Updated News From Kaup
ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ಶೂ, ಸಾಕ್ಸ್ ವಿತರಣೆ ; ಆರೋಗ್ಯ ಮಾಹಿತಿ ಕಾರ್ಯಕ್ರಮ
Posted On: 29 Jul 2024, 06:58 PM
ಹೆಜಮಾಡಿ : ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಸರಕಾರದ ವತಿಯಿಂದ ನೀಡಲಾಗುವ ಶೂ,ಸಾಕ್ಸ್ ವಿತರಣಾ ಕಾರ್ಯಕ್ರಮ ಸೋಮವಾರ ಜರಗಿತು. ಶಿಕ್ಷಕರಿಂದ ಸಾಂಕ್ರಾಮಿಕ ರೋಗಗಳು, ಮಾದಕ ವಸ್ತುಗಳು ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಲಾಯಿತು. ಶಿಕ್ಷಕಿ ದೀಪಾ ಉಡುಪ ರವರು ಪರೀಕ್ಷಾ ಕ್ರಮಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸತೀಶ್ ನಾಯಕ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಸಂಸ್ಥೆಯ ಹಳೆ ವಿದ್ಯಾರ್ಥಿ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಪಂಚಾಯತ್ ಸದಸ್ಯ ಪಾಂಡುರಂಗ ಕರ್ಕೇರ, ಎಸ್ ಡಿ ಎಮ್ ಸಿಯ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಸಂಪಾವತಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಸಿದರು. ಶಿಕ್ಷಕಿಯರಾದ ಅನಿತಾ ಕಾರ್ಯಕ್ರಮ ನಿರೂಪಿಸಿ, ಸರೋಜಾ ಆಚಾರಿ ವಂದಿಸಿದರು.
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ - ಕಾಪು ವಲಯದ ಕುಟುಂಬ ಸಮ್ಮಿಲನ ಕಾರ್ಯಕ್ರಮ
Posted On: 29 Jul 2024, 06:47 PM
ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು K1 ಹೋಟೆಲ್ ಕಾಪು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ವೃತ್ತಿಯ ಒತ್ತಡದ ನಡುವೆ ಕುಟುಂಬ ಸಮ್ಮಿಲನದಂತಹ ಕಾರ್ಯಕ್ರಮಗಳು ಸದಸ್ಯರಿಗೆ ಅನಿವಾರ್ಯ. ಬಾಂಧವ್ಯವನ್ನು ಉಳಿಸಿ ಬೆಳೆಸಲು ಸಹಕಾರಿಯಾಗಿದೆ ಎಂದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಕಲಶ್ರೀ, ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್, ಕಾಪು ವಲಯದ ಉಪಾಧ್ಯಕ್ಷರುಗಳಾದ ಸಂತೋಷ್ ಕಾಪು, ಸತೀಶ್ ಎರ್ಮಾಳು, ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಕೋಶಾಧಿಕಾರಿ ಕಿರಣ್ ಕಾಪು ಉಪಸ್ಥಿತರಿದ್ದರು. ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಶ್ವತ್ ಪೂಜಾರಿ ನಿರೂಪಿಸಿದರು. ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ ವಂದಿಸಿದರು.
ಪಡುಬಿದ್ರಿ : ಕೃಷಿಗೆ ಒತ್ತು ನೀಡದ ಕಾರಣ ಕೃಷಿ ನಾಶದ ಅಂಚಿಗೆ ಸಾಗುತ್ತಿದೆ - ವಿನಯ ಕುಮಾರ್ ಸೊರಕೆ
Posted On: 29 Jul 2024, 06:22 PM
ಪಡುಬಿದ್ರಿ : ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಇಂದಿನ ಜನಾಂಗ ಕೃಷಿಗೆ ಒತ್ತು ನೀಡದ ಕಾರಣ ಕೃಷಿ ನಾಶದ ಅಂಚಿಗೆ ಸಾಗುತ್ತಿದೆ. ಕೃಷಿಯಿಂದ ನಮ್ಮ ಹಿರಿಯರು ಆರೋಗ್ಯಕರ ಮತ್ತು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಇಂದು ಅತೀ ವೇಗದ ಆಧುನಿಕ ಬದುಕಿಗೆ ಒಗ್ಗಿಕೊಳ್ಳುವ ಪರಿಸ್ಥಿತಿಗೆ ಬಂದಿದೆ. ಇದರಿಂದ ಆರೋಗ್ಯಕರ ಭೂಮಿ ತಾಯಿಯ ಮಣ್ಣಿನಿಂದ ದೂರ ಸರಿಯುವಂತಾಗಿದೆ. ಸಂಬಂಧಗಳು ಕಳೆದು ಕೊಳ್ಳುವಂತಾಗಿದೆ. ಆದ್ದರಿಂದ ಯುವ ಪೀಳಿಗೆ ಕೃಷಿ ಬದುಕಿನತ್ತ ಒಲುವು ಮೂಡಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಕರ್ನಾಟಕದ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪಡುಬಿದ್ರಿ ಬ್ರಹ್ಮಸ್ಥಾನದ ಬಳಿಯ ಗದ್ದೆಯಲ್ಲಿ ನಡೆದ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸನ್ಮಾನ/ಬಹುಮಾನ ವಿತರಣೆ : ದೃೆವ ನರ್ತಕ ಭಾಸ್ಕರ್ ಬಂಗೇರ, ಹಿರಿಯ ರಾಜಕೀಯ ಮುತ್ಸದ್ಧಿ ಸಂಜೀವಿ ಪೂಜಾರ್ತಿ, ಸೀಸನ್ ಬಾಲ್ ಕ್ರಿಕೆಟ್ ಪಟು ಅಂಕಿತ್ ಪೂಜಾರಿ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿಯೇ 5 ನೇ ರ್ಯಾಂಕ್ ಪಡೆದ ಚಿನ್ಮಯಿ ಪೃೆ, ಆಶಾ ಕಾರ್ಯಕರ್ತೆ ರಜನಿ ದೇವಾಡಿಗ, ಬಿ.ಎಲ್.ಓ ಸುನೀತಾರವರನ್ನು ಸನ್ಮಾನಿಸಲಾಯಿತು. ಕೆಸರು ಗದ್ದೆಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಹಗ್ಗ - ಜಗ್ಗಾಟ ಪುರುಷ ವಿಭಾಗದಲ್ಲಿ ಕೋಸ್ಚಲ್ ಎ ತಂಡ ಪ್ರಥಮ ಸ್ಥಾನವನ್ನು ಮತ್ತು ಕೋಸ್ಟಲ್ ಬಿ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಕುಂಜಾರಮ್ಮ ಕುರ್ಕಾಲು ತಂಡ ಪ್ರಥಮ ಸ್ಥಾನವನ್ನು ಮತ್ತು ಖಡ್ಗೇಶ್ವರಿ ಪಡುಬಿದ್ರಿ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿತು. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಸುವರ್ಣ, ಮಾಜಿ ತಾ.ಪಂ.ಸದಸ್ಯ ನವೀನಚಂದ್ರ ಜೆ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ನವೀನ್ ಎನ್. ಶೆಟ್ಟಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಕಾಡಿಪಟ್ನ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್, ಕಾಪು ತಾಲೂಕು ಅಂಬೇಡ್ಕರ್ ಯುವ ಸೇನಾ ಸಮಿತಿ ಗೌ.ಅಧ್ಯಕ್ಷ ಪಿ.ಕೃಷ್ಣ ಬಂಗೇರ, ಸುಚರಿತ ಎಲ್ ಅಮೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ಆಚಾರ್ಯ, ಹೆಜಮಾಡಿ ಗ್ರಾ.ಪಂ.ಸದಸ್ಯೆ ನಿರ್ಮಲಾ ಕೆ., ರೋಟರಿ ಅಧ್ಯಕ್ಷೆ ತಸ್ನೀನ್ ಅರಾ, ಪಡುಬಿದ್ರಿ ಗ್ರಾ.ಪಂ.ಸದಸ್ಯರಾದ ಜ್ಯೋತಿ ಮೆನನ್, ಗುಲಾಬಿ, ಮುಭೀನಾ ಬೇಗಮ್, ಮಹಮ್ಮದ್ ನಿಯಾಜ್, ಎಮ್ ಎಸ್ ಶಾಫಿ, ಸುನಂದಾ ಸಾಲ್ಯಾನ್, ಶೇಖರ್ ಸಾಲ್ಯಾನ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭ : ಮಾಜಿ ಸಚಿವ ವಿನಯ ಕುಮಾರ್ ಸೊರಕೆ , ವಕ್ಫ್ ಬೋರ್ಡ್ ಮಾಜಿ ಸದಸ್ಯ ಗುಲಾಂ ಅಹಮ್ಮದ್, ಸಾಮಾಜಿಕ ಹೋರಾಟಗಾರ ಶೇಖರ್ ಹೆಜ್ಮಾಡಿ, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಲ್ಫಿ ಡಿ ಕೋಸ್ತಾ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಜಾನಪದ ವಿದ್ವಾಂಸ ಪಿ.ಕೆ ಸದಾನಂದ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶರ್ಫುದ್ದೀನ್ ಶೇಕ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಚರಿತಾ ಅಮೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ಆಚಾರ್ಯ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಸುರೇಶ್ ಎರ್ಮಾಳ್ ತೀರ್ಪುಗಾರರಾಗಿ ಸಹಕರಿಸಿದ್ದರು. ಗಣೇಶ್ ಕೋಟ್ಯಾನ್ ಸ್ವಾಗತಿಸಿ, ಪ್ರಸ್ತಾವನೆಗೈದರು. ರಾಜೇಶ್ ಶೇರಿಗಾರ್ ನಿರೂಪಿಸಿದರು. ಸಂತೋಷ್ ಪಡುಬಿದ್ರಿ ವಂದಿಸಿದರು.
ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲಬ್ಬರಕ್ಕೆ ರಸ್ತೆ ಕುಸಿತ ; ಜುಲೈ 31 ರವರೆಗೆ ಬ್ಲೂ ಫ್ಲ್ಯಾಗ್ ಬೀಚ್ ಗೆ ನಿರ್ಬಂಧ
Posted On: 29 Jul 2024, 07:13 AM
ಪಡುಬಿದ್ರಿ : ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್ಗೆ ತೆರಳುವ ಸಂಪರ್ಕ ರಸ್ತೆಯ ತಳ ಭಾಗಕ್ಕೆ ತೆರೆಗಳು ಅಪ್ಪಳಿಸಿ ರಸ್ತೆಯ ಒಂದು ಭಾಗ ಕುಸಿದಿದೆ. ಈ ಹಿನ್ನೆಲೆಯಲ್ಲಿ ಬೀಚ್ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್ ಬೀಚ್ ವೀಕ್ಷಣೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಆದೇಶ ಹೊರಡಿಸಿದೆ.
ಕಾಪು : ಇನ್ನಂಜೆ ಮಹಿಳಾ ಮಂಡಳಿ - ಆಟಿಡೊಂಜಿ ದಿನ
Posted On: 29 Jul 2024, 07:01 AM
ಕಾಪು : ಇನ್ನಂಜೆ ಮಹಿಳಾ ಮಂಡಳಿ (ರಿ.) ಇನ್ನಂಜೆ ಇದರ ಆಶ್ರಯದಲ್ಲಿ ಸುವರ್ಣ ಸಭಾ ಭವನ ಯುವಕ ಮಂಡಲ(ರಿ.) ಇನ್ನಂಜೆ ಇಲ್ಲಿ ರವಿವಾರ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಇನ್ನಂಜೆ ಮಹಿಳಾ ಮಂಡಳಿಯ ಗೌರವ ಸಲಹೆಗಾರರಾದ ಸಖುನಂದನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ನಿವೃತ್ತ ಅಧಿಕಾರಿ ಮೀರಾ ಆಟಿಯ ಬಗ್ಗೆ ತಿಳಿಸಿದರು. ಗ್ರಾಮದ ಹಿರಿಯ ನಾಟಿ ವೈದ್ಯರಾದ ನಾಗಿ ಮಡಿವಾಳ ಮತ್ತು ಕಮಲ ಆಚಾರ್ಯರನ್ನು ಸನ್ಮಾನಿಸಲಾಯಿತು. ವಿಶೇಷ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನಂಜೆ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ವೇತಾ ಲಕ್ಷ್ಮಣ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಇನ್ನಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ಇನ್ನಂಜೆಯ ಆಡಳಿತಾಧಿಕಾರಿ ಮಂಜುಳಾ ನಾಯಕ್, ಇನ್ನಂಜೆ ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಪುಷ್ಪ ರವೀಂದ್ರ ಶೆಟ್ಟಿ, ಇನ್ನಂಜೆ ಮಹಿಳಾ ಮಂಡಳಿಯ ಪರಿಮಳ ರಮೇಶ್ ಮಿತ್ತಂತಾಯ, ಕಾರ್ಯದರ್ಶಿ ಸಿಲ್ವಿಯಾ ವಿನಿಫೈಡ್ ಕ್ಯಾಸ್ತಲಿನೋ, ಕೋಶಾಧಿಕಾರಿ ಪೂರ್ಣಿಮ ಸುರೇಶ್, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ರಂಗಭೂಮಿ ಕಲಾವಿದ ಪೆರ್ಡೂರು ಪ್ರಭಾಕರ ಕಲ್ಯಾಣಿಯವರಿಗೆ ತೌಳವ ಪ್ರಶಸ್ತಿ
Posted On: 29 Jul 2024, 06:57 AM
ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಸಹಯೋಗದೊಂದಿಗೆ 21ನೇ ವಾರ್ಷಿಕ ಸಂಭ್ರಮದ ಅಂಗವಾಗಿ ಆಗಸ್ಟ್ 2 ರಂದು ಮಂಗಳೂರು ಪುರಭವನದಲ್ಲಿ ಗಣ್ಯರ ಉಪಸ್ಥಿತಿ ಯಲ್ಲಿ ಪೆರ್ಡೂರು ಪ್ರಭಾಕರ ಕಲ್ಯಾಣಿ ಇವರಿಗೆ ಕಳೆದ 45 ವರ್ಷಗಳಿಂದ ತುಳು /ಕನ್ನಡ ರಂಗ ಭೂಮಿಯಲ್ಲಿ ಮಾಡಿದ ಸೇವೆಗಾಗಿ 'ತೌಳವ ಪ್ರಶಸ್ತಿ' ಪ್ರದಾನ ನಡೆಯಲಿದೆ. ಈಗಾಗಲೇ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ವಿಜಯ ಬ್ಯಾಂಕ್ ಕನ್ನಡ ಸಂಘದಿಂದ ವಿಜಯ ಶ್ರೀ ಪ್ರಶಸ್ತಿ ಪಡೆದಿರುತ್ತಾರೆ.
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ ವತಿಯಿಂದ ಸ.ಪ.ಪೂ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ
Posted On: 28 Jul 2024, 06:41 PM
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಪಡುಬಿದ್ರಿಯ ಜಾನಪದ ಚಿಂತಕರಾದ ಪಿ.ಕೆ. ಸದಾನಂದ ಪೂಜಾರಿ ಆಟಿ ತಿಂಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹೊೖಗೆ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟ ಮೊರಾಸ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕರಾದ ಸುಧಾಕರ್ ಶೆಣೈ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು, ಸದಸ್ಯರಾದ ಸುಜಾತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಕುಮಾರ್, ಉಪಾಧ್ಯಕ್ಷರಾದ ಸಂತೋಷ್ ದೇವಾಡಿಗ, ರಾಘವೇಂದ್ರ ಜೆ ಸುವರ್ಣ , ಲಕ್ಷ್ಮಣ ಕೋಟ್ಯಾನ್, ರೋಶನ್, ಶ್ರೀಜಿತ್, ಅಂಕಿತ್ ಉಪಸ್ಥಿತರಿದ್ದರು. ಅರುಣ್ ಪೂಜಾರಿ ಸ್ವಾಗತಿಸಿದರು. ಕಾಲೇಜು ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಕ್ರೀಡೆ ನಡೆಸಿ ಬಹುಮಾನ ವಿತರಿಸಲಾಯಿತು. ಜೊತೆಗೆ ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ಉಣ ಬಡಿಸಲಾಯಿತು.
ಉಡುಪಿ : ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ
Posted On: 28 Jul 2024, 05:04 PM
ಉಡುಪಿ : ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಜುಲೈ 28 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದಭ೯ದಲ್ಲಿ ಕನಕದಾಸ ಶಿಕ್ಷಣ ಸಂಸ್ಥೆಯ ಕಾಯ೯ದಶಿ೯ ರವೀಂದ್ರನಾಥ ದಂಡಿನ, ಸಾಹಿತಿ ಪಂಚಯ್ಯ ಹಿರೇಮಠ, ಗಣಪತಿ ಹೆಗಡೆ, ಮಂಜುನಾಥ ಎಸ್, ಪ್ರವೀಣ್ ಕುಮಾರ್ ಕನ್ಯಾಳ, ರೋಹಿನಿ ಮಿಜಿ೯ ಮುಂತಾದವರಿದ್ದರು.
ಪಡುಬಿದ್ರಿ : ಮುಂಡಾಲ ಯುವ ವೇದಿಕೆಯಿಂದ ವನಮಹೋತ್ಸವ ಕಾರ್ಯಕ್ರಮ
Posted On: 28 Jul 2024, 04:50 PM
ಪಡುಬಿದ್ರಿ : ಪರಿಸರ ಸಮತೋಲನೆಗಾಗಿ ಮನುಷ್ಯ ಸಾಮಾಜಿಕ ಕಳಕಳಿಯಿಂದ ಪರಿಸರ ಸಂರಕ್ಷಣೆ ಮತ್ತು ಸಸ್ಯ ಸಂಕುಲಗಳನ್ನು ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹೇಳಿದರು. ಅವರು ಪಡುಬಿದ್ರಿ ಮುಂಡಾಲ ಯುವ ವೇದಿಕೆಯ ವತಿಯಿಂದ ಸಂತೆಕಟ್ಟೆ ಶ್ರೀಕೋಡ್ದಬ್ಬು ದೈವಸ್ಥಾನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಲ ವೇದಿಕೆಯ ಅಧ್ಯಕ್ಷ ಶಿವಪ್ಪ ಸಾಲ್ಯಾನ್ ವಹಿಸಿದ್ದರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ ಪಡುಬಿದ್ರಿ, ಏಳು ಮಾಗಣೆ ಅಧ್ಯಕ್ಷರಾದ ಸದಾನಂದ ಬೊಗ್ಗರ್ಲಚ್ಚಿಲ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಗಿಡಗಳನ್ನು ವಿತರಿಸಲಾಯಿತು. ಸುರೇಶ್ ಪಡುಬಿದ್ರಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿ, ಪ್ರಸನ್ನ ಪಡುಬಿದ್ರಿ ವಂದಿಸಿದರು.
ಪಡುಬಿದ್ರಿ : ಬಂಟರ ಸಂಘದಲ್ಲಿ ಆಟಿ ಕೂಟ ಕಾರ್ಯಕ್ರಮ
Posted On: 28 Jul 2024, 04:30 PM
ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ನಳಿನಿ ರವೀಂದ್ರನಾಥ ಹೆಗ್ಡೆ, ಶೀಲಾ ಕೆ ಶೆಟ್ಟಿ ತುಳುನಾಡಿನ ಕ್ರೀಡೆ ಚೆನ್ನೆಮನೆ ಆಟದ ಪ್ರಾತ್ಯಕ್ಷಿಕೆ ನೀಡಿದರು. ಸಮಾಜ ಸೇವಕ, ಪ್ರಗತಿಪರ ಕೃಷಿಕ ಸಂತೋಷ್ ಶೆಟ್ಟಿ ಬರ್ಪಾಣಿ ಇವರನ್ನು ಗೌರವಿಸಲಾಯಿತು. ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗಿಡಮೂಲಿಕೆಯ ಸಸಿಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ವೈ. ಶಶಿಧರ್ ಕೆ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ವಹಿಸಿದ್ದರು. ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಎಸ್ ಶೆಟ್ಟಿ ಸ್ವಾಗತಿಸಿದರು. ಅಕ್ಷತಾ ಸುರೇಂದ್ರ ಶೆಟ್ಟಿ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ವಾಣಿ ರವಿ ಶೆಟ್ಟಿ ವಂದಿಸಿದರು.
