Updated News From Kaup
ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಪಲಿಮಾರು : ಶ್ರಮದಾನ ; ಆಶ್ರಮ ಭೇಟಿ
Posted On: 15 Aug 2024, 04:12 PM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಪಲಿಮಾರು ತಂಡದ ನೇತೃತ್ವದಲ್ಲಿ ಆಗಸ್ಟ್ 15ರಂದು ಅವರಾಲು ಪರಿಸರದ ರಸ್ತೆ ಹಾಗೂ ಅಂಗನವಾಡಿ ಕೇಂದ್ರದ ಬಳಿ ಶ್ರಮದಾನ ಹಾಗೂ ಕಾರುಣ್ಯ ಆಶ್ರಮ ಕಟಪಾಡಿ ಇಲ್ಲಿಗೆ ಭೇಟಿ ನೀಡಿ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
ಶಿರ್ವ : ಫೈಝುಲ್ ಇಸ್ಲಾಂ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 03:46 PM
ಶಿರ್ವ : ಇಲ್ಲಿನ ಫೈಝುಲ್ ಇಸ್ಲಾಂ ಶಾಲೆಯಲ್ಲಿ ಗುರುವಾರ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಪ್ರಮುಖರಾದ ಉಮರ್ ಇಸ್ಮಾಯಿಲ್ ಧ್ವಜಾರೋಹಣಗೈದು ಸಂದರ್ಭೋಚಿತವಾಗಿ ಮಾತನಾಡಿದರು. ಸ್ವಾತಂತ್ರ್ಯ ದಿನದ ನಿಮಿತ್ತ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಪರ್ವೆಜ್ ಸಲೀಮ್, ಯಾಕಿನುಲ್ಲ, ಶಾಲಾ ಮುಖ್ಯ ಶಿಕ್ಷಕಿ ಖೈರುನ್ನೀಸ, ಕಾರ್ಯದರ್ಶಿ ಹಪ್ಸಾ, ವಫಾ, ಉಷಾ, ಶಬನಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಅಲಕಮಾ ಕಾರ್ಯಕ್ರಮ ನಿರೂಪಿಸಿದರು.
ಕಾಪು ಜೆಸಿಐ : 78 ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 03:33 PM
ಕಾಪು : ಇಲ್ಲಿನ ಜೆಸಿಐ ವತಿಯಿಂದ 78 ನೇ ಸ್ವಾತಂತ್ರೋತ್ಸವವನ್ನು ಜೇಸಿ ಸಭಾಭವನದ ಮುಂಭಾಗ ಅಧ್ಯಕ್ಷರಾದ ಸುಖಲಾಕ್ಷಿ ಬಂಗೇರ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. ಈ ಸಂದರ್ಭ ಕಾಪು ಜೇಸಿಐ ಸಂಸ್ಥೆಯ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ - 78ನೇ ಸ್ವಾತಂತ್ರೋತ್ಸವ
Posted On: 15 Aug 2024, 03:26 PM
ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ ವತಿಯಿಂದ 78 ನೇ ಸ್ವಾತಂತ್ರೋತ್ಸವವನ್ನು ಹೆಜಮಾಡಿ ಮುಖ್ಯ ಪೇಟೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಶೇಖರ್ ಹೆಜ್ಮಾಡಿ ಧ್ವಜಾರೋಹಣ ಮಾಡಿ ಸ್ವಾತಂತ್ರೋತ್ಸವ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಯೂನಿಯನ್ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು.
ದುರ್ಗಾ ಫ್ರೆಂಡ್ಸ್ ಹೆಜಮಾಡಿ ವತಿಯಿಂದ 78 ನೇ ಸ್ವಾತಂತ್ರೋತ್ಸವ ದಿನಾಚರಣೆ
Posted On: 15 Aug 2024, 03:20 PM
ಹೆಜಮಾಡಿ : ನಾನು ಭಾರತೀಯ ಎಂಬ ಹೆಮ್ಮೆಯ ಭಾವನೆ ಬೆಳೆಸಿಕೂಳ್ಳುವುದರೊಂದಿಗೆ ದೇಶ ರಕ್ಷಣೆಯ ಕರ್ತವ್ಯವನ್ನು ಪ್ರತಿಯೊಬ್ಬರೂ ಹೊತ್ತು ಕೊಳ್ಳಬೇಕು. ರಾಷ್ಟ್ರ ನಿರ್ಮಾಣ ಮತ್ತು ಅಭಿವೃದ್ಧಿ ಯಲ್ಲಿ ಯುವಕರ ಪಾತ್ರ ಬಹಳ ಮುಖ್ಯ. ಏಕೆಂದರೆ ಯಾವುದೇ ರಾಷ್ಟ್ರದ ಅಭಿವೃದ್ಧಿ ಭವಿಷ್ಯದ ಪೀಳಿಗೆ ಯಲ್ಲಿದೆ. ಯುವಕರಿಗೆ ಜಗತ್ತನ್ನು ಬದಲಿಸುವ ಶಕ್ತಿ ಇದೆ. ನಾವೆಲ್ಲರೂ ದೇಶದ ಸತ್ಪ್ರಜೆಯಾಗಿ ಬಾಳ ಬೇಕು ಎಂದು ಭಾರತೀಯ ವಾಯುಪಡೆ ಸೇನೆಯ ನಿವೃತ್ತ ಕಾರ್ಪೋರಲ್ ಪುರುಷೋತ್ತಮ್ ಗುರಿಕಾರ ಹೆಜಮಾಡಿ ಇವರು 78ನೇ ಸ್ವಾತಂತ್ರೋತ್ಸವದ ದ್ವಜಾರೋಹಣ ನೇರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರೋತ್ಸವ ಅಂಗವಾಗಿ ನಡೆದ ಕ್ರೀಡಾ ಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದುರ್ಗಾ ಫ್ರೆಂಡ್ಸ್ ನ ಅಧ್ಯಕ್ಷರಾದ ಅನಿಲ್ ಎಚ್ ಕುಂದರ್, ಮಾಜಿ ಅಧ್ಯಕ್ಷರು ಪ್ರಭಾಕರ್ ಕರ್ಕೇರ, ಸಂಚಾಲಕರಾದ ಎಚ್ ರವಿ ಕುಂದರ್, ಗೌರವ ಸಲಹೆಗಾರ ದೇವದಾಸ್ ಸಾಲ್ಯಾನ್, ಉಪಾಧ್ಯಕ್ಷರಾದ ಹಿತೇಶ್ ಮೆಂಡನ್, ಹೆಜಮಾಡಿ ಗ್ರಾ.ಪಂ.ಸದಸ್ಯೆ ನಿರ್ಮಲಾ ಕೆ, ಖಡ್ಗೇಶ್ವರಿ ಭಜನಾ ಮಂದಿರದ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಕೃಷ್ಣ ಪೂಜಾರಿ, ಹೆಜಮಾಡಿ ದೇವಾಡಿಗರ ಸಂಘದ ಅಧ್ಯಕ್ಷರಾದ ಹರೀಶ್ ದೇವಾಡಿಗ, ಪಡುಬಿದ್ರಿ ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ ಉಪಸ್ಥಿತರಿದ್ದರು. ದುರ್ಗಾ ಫ್ರೆಂಡ್ಸ್ ನ ಕಾರ್ಯದರ್ಶಿ ಕೀರ್ತನ್ ಎಸ್ ಸಾಲ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಪಡುಬಿದ್ರಿ : ಬಾಪೂಜಿ ಭಜನಾ ಮಂದಿರ - 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆ
Posted On: 15 Aug 2024, 03:12 PM
ಪಡುಬಿದ್ರಿ : ಇಲ್ಲಿನ ಹಿರಿಯ ಸಂಘ ಸಂಸ್ಥೆಗಳಲ್ಲಿ ಒಂದಾದ ಬಾಪೂಜಿ ಸಮಾಜ ಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಪಡುಬಿದ್ರಿ ಮುಂಡಾಲ ವೇದಿಕೆಯ ಅಧ್ಯಕ್ಷರಾದ ಶಿವಪ್ಪ ಪಡುಬಿದ್ರಿ ನೆರವೇರಿಸಿದರು. ಈ ಸಂದರ್ಭದಲ್ಲಿ ರವಿ ಸಾಲ್ಯಾನ್ ಕಲ್ಲಟ್ಟೆ, ಸುರೇಶ್ ಪಡುಬಿದ್ರಿ, ಯಶವಂತ್, ವಾಮನ್ ಸಾಲ್ಯಾನ್, ಬಾಲಕೃಷ್ಣ, ಗೀತಾ ಮೊದಲಾದವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ
Posted On: 15 Aug 2024, 03:09 PM
ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ ನಮ್ಮೆಲ್ಲರಿಗೂ ಗೊತ್ತಿರುವಂತದ್ದೇ. ಅದೇನು ಮಹಾ, ಬ್ರಿಟಿಷರ ವಿರುದ್ಧ ಹೋರಾಡಿ ನಮ್ಮದೇ ಸರ್ಕಾರ ಸ್ಥಾಪನೆಯಾದ ದಿನ ಎಂದು ಮೂಗು ಮುರಿಯುವವರ ಸಂಖ್ಯೆದಿನ ಕಳೆದಂತೆ ದೊಡ್ಡದಾಗುತ್ತಿದೆ. ಅಂದು ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟರು. ಇಂದು ನಾವೇನು ಮಾಡುವುದು? ಎಂದು ಹಲವರು ಪ್ರಶ್ನೆ ಕೇಳುತ್ತಾರೆ. ಇವರಿಗೆ ಮಾಗ೯ದಶ೯ನ ಮಾಡಿ ನಮ್ಮ ದೇಶದ ಘನತೆ ಶ್ರೇಷ್ಠತೆಯ ಬಗ್ಗೆ ಪರಿಚಯ ಮಾಡಿ ಬೇಕಾದ ಸ್ಥಿತಿ ಇದೆ. ಶೋಕಿಯ ಆಚರಣೆ ಸಲ್ಲದು : ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧ ಮಾದರಿಯ ಒಂದು ಸಂದೇಶ ಭಾಷಣ, ರಾಷ್ಟ್ರಧ್ವಜ, ಭೂಪಟ, ಮಹಾತ್ಮ ಗಾಂಧಿ ಚಿತ್ರ ಇರುವ ಚಿತ್ರ ಸಂದೇಶವನ್ನು ವಾಟ್ಸ್ಆ್ಯಪ್ನಲ್ಲಿ ತೇಲಿ ಬಿಡುತ್ತಾರೆ. ‘ಹ್ಯಾಪಿ ಇಂಡಿಪೆಂಡೆನ್ಸ್ ಡೇ’ ಎಂದು ಹೇಳಿ ತಾವು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆವು ಎಂದು ಸಂಭ್ರಮಿಸುತ್ತಾರೆ. ಈ ಸಂದೇಶಗಳನ್ನು ಎಲ್ಲರಿಗೂ ಕಳುಹಿಸುತ್ತಾರೆ. ಈ ಮೂಲಕ ಸ್ವಾತಂತ್ರ್ಯವನ್ನು ಆಚರಿಸುವವರು ನಮ್ಮಲ್ಲಿ ಇದ್ದಾರೆ.ಕೇವಲ ಶೋಕಿಗಾಗಿ ಆಚರಿಸಿ ನಾವೇ ದೊಡ್ದ ಸಾಧನೆ ಮಾಡಿದ್ದೇವೆ ಎಂದು ಹೇಳುವವರಲ್ಲಿ ನಮ್ಮ ಹೋರಾಟಗಾರ ಶ್ರಮ ತ್ಯಾಗ ದ ಬಗ್ಗೆ ಹೇಳಬೇಕಾಗಿದೆ. ಮತ್ತೆ ಹಲವರು ಇಂತಹ ಸಂದೇಶಗಳನ್ನು ತೆರೆದೇ ನೋಡುವುದಿಲ್ಲ. ರಜಾ ಸಿಕ್ಕಿತೆಂದು ಪ್ರವಾಸಕ್ಕೆ ಹೊರಡುತ್ತಾರೆ. ಮನೆಯಲ್ಲಿ ಕುಳಿತು ಟಿ.ವಿಯಲ್ಲಿ ಹಾಕುವ ಸಿನಿಮಾಗಳನ್ನು ವೀಕ್ಷಿಸುತ್ತಾರೆ. ಇಲ್ಲವೇ ಮನೆಯಲ್ಲಿನಿದ್ದೆಗೆ ಜಾರುತ್ತಾರೆ. ಅತ್ತ ಜಿಲ್ಲಾಡಳಿತ ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ಜನರಿಲ್ಲದೇ ಬಣಗುಡುವಂತಾಗುತ್ತಿದೆ. ಅಧಿಕಾರಿಗಳು ಕಡ್ಡಾಯವಾಗಿ ಬರಲೇಬೇಕು ಎಂದು ಆದೇಶ ಹೊರಡಿಸುವ ಮಟ್ಟಕ್ಕೆ ಅಧಿಕಾರಿಗಳ ಬದ್ಧತೆ ಇಳಿದಿದೆ. ಮನಸೊಳಗೆ ಬೈಯ್ದುಕೊಳ್ಳುತ್ತ ಬರುವವರು ಅನೇಕರು. ಧ್ವಜಾರೋಹಣದಂದು ಸೇರುವ ಬಹುತೇಕ ಮಂದಿ ಶಾಲಾ ಮಕ್ಕಳ ಪೋಷಕರು. ಅದೂ ಅವರು ತಮ್ಮ ಮಕ್ಕಳು ಹೇಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುತ್ತಾರೆ, ಎನ್ಸಿಸಿಯಲ್ಲಿ ಹೇಗೆ ಕವಾಯತು ಮಾಡುತ್ತಾರೆ ಎಂದು ವೀಕ್ಷಿಸುವುದಕ್ಕೆ ಬಂದಿರುತ್ತಾರೆ. ಕೇವಲ ಕಾಟಾಚಾರ ಆಚರಣೆ ಮಾಡದೆ, ಸಾಥ೯ಕತೆಯಿಂದ ಈ ಉತ್ಸವ ಆಚರಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಎಂಬುದು ಬಲು ದೊಡ್ಡ ಹಬ್ಬ, ಉತ್ಸವ : ಅಂದು ದಸರೆಯ ಪಂಜಿನ ಕವಾಯತಿಗೆ ಸೇರುವಷ್ಟು ಜನ ಸೇರಬೇಕು. ರಾಷ್ಟ್ರಗೀತೆಯನ್ನು ಒಕ್ಕೊರಲಿನಿಂದ ಹೇಳಬೇಕು. ರಾಷ್ಟ್ರಧ್ವಜಕ್ಕೆ ವಂದಿಸಬೇಕು. ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸದ ಪುಸ್ತಕಗಳನ್ನು ತೆರೆಯಬೇಕು. ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ವಿವಿಧ ಮಗ್ಗುಲುಗಳನ್ನು ಪರಿಚಯ ಮಾಡಿಕೊಡಬೇಕು. ಇಡೀ ದಿನ ದೇಶದ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಕೆಲಸ ಮಾಡಬೇಕು. ಸ್ವಾತಂತ್ರ್ಯ ದಿನಾಚರಣೆಗೆ ಉಂಟಾಗಿರುವ ಬೆದರಿಕೆಗಳನ್ನು ಕುರಿತು ಚಿಂತಿಸಬೇಕು. ಮುಖ್ಯವಾಗಿ ಯುವ ತಲೆಮಾರಿಗೆ ಅವುಗಳ ಪರಿಚಯ ಮಾಡಿಕೊಡಬೇಕು. ಪ್ಲಾಸ್ಟಿಕ್ ಬಾವುಟ ಹಿಡಿದೊ, ರಾಷ್ಟ್ರಧ್ವಜದ ಚಿತ್ರವನ್ನು ಎಲ್ಲೆಂದರಲ್ಲಿ ಬರೆದೊ, ರಾಷ್ಟ್ರಲಾಂಛನವನ್ನು ಬೇಕಾಬಿಟ್ಟಿ ಇಟ್ಟೊ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆವು ಎಂದುಕೊಂಡರೆ ಅದು ದೊಡ್ಡ ತಪ್ಪು. ನಿಜಕ್ಕೂ ಈ ರೀತಿ ಮಾಡಿದರೆ ರಾಷ್ಟ್ರಕ್ಕೆ ಅವಮಾನ ಮಾಡಿದಂತೆ. ರಾಷ್ಟ್ರಧ್ವಜಾರೋಹಣಕ್ಕೆ ಗೊತ್ತುಪಡಿಸಿದ ಜಾಗದಲ್ಲಿಯೇ ಮಾಡಬೇಕು. ಜಿಲ್ಲಾಡಳಿತ ಸಕಾ೯ರ ಅಥವಾ ಶಾಲಾ ಕಾಲೇಜುಗಳಲ್ಲಿ ಮಾಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗಿಯಾಗಬೇಕು.ಈ ಮೂಲಕ ವಷ೯ದಲ್ಲಿ ಒಮ್ಮೆಯಾದರೂ ದೇಶ ಸೇವಕರ ನೆನಪು ಮಾಡುವ ಕೆಲಸ ಮಾಡಬೇಕಾಗಿದೆ. ನಮ್ಮ ಸ್ವಾತಂತ್ರದಲ್ಲಿ ರಾಜಕೀಯ ಬೇಡ : ದೇಶ ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಕೇಂದ್ರ ಸಕಾ೯ರ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಹಾರಾಡಬೇಕು ಎಂಬ ಸಂಕಲ್ಪದಂತೆ ಹರ್ ಘರ್ ತಿರಂಗಾ ಅಭಿಯಾನ ನಡೆಸುತ್ತಿದೆ. ಈ ನಿಟ್ಟಿನಲ್ಲಿಯೂ ರಾಜಕೀಯ, ಮಾತುಗಳು ಕೇಳಿ ಬರುತ್ತಿವೆ.ಇದು ಸಲ್ಲದು ದೇಶಭಕ್ತಿಯ ವಿಷಯದಲ್ಲಿ ರಾಜಕೀಯ ಬರಬಾರದು. ದೇಶದ ಅಖಂಡತೆ, ದೇಶ ಭಕ್ತಿ ಯ ಕುರಿತು ಚಿಂತನ ಮಂತನ ನಡೆಯಬೇಕು ಈ ಮೂಲಕ ಸ್ವಾತಂತ್ರ್ಯದ ಕಹಳೆ ಎಲ್ಲೆಡೆ ಮೊಳಗಲಿ ಭಾರತ ಮಾತೆಗೆ ನಮನವಿರಲಿ ಸದಾ ದೇಶ ಮೊದಲು ಎನ್ನುವ ಉಸಿರಿರಲಿ ಸದಾ . ✍
ಮುಂಡಾಲ ಯುವ ವೇದಿಕೆ ಪಡುಬಿದ್ರಿ : 78 ನೇ ಸ್ವಾತಂತ್ರೋತ್ಸವ ಆಚರಣೆ
Posted On: 15 Aug 2024, 03:03 PM
ಪಡುಬಿದ್ರಿ : ಇಲ್ಲಿನ ಮುಂಡಾಲ ಯುವ ವೇದಿಕೆಯ ಸಹಯೋಗದೊಂದಿಗೆ ಪಡುಬಿದ್ರಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೇದಿಕೆಯ ಅಧ್ಯಕ್ಷ ಶಿವಪ್ಪ ಸಾಲ್ಯಾನ್ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ಸ್ವಾತಂತ್ರ್ಯೊತ್ಸವದ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಬಸವರಾಜ್ ಮತ್ತು ವೇದಿಕೆಯ ಪರವಾಗಿ ಸಂತೋಷ್ ನಂಬಿಯಾರ್ ಶುಭಾಶಯಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯ ಪ್ರಮುಖರಾದ ಸುರೇಶ್ ಪಡುಬಿದ್ರಿ, ಪ್ರಸನ್ನ ಪಡುಬಿದ್ರಿ, ಮಂಜುನಾಥ್ ಎರ್ಮಾಳ್, ಪ್ರವೀಣ್ ಎರ್ಮಾಳ್, ಶ್ರೀಧರ್ ಪಲಿಮಾರ್, ನಿತಿನ್ ಬೊಗ್ಗರಿಲಚ್ಚಿಲ್, ಬಾಲಕೃಷ್ಣ, ಸೊಮಯ್ಯ ಎರ್ಮಾಳು, ಪ್ರಶಾಂತ್ ಪಾದೆಬೆಟ್ಟು, ರಾಜೇಂದ್ರ ಎರ್ಮಾಳು, ಮಹಿಳಾ ಅಧ್ಯಕ್ಷೆ ಸವಿತಾ, ಭಾರತಿ, ಶಾಲಿನಿ, ಸುನೀತಾ, ದೀಪಾ ನಿತಿನ್ ಮೊದಲಾದವರು ಉಪಸ್ಥಿತರಿದ್ದರು.
ಪಡುಬಿದ್ರಿ : ಕಾಮತ್ ಪೆಟ್ರೋಲ್ ಪಂಪ್ - ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 02:54 PM
ಪಡುಬಿದ್ರಿ : ಇಲ್ಲಿನ ಕಾಮತ್ ಎಚ್ಪಿ ಪೆಟ್ರೋಲ್ ಪಂಪ್ನಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾಲಕೃಷ್ಣ ಶೆಟ್ಟಿ ಧ್ವಜಾರೋಹಣಗೈದರು. ಸಂಸ್ಥೆಯ ಮಾಲಿಕರಾದ ಸತೀಶ್ ಎನ್ ಕಾಮತ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ : ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2024, 02:48 PM
ಶಿರ್ವ : ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ ಆಚಾರ್ಯ ಧ್ವಜಾರೋಹಣಗೈದರು. ಈ ಸಂದರ್ಭ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ,, ಮುಖ್ಯಶಿಕ್ಷಕಿ ಸಂಗೀತಾ ರಾವ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
