Updated News From Kaup
ಉದ್ಯಾವರ : ಆಟೋ, ಟೆಂಪೋ ಮಾಲಕ ಆತ್ಮಹತ್ಯೆ
Posted On: 08-07-2024 06:24PM
ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಉದ್ಯಾವರ ಹಿಂದೂ ರುದ್ರ ಭೂಮಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜುಲೈ 9 (ನಾಳೆ) : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Posted On: 08-07-2024 06:20PM
ಉಡುಪಿ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳತ್ತೂರು : ಕೆ, ಕೆ ಬಾಯ್ಸ್ ಆಶ್ರಯದ ಕೆಸರ್ಡೊಂಜಿ ದಿನ ಕಾರ್ಯಕ್ರಮ ಸಂಪನ್ನ
Posted On: 08-07-2024 08:29AM
ಕಳತ್ತೂರು : ಇಲ್ಲಿನ ಕೆ. ಕೆ ಬಾಯ್ಸ್ ಅಶ್ರಯದಲ್ಲಿ ಕುಕ್ಕುಂಜ ಹಾಗೂ ಕಳತ್ತೂರು ಗ್ರಾಮಸ್ಥರಿಗೆ ಆಯೋಜನೆ ಮಾಡಿದ ಕೆಸರ್ಡೊಂಜಿ ದಿನ ಕಾರ್ಯಕ್ರಮ ಸಂಪನ್ನಗೊಂಡಿತು.
ಪಡುಬೆಳ್ಳೆ ನಾರಾಯಣಗುರು ಶಾಲೆಯ ಇಂಟರ್ಯಾಕ್ಟ್ ವಿದ್ಯಾರ್ಥಿಗಳಿಂದ ಗದ್ದೆ ನಾಟಿ ; ಕೃಷಿ ಮಾಹಿತಿ
Posted On: 08-07-2024 06:38AM
ಶಿರ್ವ : ಪಡುಬೆಳ್ಳೆ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಇಂಟರ್ಯಾಕ್ಟ್ ವಿದ್ಯಾರ್ಥಿಗಳು ಪಡುಬೆಳ್ಳೆಯ ಸಡಂಬೈಲು ಪ್ರಗತಿಪರ ಕೃಷಿಕ ರಘುರಾಮ ನಾಯಕ್ ತೊಟ್ಟಿಲು ಮನೆಯ ದೊಡ್ಡ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಬೇಸಾಯಗಾರರ ಕೃಷಿ ದಿನಚರಿಯ ಬಗ್ಗೆ ಪ್ರತ್ಯಕ್ಷ ಅನುಭವ ಪಡೆದು ಕೊಂಡರು.
ಬಂಟಕಲ್ಲು : ಪಿಎಚ್ಡಿ ಸಾಧಕಿ ಡಾ.ವಾರಿಜಾ ಮೋಹನ್ ರವರಿಗೆ ಅಭಿನಂದನೆ, ಸನ್ಮಾನ
Posted On: 08-07-2024 06:32AM
ಬಂಟಕಲ್ಲು : ಉಡುಪಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ವಾರಿಜಾ ಮೋಹನ್ ಇವರು ಮಂಡಿಸಿದ "ಜಾಬ್ ಅಟ್ಯಿಟ್ಯೂಡ್ ಅಮಂಗ್ ಔಟ್ಸೊರ್ಸಸ್ಡ್ ಎಂಪ್ಲಾಯ್ಸ್ ಇನ್ ಗವರ್ನಮೆಂಟ್ ಡಿಪಾರ್ಟ್ಮೆಂಟ್ -ಅ ಸ್ಟಡಿ ವಿಥ್ ರೆಫರೆನ್ಸ್ ಟು ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ" ಎಂಬ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿವಿ ಯಿಂದ ಡಾಕ್ಟರೇಟ್ ಪದವಿ ಪಡೆದ ಪ್ರಯುಕ್ತ ಬಂಟಕಲ್ಲು ಎಸ್.ವಿ.ಕನ್ಸ್ಟ್ರಕ್ಷನ್ಸ್ ಮತ್ತು ಪದಕಣ್ಣಾಯ ಫ್ಯಾಮಿಲಿ ಟ್ರಸ್ಟ್ ಇದರ ವತಿಯಿಂದ ರವಿವಾರ ಅಭಿನಂದಿಸಿ ಸನ್ಮಾನಿಸಲಾಯಿತು.
ಮೂಡಬೆಟ್ಟು : ಉಸಿರಿಗಾಗಿ ಹಸಿರು ಕಾರ್ಯಕ್ರಮ
Posted On: 07-07-2024 07:39PM
ಕಟಪಾಡಿ : ಉಸಿರಿಗಾಗಿ ಹಸಿರು ಸಂಘಟನೆ ಆಯೋಜಿಸುವ "ಉಸಿರಿಗಾಗಿ ಹಸಿರು" ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರವಿವಾರ ನಡೆಯಿತು.
ಬ್ರಹ್ಮಾವರ : ಆಸರೆ ರುಡ್ ಸೆಟ್ ನೇತೃತ್ವದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ
Posted On: 07-07-2024 07:32PM
ಬ್ರಹ್ಮಾವರ : ಇಲ್ಲಿನ ಆಸರೆ ರುಡ್ ಸೆಟ್ ಸಂಘಟನೆಯ ನೇತೃತ್ವದಲ್ಲಿ ರುಡ್ ಸೆಟ್ ಆವರಣದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.
ಶಿರ್ವ ಸಂತ ಮೇರಿ ಪ.ಪೂ ಕಾಲೇಜು ಹಳೆ ವಿದ್ಯಾರ್ಥಿ ಸಂಘ : 2.50 ಲಕ್ಷ ವಿದ್ಯಾರ್ಥಿವೇತನ ವಿತರಣೆ
Posted On: 07-07-2024 06:37PM
ಶಿರ್ವ : ಸುವರ್ಣ ವರ್ಷದ ಸಂಭ್ರಮದಲ್ಲಿರುವ ಶಿರ್ವ ಸಂತ ಮೇರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತರಾಗಿರುವ ಪ್ರಸ್ತುತ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಈ ಸಂಸ್ಥೆಯಲ್ಲಿ ಕಲಿತು ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ಲಕ್ಷ 50 ಸಾವಿರ ರೂ. ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಪಡುಬಿದ್ರಿ : ರೋಟರಿ ಕ್ಲಬ್ ಪದಗ್ರಹಣ
Posted On: 07-07-2024 06:07PM
ಪಡುಬಿದ್ರಿ : ನಾಯಕತ್ವ ಎನ್ನುವುದು ಪದವಿಯಲ್ಲ ಅದು ಸವಾಲಿನ ಪ್ರಕ್ರಿಯೆಯಾಗಿದೆ. ಸಮಾನತೆ, ಶಿಸ್ತಿನ ಮೂಲಕ ಸರ್ವರನ್ನು ಸೇರಿಸಿಕೊಂಡು ಕಾರ್ಯಪ್ರವೃತ್ತರಾದಾಗ ಯಾವುದೇ ಸಂಸ್ಥೆ ಯಶಸ್ಸನ್ನು ಸಾಧಿಸಲು ಸಾಧ್ಯ. ಒಂದು ಕಾಲದಲ್ಲಿ ಮಹಿಳೆಯರಿಗೆ ಅವಕಾಶವಿಲ್ಲದ ರೋಟರಿ ಸಂಸ್ಥೆಯಲ್ಲಿ ನಂತರದ ದಿನಗಳಲ್ಲಿ ಮಹಿಳೆಯರ ಕೊಡುಗೆಗಳಿಂದ ರೋಟರಿ ಸಂಸ್ಥೆ ಶ್ರೀಮಂತವಾಯಿತು ಎಂದರೆ ತಪ್ಪಾಗಲಾರದು ಎಂದು ವಲಯ-9ರ ನಿಕಟಪೂರ್ವ ಸಹಾಯಕ ಗವರ್ನರ್ ರೋ.ಡಾ . ಪ್ರೀತಿ ಮೋಹನ್ ಹೇಳಿದರು. ಅವರು ಶನಿವಾರ ಪಡುಬಿದ್ರಿಯ ಸುಜಾತ ಅಡಿಟೋರಿಯಂನಲ್ಲಿ ಜರಗಿದ ಪಡುಬಿದ್ರಿ ರೋಟರಿ ಸಂಸ್ಥೆಯ 2024 -25ನೇ ಸಾಲಿನ ಪದಗ್ರಹಣ ಅಧಿಕಾರಿಯಾಗಿ ಪದಗ್ರಹಣ ನೆರವೇರಿಸಿ ಮಾತನಾಡಿದರು.
ವೈದ್ಯಕೀಯ ಪ್ರತಿನಿಧಿ ಸಂಘ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ : 22 ನೇ ವಷ೯ದ ವೈದ್ಯರ ದಿನಾಚರಣೆ
Posted On: 07-07-2024 05:50PM
ಉಡುಪಿ : ಸಮಾಜದಲ್ಲಿ ಅತ್ಯಂತ ಗೌರವದಿಂದ ನಾವೆಲ್ಲರೂ ನೋಡುವ ವ್ಯಕ್ತಿಗಳೆಂದರೆ ವೈದ್ಯರು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪುರಭವನದಲ್ಲಿ ಉಡುಪಿ ಜಿಲ್ಲಾ ವೈದ್ಯಕೀಯ ಪ್ರತಿನಿಧಿಗಳ ಸಂಘ (ಕೆ.ಎಸ್.ಎಂ, ಎಸ್.ಆರ್.ಎ) ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ವತಿಯಿಂದ ನಡೆದ 22 ನೇ ವಷ೯ದ ವೈದ್ಯರ ದಿನಾಚರಣೆ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರನ್ನು ನಾವು ದೇವರ ಸಮಾನರಂತೆ ಕಾಣುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯರುಗಳ ಮೇಲೆ ನಡೆಯುತ್ತಿರುವ ಹಲ್ಲೆ, ದೌಜ೯ನ್ಯಗಳು ಖಂಡನೀಯ ಎಂದರು.
