್ಭ ಉಚ್ಚಿಲ ರೋಟರಿಯ ಕಾರ್ಯದರ್ಶಿ ಸತೀಶ್ ಕುಂಡಂತಾಯ, ರೋಟರಿ ‌ಕಾರ್ಕಳದ ಅಧ್ಯಕ್ಷರಾದ ಇಕ್ಬಾಲ್ ಅಹ್ಮದ್, ಉಪಾಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಾರ್ಯದರ್ಶಿ ಗಣೇಶ್ ಸಾಲ್ಯಾನ್, ಮಮತಾ ಶೆಟ್ಟಿ, ಚೇತನ್ ನಾಯಕ್, ಉಚ್ಚಿಲ ರೋಟರಿ ಕ್ಲಬ್ ಪದಾಧಿಕಾರಿಗಳಾದ ಅಚ್ಯುತ ಶೆಣೈ, ನಜ್ಮ, ಚಂದ್ರಹಾಸ ಪೂಜಾರಿ, ಶೇಖಬ್ಬ, ಶಿಮಾಜ್, ಸುಧಾಕರ್, ಇಂಟರ್ಯಾಕ್ಟ್ ಕ್ಲಬ್ ಸಂಯೋಜಕರಾದ ಸುರೇಶ್ ‌ಆಚಾರ್ಯ, ರಾಜೇಶ್ ಉಪಸ್ಥಿತರಿದ್ದರು.

ಚಿಕಿತ್ಸೆಗೆ ಸಹಾಯದ ನಿರೀಕ್ಷೆಯಲ್ಲಿ ಪಡುಬಿದ್ರಿ ಧನ್ವಂತರಿ ಮಾರ್ಗದ ನಿವಾಸಿ

Thumbnail
Posted On: 15 Sep 2024, 11:40 AM

ಪಡುಬಿದ್ರಿ : ಶ್ವಾಸಕೋಶದ ಸಮಸ್ಯೆಯಿಂದ ಉಡುಪಿಯ ಆದರ್ಶ ಹಾಸ್ಪಿಟಲ್ನಲ್ಲಿ ಸುಮಾರು 15 ದಿನಗಳಲ್ಲಿ 5 ಲಕ್ಷ ಬಿಲ್ಲು ಪಾವತಿಸಿ, ಇದೀಗ ಮತ್ತೆ ಚಿಕಿತ್ಸೆಗೆ ಉಡುಪಿಯ ಮಿಷನ್ ಹಾಸ್ಪಿಟಲ್ ನಲ್ಲಿ ಇದ್ದು ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿ ಪಡುಬಿದ್ರಿಯ ಧನ್ವಂತರಿ ಮಾರ್ಗದ ನಿವಾಸಿ ಕೃಷ್ಣ ಮೂಲ್ಯ. ಇವರ ಕುಟುಂಬ ಇದ್ದ ಎಲ್ಲಾ ಹಣವನ್ನು ಆಸ್ಪತ್ರೆಗೆ ಪಾವತಿಸಿ ಇದೀಗ ದಾನಿಗಳಿಂದ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಕೃಷ್ಣ ಮೂಲ್ಯರಿಗೆ ನೆರವು ನೀಡುವವರು ಅವರ ಮಗಳ ಗೂಗಲ್ ಪೆ ನಂಬರ್ ಗೆ ಅಥವಾ ಕೃಷ್ಣ ಮೂಲ್ಯರ ಬ್ಯಾಂಕ್ ಖಾತೆಗೆ ಹಣ ಕಳುಹಿಸಬಹುದು Gpay number:9632492659 Krishna moolya ac 01382200051071 IFSC CNRB0010138 padubidri

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕೋತ್ಸವ 2024 ಸಂಪನ್ನ

Thumbnail
Posted On: 14 Sep 2024, 09:29 PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್‌ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ನಡೆಸಿದ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕೋತ್ಸವ 2024 ಇದರ ಸಮಾರೋಪ ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ರೈಮ್ ಸೋಪಿಕ್ ಟೆಕ್ನಾಲಜೀಸ್, ಮಂಗಳೂರು ಇದರ ಸಹ ಸಂಸ್ಥಾಪಕರು ಮತ್ತು ಹಿರಿಯ ತಾಂತ್ರಿಕ ಅಧಿಕಾರಿ ದುರ್ಗಾ ಪ್ರಸಾದ್ ಶೆಟ್ಟಿ ಮಾತನಾಡಿ, ಇಂತಹ ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಪಡೆಯಬಹುದಾದ ತಾಂತ್ರಿಕ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಚೀನ ಕಾಲದಲ್ಲಿದ್ದ ತಾಂತ್ರಿಕ ಪ್ರಗತಿಯ ಬಗ್ಗೆ ತಿಳಿಸಿದರು. ಸಂಸ್ಥೆಯು ಇಂತಹ ಕಾರ್ಯಕ್ರಮವನ್ನು ಆಯೋಜಿಸಿದಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್‌ರವರು ಮಾತನಾಡಿ, ನಕಲಿ ಕರೆ ಪತ್ತೆ, ವಂಚನೆಯಂತಹ ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸಲು ಇಂತಹ ಕಾರ್ಯಕ್ರಮಗಳು ಪ್ರಮುಖ ವೇದಿಕೆಯಾಗಿದೆ ಎಂದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹ್ಯಾಕೋತ್ಸವದಲ್ಲಿ ನೆಹರು ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಕೊಯಂಬತ್ತೂರ್ ಇಲ್ಲಿನ ವಿದ್ಯಾರ್ಥಿಗಳ "ಸ್ಟೇಲ್ ಅಪ್" ತಂಡವು ಪ್ರಥಮ ಸ್ಥಾನ ಪಡೆದು ಟ್ರೋಫಿಯೊಂದಿಗೆ 40 ಸಾವಿರ ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿತು. ವಿಶ್ವಕರ್ಮ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಪುಣೆ, ವಿದ್ಯಾರ್ಥಿಗಳ "ಟೀಮ್ 7'' ತಂಡವು ದ್ವಿತೀಯ ಸ್ಥಾನ ಪಡೆದು 25 ಸಾವಿರ ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿತು, ಎಂಐಟಿ ಮಣಿಪಾಲದ ವಿದ್ಯಾರ್ಥಿಗಳ "ಆಕ್ಟೇವಿಯನ್' ತಂಡ ಮತ್ತು ಶ್ರೀ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ "ಎಲ್ಸನ್ - ಸರ್ಕ್ಸ್" ತಂಡವು 12ಸಾವಿರ ನಗದು ಬಹುಮಾನದೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಎನ್‌ಎಂಐಇಟಿ, ಪುಣೆ, ವಿದ್ಯಾರ್ಥಿಗಳ "ಟೀಮ್ ಯುಗ" ತಂಡವು 10 ಸಾವಿರ ನಗದು ಬಹುಮಾನದೊಂದಿಗೆ ಅತ್ಯುತ್ತಮ ಯೋಜನೆ ಪ್ರಶಸ್ತಿಯನ್ನು ಪಡೆದುಕೊಂಡಿತು.

ಕಾಪು : ಬಿಜೆಪಿ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ

Thumbnail
Posted On: 14 Sep 2024, 09:15 PM

ಕಾಪು : ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಆಯೋಜಿಸಲಾಗಿತ್ತು. ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್‌ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಯಾದ ಗೋಪಾಲಕೃಷ್ಣ ರಾವ್, ಕ್ಷೇತ್ರ ಕಾರ್ಯದರ್ಶಿ ಎಂ.ಜಿ ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್, ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ಸದಾನಂದ, ಎಸ್.ಸಿ ಮೋರ್ಚಾ ಪ್ರಮುಖರಾದ ಪಾರ್ಥ ಸಾರಥಿ, ಚಂದ್ರ ಮಲ್ಲಾರು, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು, ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಸೆ. 15 : ಜೇಸಿಐ ಕಾಪು - ಜೇಸಿ ಸಪ್ತಾಹ - 2024

Thumbnail
Posted On: 14 Sep 2024, 08:48 PM

ಕಾಪು : ಜೇಸಿಐ ಕಾಪು ಇದರ ಜೇಸಿ ಸಪ್ತಾಹ 2024 ಅಂಗವಾಗಿ ಸೆಪ್ಟೆಂಬರ್ 15, ಡೈಮಂಡ್ಸ್ 7ನೇ ದಿನ ಡ್ಯಾಝಲ್ ವಿದ್ ಡೈಮಂಡ್ಸ್ ಕಾರ್ಯಕ್ರಮದ ಅಂಗವಾಗಿ ಕಾಪುವಿನ ವೀರಭದ್ರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಫ್ಯಾಶನ್ ಶೋ ಸ್ಪರ್ಧೆಯು ವಿಭಾಗ 1ರಲ್ಲಿ 5,6 ಮತ್ತು 7ನೇ ತರಗತಿ, ವಿಭಾಗ 2 ರಲ್ಲಿ 8,9 ಮತ್ತು 10ನೇ ತರಗತಿ ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸಮಯ 2+1 ನಿಮಿಷ ಇರಲಿದೆ. ವಿಜೇತರಿಗೆ ರಾಜ ರಾಣಿ ಸ್ಪರ್ಧೆ. ಡ್ಯಾನ್ಸ್ ಧಮಾಕ (SOLO DANCE) ವಿಭಾಗದಲ್ಲಿ 13 ವರ್ಷದ ಕೆಳಗಿನವರಿಗೆ ಮತ್ತು 13 ವರ್ಷದ ಮೇಲ್ಪಟ್ಟವರಿಗೆ ನಡೆಯಲಿದ್ದು,ಸಮಯ 3+1 ನಿಮಿಷ ಇರಲಿದೆ. ಮಹಿಳೆಯರಿಗೆ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆಯಿದ್ದು, ಸಮಯ 2 ನಿಮಿಷ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9731851936, 944850172

ಕಾಪು : ಟೀಮ್ ಭಗ್ವ ಉಡುಪಿ ಪದಾಧಿಕಾರಿಗಳ ಆಯ್ಕೆ

Thumbnail
Posted On: 14 Sep 2024, 07:57 PM

ಕಾಪು : ಟೀಮ್ ಭಗ್ವ ಉಡುಪಿ ಇದರ 2024-2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನಕರ್ ನಂದಳಿಕೆ, ಉಪಾಧ್ಯಕ್ಷರಾಗಿ ಶ್ರವಣ್ ದೇವಾಡಿಗ, ಕಾರ್ತಿಕ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಮಿಥುನ್ ಪೂಜಾರಿ, ಕಾರ್ಯದರ್ಶಿಗಳಾಗಿ ಸುಕೇಶ್ ಅಮೀನ್, ಪವನ್ ದೇವಾಡಿಗ, ಸಹ ಕಾರ್ಯದರ್ಶಿಗಳಾಗಿ ಕಿರಣ್ ಮುಳೂರು, ಕಿಶೋರ್ ಪೂಜಾರಿ, ಕೋಶಾಧಿಕಾರಿಗಳಾಗಿ ಅಪ್ಪು ಕೋಟಿಯನ್, ಸಾತ್ವಿಕ್ ಪೂಜಾರಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಿಥುನ್ ಪೊಲಿಪು, ಚಿತ್ತನ್ ಪೂಜಾರಿ, ಕಲ್ಯಾ ಯೋಗೀಶ್ ಶೆಟ್ಟಿ, ಗೌರವ ಸಲಹೆಗರರಾಗಿ ಸುಧೀರ್ ಸೋನು, ಪ್ರವೀಣ್ ಆಚಾರ್ಯ, ಸತೀಶ್ ಪೂಜಾರಿ ಕೂತಡಿ, ಸುರೇಂದ್ರ ಶೆಟ್ಟಿ, ದೀಪಕ್ ಮೂಡುಬೆಳ್ಳೆ, ರೋಷನ್ ಶೆಟ್ಟಿ, ಅರುಣ್ ಶೆಟ್ಟಿ, ಕಾನೂನು ಸಲಹೆಗಾರರಾಗಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಸಂಘಟನ ಕಾರ್ಯದರ್ಶಿಯಾಗಿ ಅರುಣ್ ಪೆರ್ನಾಕಿಲ, ಸುಶ್ಮಿತ್ ಪೂಜಾರಿ, ಮಾಧ್ಯಮ ಸಂಚಾಲಕರಾಗಿ ಲವ ಸುವರ್ಣ ಕಾಪು, ಸಾಮಾಜಿಕ ಜಾಲತಾಣದ ಪ್ರಮುಖರಾಗಿ ತುಷಾರ್ ಪೂಜಾರಿ, ಅಜಿತ್ ಪೂಜಾರಿ, ಶಶಾಂಕ್ ಪೂಜಾರಿ ಆಯ್ಕೆಯಾಗಿದ್ದಾರೆ.

ಸೆ.17 : ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ ಮಾಡಿದ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

Thumbnail
Posted On: 13 Sep 2024, 10:37 AM

ಉಡುಪಿ : ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಸಭೆಯಲ್ಲಿ ನಡೆದಿದ್ದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಸಭೆಯಲ್ಲಿ ವ್ಯಕ್ತಿಯೋರ್ವ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ಹಿಂದಿನ ಅಧ್ಯಕ್ಷರ ಕ್ಷಮೆಯಾಚನೆಗೆ ಸಂಘದ ಅಧ್ಯಕ್ಷರು ಮುಂದಾದಲ್ಲಿ ಆಗಸ್ಟ್ 20 ರಂದು ನಡೆಯುವ ನಾರಾಯಣ ಗುರುಜಯಂತಿ ಆಚರಣೆಯ ಕಾರ್ಯಕ್ರಮಕ್ಕೆ ಹೆಜಮಾಡಿ ಬಿಲ್ಲವ ಮಹಿಳೆಯರು ಯಾರೂ ಬರುವುದಿಲ್ಲ ಎಂದು ಹೇಳುವ ಮೂಲಕ ನಾರಾಯಣ ಗುರುಗಳಿಗೆ ಅಗೌರವ ತೋರಿ, ಅಸಂಖ್ಯಾತ ಗುರುಗಳ ಅನುಯಾಯಿಗಳೂ ಸೇರಿದಂತೆ ಬಿಲ್ಲವ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಿನ್ನಲೆಯಲ್ಲಿ ತಪ್ಪಿತಸ್ಥ ವ್ಯಕ್ತಿಯ ವಿರುದ್ಧ ಇದೀಗ ಬಿಲ್ಲವ ಸಮಾಜದ ಪ್ರಮುಖರು ಪ್ರಕರಣ ದಾಖಲು ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಬಿಲ್ಲವ ಸಮಾಜದ ಸಂಘಟನೆಗಳಿಗೂ ಮನವಿ ನೀಡಲಾಗಿದೆ. ಈಗಾಗಲೇ ಸಂತ್ರಸ್ತೆ ಉಡುಪಿ ಮಹಿಳಾ ಠಾಣೆಯಲ್ಲಿ 5 ಜನ ತಪ್ಪಿತಸ್ಥರ ವಿರುದ್ಧ ದೂರು ನೀಡಿ, ಅವಹೇಳನಗೈದ ವ್ಯಕ್ತಿಯನ್ನು ಹೊರತುಪಡಿಸಿ ಉಳಿದವರು ಕ್ಷಮೆಯಾಚಿಸಿರುತ್ತಾರೆ. ಆದರೆ ಒಣ ಪ್ರತಿಷ್ಠೆ, ದುಡ್ಡಿನ ಮದದಿಂದ ನಾನು ಯಾಕೆ ಕ್ಷಮೆ ಕೇಳಬೇಕು ನಾನು ದೊಡ್ಡ ಸಿ.ಎ ಎನ್ನುವ ಉದ್ಧಟನವನ್ನು ತೋರಿರುತ್ತಾರೆ. ಹಲವಾರು ಜನ ಇವರಿಗೆ ಬುದ್ಧಿ ಹೇಳಿದರು ಕ್ಯಾರೆ ಎನ್ನದೆ ನಾನು ಗುರುಗಳಿಗಿಂತ ದೊಡ್ಡವನು ಎನ್ನುವ ರೀತಿ ದುರ್ವರ್ತನೆ ತೋರಿರುತ್ತಾರೆ. ಸಾಕಷ್ಟು ಕಾಲಾವಕಾಶ ನೀಡಿದರು ಇನ್ನು ಗುರುಗಳಲ್ಲಿ ಕ್ಷಮೆ ಯಾಚಿಸಿಲ್ಲ ಎಂದರೆ ಇದು ದುರಂಕಾರದ ಪರಮವಾದಿ ಎಂದು ಗುರುಗಳ ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸೆ. 17ರಂದು ಗುರುಗಳ ಅನುಯಾಯಿಗಳು, ಹಲವಾರು ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಆ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ

Thumbnail
Posted On: 11 Sep 2024, 12:43 PM

ಕಾಪು : ಬೆಳಪು ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಪಣಿಯೂರು ಬೆಳಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುರಿತು ಸಭೆ ಮಂಗಳವಾರ ಎಸ್ ಎನ್ ಕ್ರಯೋಜೆನಿಕ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಜರಗಿತು. ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 54 ಕೈಗಾರಿಕಾ ಕೇಂದ್ರಗಳು ಪ್ರಾರಂಭಗೊಳ್ಳಲಿದ್ದು ಈಗಾಗಲೇ ಹಲವಾರು ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಿದ್ದು ಅದಕ್ಕೆ ಪಣಿಯುರಿನಿಂದ ಬೆಳಪುವಿಗೆ ಬರುವ ಸಂಪರ್ಕ ರಸ್ತೆ ತೀರಾ ಹದೆಗಟ್ಟಿದ್ದು ಇದರ ಅಗಲೀಕರಣಗೊಳಿಸಲು ಅಭಿವೃದ್ಧಿಪಡಿಸಲು ಸುಮಾರು 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯನ್ನು KIADB ಯವರು ಸಿದ್ಧಪಡಿಸಿದ್ದು ಸುಮಾರು 2.70 ಎಕರೆ ಜಾಗ ರೈತರಿಂದ ಭೂಸ್ವಾಧೀನ ಪಡಿಸಿಕೊಂಡಿದ್ದು ಗ್ರಾಮಸ್ಥರಿಗೆ ಪರಿಹಾರ ನೀಡದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರು ತಕ್ಷಣ ಪರಿಹಾರವನ್ನು ರೈತರಿಗೆ ನೀಡಿ ಎಲ್ಲಾ ಸಣ್ಣ ಕೈಗಾರಿಕೆಗಳು ತೀರಾ ನಷ್ಟದಲ್ಲಿ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಿ 6 ಕೋಟಿ ಹೊರೆಯನ್ನ ಕೈಗಾರಿಕಾ ಮಾಲಕರಿಗೆ ಹಾಕುವುದು ಸೂಕ್ತವಲ್ಲ ಇದನ್ನು ಸರಕಾರ, ಸಂಸದರು, ಶಾಸಕರ ಗಮನಕ್ಕೆ ತಂದು ರಸ್ತೆ ಅಭಿವೃದ್ಧಿಗೊಳಿಸಲು ಕಾರ್ಯ ಮಾಡುತ್ತೇನೆ ಎಂದು ತಿಳಿಸಿದರು. ಕೈಗಾರಿಕಾ ಪ್ರದೇಶದಲ್ಲಿ ನಿರ್ವಹಣೆ, ತ್ಯಾಜ್ಯ ಹರಿಯುವ ನೀರಿನ ಚರಂಡಿಗಳು ಸರಿಯಾಗಿ ಇಲ್ಲದ ಕಾರಣ ರೈತರ ಜಮೀನಿಗೆ ನೀರು ನುಗ್ಗಿ ಕೃತಕ ನೆರೆ ಉದ್ಭವವಾಗಿರುತ್ತದೆ ಎಂದು ಕೆಇಡಿಬಿಯ ಅಧಿಕಾರಿಗಳ ಗಮನಕ್ಕೆ ತಂದರು ಅಲ್ಲದೆ ಶಿವಾಲಯದಿಂದ ಜನರಿಗೆ ಬೆಳಪು ವಿಗೆ ಕಾಲುದಾರಿಯಲ್ಲಿ ಸಂಚರಿಸಲು ಅವಕಾಶ ನೀಡಬೇಕು. ಕೆಐಎಡಿಬಿ ವಲಯದಲ್ಲಿರುವ ಶಿವಾಲಯದ ಅಭಿವೃದ್ಧಿಗೆ ಕೈಗಾರಿಕಾ ಪ್ರದೇಶದ ಮಾಲಕರು ಕೈಜೋಡಿಸಬೇಕು, ಸ್ಥಳೀಯರಿಗೆ ಉದ್ಯೋಗ ಅವಕಾಶವನ್ನು ನೀಡಬೇಕಾಗಿ ಕಾರ್ಖಾನೆಯ ಮಾಲಕರಲ್ಲಿ ವಿನಂತಿಸಿದ್ದರು. ಅಲ್ಲದೆ ಕೈಗಾರಿಕಾ ಪ್ರದೇಶದ ವಿವಿಧ ಸಮಸ್ಯೆಗಳ ಬಗ್ಗೆ ಹಾಗೂ ಕೈಗಾರಿಕಾ ಸ್ಥಳಗಳ ಕ್ರಯಾಸಾದನವನ್ನ ಮಾಡಿ ಕೈಗಾರಿಕಾ ಮಾಲೀಕರಿಗೆ ನೀಡಬೇಕಾಗಿ ಎಸ್ ಎನ್ ಕ್ರಯೋಯೋಜನಿಕ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ನಟರಾಜ ಹೆಗ್ಡೆ ಕೆ ಐ ಡಿ ಬಿ ಯ ಅಧಿಕಾರಿಗಳ ಗಮನಕ್ಕೆ ತಂದರು. ಕೈಗಾರಿಕಾ ಪ್ರದೇಶದಲ್ಲಿ ವಾಸಿಸುವ ಬಡ ಜನರಿಗೆ ಸರಕಾರದ ತೀರ್ಮಾನದಂತೆ ಗುಡಿ ಕೈಗಾರಿಕಾ ಯೋಜನೆ ಅಡಿಯಲ್ಲಿ ವಾಸಿಸುತ್ತಿದ್ದ ಸ್ಥಳವನ್ನು ಮಂಜೂರು ಮಾಡಿ ಕೊಡಿಸುವಂತೆ , ಅಲ್ಲದೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವಂತೆ ಡಾ ದೇವಿ ಪ್ರಸಾದ್ ಶೆಟ್ಟಿ ಅವರು ವಿನಂತಿಸಿದರು ಇದಕ್ಕೆ KIADB ಹಾಗೂ ಕೈಗಾರಿಕಾ ಇಲಾಖೆ ಅಧಿಕಾರಿಗಳು ಧ್ವನಿಗೂಡಿಸಿದ್ದರು. ಆರು ಕೋಟಿ ವೆಚ್ಚದಲ್ಲಿ ಕೈಗಾರಿಕಾ ರಸ್ತೆ ಅಭಿವೃದ್ಧಿಪಡಿಸುವ ಮೊತ್ತವನ್ನು ಕೈಗಾರಿಕಾ ಮಾಲೀಕರಿಗೆ ಹೊರೆಯಾಗದ ರೀತಿಯಲ್ಲಿ ಸರಕಾರ ಬರಿಸುವಂತೆ ಮಾನ್ಯ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿಯವರಲ್ಲಿ ಗ್ರಾಮೀಣ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ಧಿಪಡಿಸುವಂತೆ ದೂರವಾಣಿ ಮುಖಾಂತರ ಮಾತನಾಡಿದ ಕಾಪು ಶಾಸಕರು ಅವರು ಅದಕ್ಕೆ ಸಂಸದರು ಒಪ್ಪಿಗೆಯನ್ನು ನೀಡಿದರು. ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆಯವರು ರಸ್ತೆ ಕಾಮಗಾರಿಗೆ ಸ್ಪಂದಿಸುವುದಾಗಿ ಭರವಸೆಯನ್ನು ನೀಡಿದರು. ಬೆಳಪು ಕೈಗಾರಿಕಾ ಪ್ರದೇಶದ ಕೈಗಾರಿಕಾ ವಲಯದ ಮಾಲಕರು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಸಹಾಯಕ ಆಯುಕ್ತರು, ವಿಶೇಷ ಭೂಸ್ವಾಧೀನ ಅಧಿಕಾರಿ ರಾಜು, ಜಂಟಿ ನಿರ್ದೇಶಕರು, ಡಿಐಸಿ ಉಡುಪಿ, ನಾಗರಾಜ್ ಡಿಐಸಿ ಸೀತಾರಾಮ ಶೆಟ್ಟಿ, ಉಡುಪಿ, ಕೆಐಡಿಬಿಯ ಅಧಿಕಾರಿಗಳಾದ ದತ್ತಾತ್ರಿ, ಇಂಜಿನಿಯರ್ ಗಣಪತಿ, ರತ್ನಾಕರ್ ಹಾಗೂ ಕೈಗಾರಿಕಾ ಪ್ರದೇಶದ ಮಾಲಕರುಗಳಾದ ವಸಂತ ಹೆಗ್ಡೆ, ಹರೀಶ್ ನಾಯಕ್ ಕಾಪು, ಸುಧಾಕರ್ ಶೆಟ್ಟಿ, ಮಕರ, ದಿನಕರ್ ಬಾಬು, ಕಿರಣ್ ಹೆಗ್ಡೆ, ಭೂಷಣ್ ರಾವ್, ನಾಗರಾಜ್ ಪ್ರಭು, ಸುರೇಶ್ ಶೆಟ್ಟಿ ಅಯೋಧ್ಯಾ, ದುರ್ಗಾ ನಾಯ್ಕ, ಇನ್ನಿತರರು ಉಪಸ್ಥಿತರಿದ್ದರು.