Updated News From Kaup
37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ
Posted On: 10-07-2024 06:05PM
ಉಚ್ಚಿಲ : 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆಗೊಂಡಿದ್ದಾರೆ.
ಕಾಂತಾವರ ಗ್ರಾಮಸಭೆ ; ಅಭಿನಂದನೆ
Posted On: 10-07-2024 10:37AM
ಕಾಂತಾವರ : ಇಲ್ಲಿನ ಗ್ರಾಮ ಪಂಚಾಯತ್ ನ ಈ ವರ್ಷದ ಪ್ರಥಮ ಗ್ರಾಮಸಭೆ ಕಾಂತಾವರ ಕನ್ನಡ ಸಂಘದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಯು ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಮಾಹಿತಿ ನೀಡಿದರು.
ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಿ : ಶ್ರೀನಿಧಿ ಹೆಗ್ಡೆ
Posted On: 10-07-2024 06:55AM
ಉಡುಪಿ : ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರು ಕೂಡ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇನ್ನು ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ ಹೇಳುವ ಕೆಲಸಕ್ಕೂ ಮುಂದಾಗಲಿಲ್ಲ ಎನ್ನುವುದು ವಿಪರ್ಯಾಸ.
ಕಾಪು : 50 ಲಕ್ಷ ರೂ. ಅನುದಾನದಲ್ಲಿ ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿದೆ ಗೋಶಾಲೆ, ಗೋರುದ್ರಭೂಮಿ
Posted On: 09-07-2024 06:52PM
ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಮಂಗಳವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತಿಭ್ರಮಣೆಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ : ವಿನಯ್ ಕುಮಾರ್ ಸೊರಕೆ
Posted On: 09-07-2024 06:40PM
ಕಾಪು : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿ. ಜೆ.ಪಿಯವರ ಹಿಂಸಾಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮುದ್ವೇಷವನ್ನೇ ಬಂಡವಾಳವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿ. ಜೆ.ಪಿ ಗರಿಗೆ ಬರ ಸಿಡಿಲು ಬಡಿದಂತಾಗಿದೆ. ಸರ್ವಾಧಿಕಾರಿ ಧೋರಣೆಯ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ಕಡಿವಾಣ ಹಾಕುವ ಮೂಲಕ ಸಂವಿಧಾನದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುತ್ತಿದ್ದವರ ಮೇಲೆ ಎರಗಿದ ಸಂವಿಧಾನವೆಂಬ ಸಿಡಿಲಿನ ಆಘಾತಕ್ಕೆ ಬಿ. ಜೆ.ಪಿ ತತ್ತರಿಸಿ ಹೋಗಿದೆ.
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ಲೈನ್ ಫಾಲೋವಿಂಗ್ ರೋಬೋಟ್ ತಾಂತ್ರಿಕ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ
Posted On: 09-07-2024 04:31PM
ಶಿರ್ವ : ಮಂಗಳೂರಿನ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ ಇವರು ಜುಲೈ 7 ರಂದು ಆಯೋಜಿಸಿದ್ದ "Tech-X 2024" ತಾಂತ್ರಿಕ ಸ್ಪರ್ಧೆಯಲ್ಲಿ ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಪವನ್ ಗೋಂಡ್, ವಿಶ್ವಾಸ್ ಭಟ್, ರಂಜನ್ ಪೂಜಾರಿ, ವಿಜೇತಾ, ಗಣಕಯಂತ್ರ ವಿಭಾಗ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಶ್ರೀ ಹರ್ಷ ಗುನಗಾ ಇವರು “ಲೈನ್ ಫಾಲೋವಿಂಗ್ ರೋಬೋಟ್" ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿರುತ್ತಾರೆ.
ರೋಟರಿ ಕ್ಲಬ್ ಶಂಕರಪುರ - ರಸ್ತೆ ಸುರಕ್ಷತೆ ಮತ್ತು ಸೈಬರ್ ಕ್ರೈo ಮಾಹಿತಿ ; ರಸ್ತೆ ಸುರಕ್ಷತೆಯ ಕರಪತ್ರ ಬಿಡುಗಡೆ
Posted On: 09-07-2024 03:38PM
ಶಿರ್ವ : ರೋಟರಿ ಕ್ಲಬ್ ಶಂಕರಪುರದ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಸೈಬರ್ ಕ್ರೈo ಬಗ್ಗೆ ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಅಡಿಗ ಇವರು ಮಾಹಿತಿ ನೀಡಿ, ರಸ್ತೆ ಸುರಕ್ಷತೆಯ ಕರಪತ್ರ ಬಿಡುಗಡೆಗೊಳಿಸಿದರು.
ಕಾಪು : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಕಾಪು ಹೊಸ ಮಾರಿಗುಡಿ ಭೇಟಿ
Posted On: 09-07-2024 02:00PM
ಕಾಪು : ಪುರುಷರ ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಿಲ್ಲರ್ ಅವರ ಅಮೂಲ್ಯ ಕ್ಯಾಚ್ ಹಿಡಿದು ಟೀಂ ಇಂಡಿಯಾಕ್ಕೆ ಜಯ ತಂದು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದಿವೀಶಾ ಶೆಟ್ಟಿ ಮಂಗಳವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಾಳೆ (ಜು.9) ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ
Posted On: 08-07-2024 08:39PM
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 9ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಿದೆ.
ರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್ : ಕಟಾ, ಕುಮಿಟೆ ವಿಭಾಗದಲ್ಲಿ ಹರ್ಷಿತಾ ಇನ್ನಂಜೆ ಪ್ರಥಮ ಸ್ಥಾನ
Posted On: 08-07-2024 06:44PM
ಕಾಪು : ಗದಗದಲ್ಲಿ ಜುಲೈ 7 ರಂದು ನಡೆದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಬಾಲಕಿಯರ ಬ್ಲಾಕ್ ಬೆಲ್ಟ್ ಅಂಡರ್ 21 ಕಟಾ ವಿಭಾಗದಲ್ಲಿ ಹಾಗೂ ಬ್ಲಾಕ್ ಬೆಲ್ಟ್ +65KG ಕುಮಿಟೆ ವಿಭಾಗದಲ್ಲಿ ಹರ್ಷಿತಾ ಇನ್ನಂಜೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
