Updated News From Kaup

ಪಡುಬಿದ್ರಿ : ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ

Posted On: 07-07-2024 05:23PM

ಪಡುಬಿದ್ರಿ : ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ರವಿವಾರ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಪಡುಬಿದ್ರಿ : ಭಾರತೀಯ ಅಂಚೆ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ

Posted On: 07-07-2024 05:01PM

ಪಡುಬಿದ್ರಿ : ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಮತ್ತು ಅರಣ್ಯ ಇಲಾಖೆ ಉಡುಪಿ ವಲಯ ಇವರ ಸಹಯೋಗದಲ್ಲಿ "ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಪ್ರಯುಕ್ತ ಪಡುಬಿದ್ರಿ ನೂತನ ಅಂಚೆ ಕಚೇರಿಯ ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು. ಅಂಚೆ ಅಧೀಕ್ಷಕ ರಮೆಶ್ ಪ್ರಭು ವನಮಹೋತ್ಸವಕ್ಕೆ ಚಾಲನೆ ನೀಡಿ, ಎಲ್ಲರೂ ಗಿಡ ನೆಟ್ಟು ತಾಯಿಯಂತೆ ಸಂರಕ್ಷಿಸಬೇಕು ಎಂದು ಕರೆ ಕೊಟ್ಟರು.

ಇನ್ನಂಜೆ : ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆ - ಖಾಸಗಿ ಜಮೀನಿನ ತಡೆಗೋಡೆ ತೆರವು

Posted On: 06-07-2024 10:35PM

ಇನ್ನಂಜೆ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆಯ ತೊಂದರೆಗೆ ತಾತ್ಕಾಲಿಕ ಮುಕ್ತಿ ಸಿಕ್ಕಿದೆ.

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Posted On: 06-07-2024 05:43PM

ಕಾಪು : ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ ಇತರ ವಿಷಯಗಳ ಕಲಿಕೆಗೆ ಪ್ರೋತ್ಸಾಹಿಸುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಇಂತಹ ಸಹಕಾರವನ್ನು ನೀಡಿ ಎಂದು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು. ಅವರು ಶನಿವಾರ ಶಾಲಾ ಸಭಾಂಗಣದಲ್ಲಿ ಜರಗಿದ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಂದಿಕೂರು ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆ : ಪ್ರತಿಭಟನೆಗೆ ನಿರ್ಧಾರ

Posted On: 06-07-2024 06:35AM

ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು ತ್ತಿರುವ ಹಿನ್ನೆಲೆಯಲ್ಲಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ಕಾಪು ತಾಲ್ಲೂಕಿನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ; ಜಾಗೃತಿ ಮೂಡಿಸಿದ ತಹಶಿಲ್ದಾರ್

Posted On: 06-07-2024 06:20AM

ಕಾಪು : ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ "ಡ್ರೈ ಡೇ" ಆಚರಿಸಲು ಸರ್ಕಾರ ಸೂಚಿಸಿದೆ. ಅದರಂತೆ ತಹಶಿಲ್ದಾರ್ ಪ್ರತಿಭಾ ಆರ್ ಮತ್ತು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವಾ ನೇತೃತ್ವದಲ್ಲಿ ಕಾಪು ತಾಲ್ಲೂಕಿನ ಕಟಪಾಡಿ ಪ್ರದೇಶದ ಮನೆಗಳ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಕುರಿತು ಜಾಗೃತಿ ಮೂಡಿಸಲಾಯಿತು.

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ

Posted On: 05-07-2024 11:52PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ.

ನಾಳೆ (ಜು.6) : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Posted On: 05-07-2024 09:38PM

ಉಡುಪಿ : ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ6) ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕಾಪು : ಫೈಝಲ್ ಇಸ್ಲಾಂ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Posted On: 05-07-2024 09:34PM

ಕಾಪು : ಇಲ್ಲಿನ ಫೈಝಲ್ ಇಸ್ಲಾಂ ಶಾಲೆಯಲ್ಲಿ ಶುಕ್ರವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಇನ್ನಂಜೆ : ಪಾಂಗಾಳ ಗ್ರಾಮದ ಬೀಡುವಿನ ಗದ್ದೆ ಕೃತಕ ನೆರೆ - ಖಾಸಗಿ ಜಮೀನಿನ ಚರಂಡಿಯಿಂದ ಸಮಸ್ಯೆ ಬಗೆ ಹರಿಯುತ್ತಿಲ್ಲ - ಮಾಲಿನಿ ಶೆಟ್ಟಿ

Posted On: 05-07-2024 06:54PM

ಇನ್ನಂಜೆ : ಇಲ್ಲಿನ ಗ್ರಾಮಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಗಳಲ್ಲಿ ಹಾಗೂ ಮನೆಯ ಅಂಗಳದಲ್ಲಿ ಕೃತಕ ನೆರೆಗೆ ಖಾಸಗಿ ಜಮೀನಿನಲ್ಲಿ ಚರಂಡಿ ಇರುವುದರಿಂದ ಸಮಸ್ಯೆ ಬಗೆಹರಿಯದಾಗಿದ್ದು ಖಾಸಗಿ ಜಾಗದವರ ಅನುಮತಿ ಇಲ್ಲದೆ ಗ್ರಾಮ ಪಂಚಾಯತ್ ಗೆ ಅವರ ಗದ್ದೆಯಲ್ಲಿ ಚರಂಡಿ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.