Updated News From Kaup
ಆಗಸ್ಟ್ 11 : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಟಿದ ತಮ್ಮನ
Posted On: 08 Aug 2024, 08:01 PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಪಡುಬಿದ್ರಿ, ಮಹಿಳಾ ಕಾಂಗ್ರೆಸ್ ಪಡುಬಿದ್ರಿ ಹಾಗೂ ಯುವ ಕಾಂಗ್ರೆಸ್ ಪಡುಬಿದ್ರಿ ಇದರ ಆಶ್ರಯದಲ್ಲಿ ಆಗಸ್ಟ್ 11, ಆದಿತ್ಯವಾರ ಪೂರ್ವಾಹ್ನ ಗಂಟೆ 9.30 ಕ್ಕೆ ಸರಿಯಾಗಿ ಸುಜಾತಾ ಆಡಿಟೋರಿಯಂ ಸಭಾಂಗಣದ ಕಾಂಗ್ರೆಸ್ ಹಿರಿಯ ಮುತ್ಸದ್ದಿ ದಿ.ವೈ ಹಿರಿಯಣ್ಣ ಸಭಾ ವೇದಿಕೆಯಲ್ಲಿ ಆಟಿದ ತಮ್ಮನ ತುಳುನಾಡಿನ ಆಚಾರ ವಿಚಾರಗಳು ನಶಿಸಿ ಹೋಗದಂತೆ ಯುವ ಪೀಳಿಗೆಗೆ ಪ್ರೇರಣೆ ನೀಡುವ ಅಮೋಘ ಕಾರ್ಯಕ್ರಮದ ಜೊತೆಗೆ ವಿಶೇಷ ಆಕರ್ಷಣೆಯಾಗಿ ನೃತ್ಯೋತ್ಸವ ವೈಭವ ಜರುಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಗ್ರಾಮೀಣ ಕಾಂಗ್ರೆಸ್ ಸಮಿತಿ ಪಡುಬಿದ್ರಿ ಅಧ್ಯಕ್ಷರಾದ ಕರುಣಾಕರ್ ಎಮ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು : ಶೈಕ್ಷಣಿಕ ಪರಿಕರಗಳ ವಿತರಣೆ
Posted On: 07 Aug 2024, 09:24 PM
ಕಾಪು : ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು ಇಲ್ಲಿ 2024 -25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾದ ಶೈಕ್ಷಣಿಕ ಪರಿಕರಗಳನ್ನು ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಶೆಟ್ಟಿ ವಿತರಿಸಿದರು. ಅದಾನಿ ಸಂಸ್ಥೆಯಿಂದ ಮಕ್ಕಳಿಗಾಗಿ ಕೊಡೆ, ನೋಟ್ಸ್ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿದರು. ಈ ಸಂದರ್ಭ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಭೋಜ ದೇವಾಡಿಗ, ಉಪಾಧ್ಯಕ್ಷರಾದ ಸುಜಯ, ಮಹೇಶ್ ಬೆಳಪು, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸಾವಿತ್ರಿ, ಶಾಲಾ ಶಿಕ್ಷಕ ವೃಂದ, ಮಕ್ಕಳು, ಪೋಷಕರು ಉಪಸ್ಥಿತರಿದ್ದರು.
ಕಾಪು : ನಿಸರ್ಗ ಫ್ರೆಂಡ್ಸ್ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಶ್ರಮದಾನ
Posted On: 07 Aug 2024, 09:16 PM
ಕಾಪು : ನಿಸರ್ಗ ಫ್ರೆಂಡ್ಸ್ (ರಿ.) ಇದರ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸಲು ಅನಾನುಕೂಲ ವಾಗುತ್ತಿದ ಗಿಡ, ಪೊದೆಗಳನ್ನು ಕಡಿದು ಸ್ಥಳೀಯ ಗ್ರಾಮಸ್ಥರ ಸಹಕಾರ ದೊಂದಿಗೆ ಸ್ವಚ್ಚ ಗೊಳಿಸಲಾಯಿತು. ಗಿಡ, ಪೊದೆಗಳು ರಸ್ತೆಯನ್ನು ಆವರಿಸಿಕೊಂಡಿದ್ದು, ಅಪಘಾತಗಳು ಸಂಭವಿಸುತ್ತಿದವು. ಇಲ್ಲಿನ ಸ್ವಚ್ಛತೆಯ ಮೂಲಕ ನಿಸರ್ಗ ಫ್ರೆಂಡ್ಸ್ ನ ಸದಸ್ಯರು ಆದರ್ಶ ಮೆರೆದಿದ್ದಾರೆ.
ಕಾಪು : ಅಗಲಿದ ಜಯಕರ ಸುವರ್ಣರಿಗೆ ನುಡಿ ನಮನ
Posted On: 07 Aug 2024, 05:49 PM
ಕಾಪು : ಉಡುಪಿ ಜಿಲ್ಲಾ ಕಾರ್ಯ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರು, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ನುಡಿ ನಮನ ಸಲ್ಲಿಸಿದರು. ಸಂಘದ ಕೋಶಾಧಿಕಾರಿ ಹೇಮನಾಥ ಪಡುಬಿದ್ರಿ, ಜಿಲ್ಲಾ ಸಮಿತಿಯ ವಿಜಯ ಉಚ್ಚಿಲ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ : ಕಾಪು ವಲಯದ 33ನೇ ವಾರ್ಷಿಕ ಸಭೆ
Posted On: 05 Aug 2024, 07:38 PM
ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ ಕಾಪು ವಲಯದ 33ನೇ ವಾರ್ಷಿಕ ಸಭೆ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯಿತು. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಸಭೆಯನ್ನು ಉದ್ಘಾಟಿಸಿದರು. ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಕೆ.ಪಿ.ಎ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಎಸ್.ಕೆ.ಪಿ.ಎ ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಎಸ್.ಕೆ.ಪಿ.ಎ. ವಿವಿಧೋದ್ದೇಶ ಸಹಕಾರಿ ಸಂಘ ನಿ. ನಿರ್ದೇಶಕ ರವಿಕುಮಾರ್ ಕಟಪಾಡಿ, ಎಸ್.ಕೆ.ಪಿ.ಎ.ಕಾಪು ವಲಯ ಗೌರವಾಧ್ಯಕ್ಷ ಕರುಣಾಕರ ನಾಯಕ್, ಜಿಲ್ಲಾ ಕಟ್ಟಡ ಸಮಿತಿ ವಲಯ ಪ್ರತಿನಿಧಿ ವಿನೋದ್ ಕಾಂಚನ್, ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ವಲಯದ ಉಪಾಧ್ಯಕ್ಷರುಗಳಾದ ಸಂತೋಷ್ ಕಾಪು ಮತ್ತು ಸತೀಶ್ ಎರ್ಮಾಳು, ವಲಯದ ಕೋಶಾಧಿಕಾರಿ ಕಿರಣ್ ಕಾಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ ಆಟಿದ ಗಮ್ಮತ್ತ್
Posted On: 04 Aug 2024, 05:29 PM
ಪಡುಬಿದ್ರಿ : ಜಾನಪದ ಶೃೆಲಿಯ ಬದುಕು, ಆಹಾರ ಪದ್ದತಿಗಳು ಇಂದಿಗೂ ರೋಗ ಮುಕ್ತ ಜೀವನಕ್ಕೆ ಶಕ್ತಿಯಾಗಿದೆ. ಇಂದಿನ ಅಧುನಿಕ ಆಹಾರ ಪದ್ದತಿಗಳು ಮನುಷ್ಯನ ಆಯುಷ್ಯವನ್ನು ನುಂಗಿ ಬಿಡುತ್ತಿದೆ. ಹಿಂದಿನ ಹಿರಿಯರ ಜೀವನ ನಮ್ಮಗೆಲ್ಲ ಮಾದರಿಯಾಗಿದೆ. ಸೂರ್ಯನ ಬೆಳಕು ಕಡೆಮೆಯಾದಂತೆ ಅಟಿ ತಿಂಗಳಲ್ಲಿ ರೋಗರೋಜಿನ ಗಳು ಹೆಚ್ಚಾಗುತ್ತಿದ್ದವು. ಇದಕ್ಕಾಗಿ ವಿವಿಧ ಗಿಡ ಮೂಲಿಕೆಗಳ ಕಷಾಯ, ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು ಎಂದು ಸುರತ್ಕಲ್ ರಿದಮ್ ಫೌಂಡೇಶನ್ ನಿರ್ದೇಶಕ ಸುಧಾಕರ್ ಸಾಲ್ಯಾನ್ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ ಪಡುಬಿದ್ರಿ ಸಹಕಾರ ಸಂಗಮದಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ತುಳು ಸಾಹಿತಿ, ಜಾನಪದ ವಿದ್ವಾಂಸ ಸುಧಾಕರ್ ಸಾಲ್ಯಾನ್ ರವರನ್ನು ಸನ್ಮಾನಿಸಲಾಯಿತು. ರೋಟರಿ ಅಧ್ಯಕ್ಷೆ ತಸ್ನೀನ್ ಅರಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಪೂರ್ವಾಧ್ಯಕ್ಷ ಪಿ.ಕೃಷ್ಣ ಬಂಗೇರ, ಇನ್ನರ್ ವೀಲ್ ಅಧ್ಯಕ್ಷೆ ರಾಜೇಶ್ವರಿ ಅವಿನಾಶ್, ರೋಟರಿ ಕಾರ್ಯದರ್ಶಿ ಹೇಮಲತಾ ಸುವರ್ಣ, ಕಾರ್ಯಕ್ರಮ ನಿರ್ದೇಶಕರಾದ ಪುಷ್ಪಲತಾ ಗಂಗಾಧರ್, ಸುನೀತಾ ಭಕ್ತವತ್ಸಲ ಉಪಸ್ಥಿತರಿದ್ದರು. ತಸ್ನೀನ್ ಅರಾ ಸ್ವಾಗತಿಸಿದರು. ಸಂತೋಷ್ ಪಡುಬಿದ್ರಿ ಪ್ರಸ್ತಾವನೆಗೃೆದರು. ಬಿ.ಎಸ್ ಆಚಾರ್ಯ ನಿರೂಪಿಸಿದರು. ಸ್ನೇಹಾ ಪ್ರವೀಣ್ ವಂದಿಸಿದರು. ಆಟಿ ತಿಂಗಳ ವಿಶೇಷ ಆಹಾರ ಪದಾರ್ಥಗಳನ್ನು ಉಣ ಬಡಿಸಲಾಯಿತು.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಣೆ
Posted On: 04 Aug 2024, 05:15 PM
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಸತತ ಐದನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಿಸಲಾಯಿತು. ಪಲಿಮಾರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ, ಶರತ್ ಉಡುಪ, ಹೊೖಗೆ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ರಾಘವೇಂದ್ರ ಸುವರ್ಣ, ಜ್ಞಾನೇಶ್ , ಲಕ್ಷ್ಮಣ್ ಕೋಟ್ಯಾನ್, ಅರುಣ್ ಪೂಜಾರಿ, ರೋಷನ್, ಶ್ರೀನಿತ್, ಶ್ರೀಜಿತ್, ಅಂಕಿತ್, ಸಂಪತ್ ಉಪಸ್ಥಿತರಿದ್ದರು.
ತೆಂಕ ಎರ್ಮಾಳು ಅಟೋ ರಿಕ್ಷಾ ನಿಲ್ದಾಣಕ್ಕೆ ಸಿಮೆಂಟ್ ಬೆಂಚ್ಗಳ ಕೊಡುಗೆ
Posted On: 04 Aug 2024, 04:57 PM
ಎರ್ಮಾಳು : ತೆಂಕ ಎರ್ಮಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಟೋ ರಿಕ್ಷಾ ನಿಲ್ದಾಣಕ್ಕೆ ಬಹುದಿನಗಳ ಬೇಡಿಯ ಸಿಮೆಂಟ್ ಬೆಂಚ್ಗಳನ್ನು ದಾನಿಯೋರ್ವರು ನೀಡಿದ್ದು, ಈ ಸಂದರ್ಭ ಅವರನ್ನು ಎರ್ಮಾಳು ಅಟೋ ಯೂನಿಯನ್ ವತಿಯಿಂದ ಗೌರವಿಸಲಾಯಿತು. ಪೂಂದಾಡು ಕುಟ್ಟಿ ಪೂಜಾರಿಯವರ ಪುತ್ರ ದಿನೇಶ್ ಪೂಜಾರಿಯವರು ಸುಮಾರು ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ನಾಲ್ಕು ಸಿಮೆಂಟ್ ಬೆಂಚ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭ ಎರ್ಮಾಳು ಅಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಸುರೇಶ್ ಎರ್ಮಾಳ್, ಉಪಾಧ್ಯಕ್ಷ ರಾಜು ಪೂಜಾರಿ, ಕಾರ್ಯದರ್ಶಿ ಭರತ್ ಶೆಟ್ಟಿಗಾರ್, ಕೋಶಾಧಿಕಾರಿ ನದೀಮ್, ತೆಂಕ ಗ್ರಾ.ಪಂ. ಸದಸ್ಯರಾದ ಸಂತೋಷ್, ಮನೋಜ್ ಹಾಗೂ ಅಟೋ ಯೂನಿಯನ್ ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ರಸ್ತೆ ದುರಸ್ತಿ ಕಾರ್ಯ ಪೂರ್ಣ ; ಸೋಮವಾರದಿಂದ ಬ್ಲೂ ಫ್ಲಾಗ್ ಬೀಚ್ ವೀಕ್ಷಣೆಗೆ ಅವಕಾಶ
Posted On: 04 Aug 2024, 04:54 PM
ಪಡುಬಿದ್ರಿ : ಕಡಲ ಕೊರೆತದಿಂದಾಗಿ ರಸ್ತೆಯ ಸಂಪರ್ಕವನ್ನು ಕಳೆದುಕೊಂಡಿದ್ದ ಬ್ಲೂ ಫ್ಲಾಗ್ ಬೀಚ್ ಗೆ ಹೋಗುವ ಮಾರ್ಗದ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು ಆಗಸ್ಟ್ 5, ಸೋಮವಾರದಿಂದ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಕಾಪು ಕ್ಷೇತ್ರದ ಶಾಸಕರು ಹಾಗೂ ಬಂದರು, ಮೀನುಗಾರಿಕಾ ಸಚಿವರ ಆದೇಶದಂತೆ ಕೇವಲ ಐದು ದಿನದ ಅವಧಿಯಲ್ಲಿ ರಸ್ತೆ ದುರಸ್ತಿ ಕಾರ್ಯವು ಪೂರ್ಣಗೊಂಡಿದೆ ಎಂದು ಬ್ಲೂ ಫ್ಲಾಗ್ ಬೀಚ್ ಮ್ಯಾನೇಜರ್ ವಿಜಯ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ
Posted On: 04 Aug 2024, 04:33 PM
ಕಾಪು : ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ರವಿವಾರ ಕಾಪು ಪೇಟೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹಾಲೆ ಮರದ ತೊಗಟೆಯ ಕಷಾಯವನ್ನು ವಿತರಿಸಲಾಯಿತು. ಬಿರುವೆರ್ ಕಾಪು ಸೇವಾ ಸಮಿತಿಯ ಸದಸ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಮುಂಜಾನೆ ಬೆಳಪುವಿನಿಂದ ಸಂಗ್ರಹಿಸಿ ತಂದ ಹಾಲೆ ಮರದ ತೊಗಟೆಯಲ್ಲಿ ಸುಮಾರು 100 ಲೀಟರ್ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಅದರ ಜತೆಗೆ ಮೆಂತೆ ಪಾಯಸವನ್ನೂ ಸರ್ವಧರ್ಮೀಯರಿಗೆ ವಿತರಿಸಲಾಯಿತು. ಬಿರುವೆರ್ ಕಾಪು ಸೇವಾ ಸಮಿತಿ ಗೌರವಾಧ್ಯಕ್ಷ ಭಾಸ್ಕರ್ ಅಂಚನ್, ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್, ಪದಾಧಿಕಾರಿಗಳಾದ ವಿಕ್ಕಿ ಪೂಜಾರಿ ಮಡುಂಬು, ಅತಿಥ್ ಸುವರ್ಣ ಪಾಲಮೆ, ದೀಪಕ್ ಕುಮಾರ್ ಎರ್ಮಾಳು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸುಜನ್ ಎಲ್. ಸುವರ್ಣ, ಅನಿಲ್ ಅಮೀನ್ ಕಾಪು, ಅಶ್ವಿನಿ ನವೀನ್, ಸಂಧ್ಯಾ ಬಿ. ಕೋಟ್ಯಾನ್, ಇನ್ನಂಜೆ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ, ಸ್ಥಳೀಯರಾದ ಶಿವಾನಂದ ಪೂಜಾರಿ ಮುನ್ನ, ರಮೇಶ್ ಪೂಜಾರಿ ಮಲ್ಲಾರು, ಅಶ್ವಿನಿ ಜಿ. ಕೋಟ್ಯಾನ್, ಸಂದೇಶ್ ಪೂಜಾರಿ, ರವಿ ಪೂಜಾರಿ ಮೊದಲಾದವರು ಸಹಕರಿಸಿದರು.
