Updated News From Kaup

ಪಡುಬಿದ್ರಿ : ಗಣಪತಿ ಪ್ರೌಢಶಾಲೆ ಮತ್ತು ಎಸ್ ಬಿ ವಿ ಪಿ ಹಿ. ಪ್ರಾ. ಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ ಕಾರ್ಯಕ್ರಮ

Posted On: 05-07-2024 06:16PM

ಪಡುಬಿದ್ರಿ : ಇಲ್ಲಿನ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಸ್ಥಾಪಕರಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾಪು : ಮನೆಯೇ ಗ್ರಂಥಾಲಯ ನಲ್ವತ್ತೈದನೇ ಸರಣಿ ಕಾರ್ಯಕ್ರಮ

Posted On: 05-07-2024 10:47AM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಮತ್ತು ಕಾಪು ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಪೊಲಿಪು ನಮಸ್ತೇ ಹೋಂ ಸ್ಟೇ ರೆಸಾರ್ಟ್‌ ನಲ್ಲಿ ಜರಗಿದ ಮನೆಯೇ ಗ್ರಂಥಾಲಯದ ನಲವತ್ತೈದನೇ ಸರಣಿ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಸಿಎ ದೇವ್ ಆನಂದ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾತು ಕಡಿಮೆ‌ ಮಾಡಿ, ಕೃತಿಯ ಮೂಲಕವಾಗಿ ಜನರ ನಡುವೆ ಗುರುತಿಸಿಕೊಳ್ಳುವಲ್ಲಿ ರೋಟರಿ ಸಂಸ್ಥೆ ಹಾಗು ಕಸಾಪ ಪ್ರಯತ್ನ ಶೀಲವಾಗಿದೆ. ಜನರಲ್ಲಿ ವಿಷಯ ಸಂಗ್ರಹಣೆ, ಪುಸ್ತಕ ಓದುವ ಹವ್ಯಾಸದೊಂದಿಗೆ ಜ್ಞಾನ ವೃದ್ಧಿಗೆ ಪೂರಕವಾಗಿ ಸ್ಪಂದಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

ವಿವಿಧ ಬೇಡಿಕೆಗಳ ಬಗ್ಗೆ ವಿಧಾನಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿದ ಅಖಿಲ ಭಾರತ ದೈವರಾಧಕರ ಒಕ್ಕೂಟ

Posted On: 05-07-2024 10:35AM

ಮಂಗಳೂರು : ಕರ್ನಾಟಕ ಸರ್ಕಾರದ ವಿಧಾನಸಭಾ ಸ್ಪೀಕರಾದ ಯು ಟಿ ಖಾದರ್ ಅವರನ್ನು ಅಖಿಲ ಭಾರತ ದೈವರಾಧಕರ ಒಕ್ಕೂಟದ ಪ್ರತಿನಿಧಿಗಳು ಶುಕ್ರವಾರ ಮಂಗಳೂರಿನಲ್ಲಿ ಭೇಟಿಯಾದರು.

ಜುಲೈ 7 : ಕಳತ್ತೂರು ಕುಕ್ಕುಂಜ ಕೆ.ಕೆ ಬಾಯ್ಸ್ ವತಿಯಿಂದ ಕೆಸರ್ ಡೊಂಜಿ ದಿನ ಕಾರ್ಯಕ್ರಮ

Posted On: 05-07-2024 07:06AM

ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳತ್ತೂರುವಿನ ಕುಕ್ಕುಂಜದ ಸಮೀಪದ ಗದ್ದೆಯಲ್ಲಿ ಕಳತ್ತೂರು, ಕುಕ್ಕುಂಜದ ಗ್ರಾಮಸ್ಥರಿಗೆ ಕೆ.ಕೆ ಬಾಯ್ಸ್ ವತಿಯಿಂದ ಜುಲೈ 7 ರಂದು ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಗ್ರಾಮಸ್ಥರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾಗಿ ಜಯಕರ್ ಶೆಟ್ಟಿ ಇಂದ್ರಾಳಿ ನೇಮಕ‌

Posted On: 05-07-2024 07:02AM

ಉಡುಪಿ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರನ್ನಾಗಿ ಬಡಗು ಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರು ಹಾಗೂ ಮೇಲ್ವಿಚಾರಕರಾದ ಜಯಕರ್ ಶೆಟ್ಟಿ ಇಂದ್ರಾಳಿಯವರನ್ನು ಜುಲೈ 3ರಂದು ಮೂಡಬಿದ್ರಿಯ ಸ್ಕೌಟ್ಸ್- ಗೈಡ್ಸ್ ಭವನದಲ್ಲಿ ನಡೆದ ಸಮಾಲೋಚನಾ ಕಾರ್ಯಾಗಾರದಲ್ಲಿ ನೇಮಕ ಮಾಡಲಾಯಿತು.

ಕಾಪು : ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ

Posted On: 02-07-2024 04:42PM

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮ ಮಂಗಳವಾರ ಜರಗಿತು.

ಶ್ರೀ ಕ್ಷೇತ್ರ ಶಂಕರಪುರ : ಪತ್ರಿಕಾ ದಿನಾಚರಣೆ ; ಪತ್ರಕರ್ತರಿಗೆ ಗೌರವಾರ್ಪಣೆ

Posted On: 01-07-2024 07:57PM

ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರದಲ್ಲಿ ಸೋಮವಾರ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಶ್ರೀ ಸಾಯಿಈಶ್ವರ್ ಗುರೂಜಿಯವರಿಂದ ಪತ್ರಕರ್ತರನ್ನು ಗೌರವಿಸಲಾಯಿತು.

ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ವಿಕಲಚೇತನರೊಂದಿಗೆ ಸಂವಹನ, ಶಾಲಾ ಸಂಸತ್ತು ರಚನಾ ಕಾರ್ಯಕ್ರಮ

Posted On: 01-07-2024 06:39PM

ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ವಿಕಲಚೇತನರೊಂದಿಗೆ ಸಂವಹನ ಕಾರ್ಯಕ್ರಮ ಮತ್ತು ಶಾಲಾ ಸಂಸತ್ತು ರಚನಾ ಕಾರ್ಯಕ್ರಮವು ನಡೆಯಿತು.

ಕಾಪು : ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ

Posted On: 01-07-2024 06:21PM

ಕಾಪು : ಉಡುಪಿ - ಮಂಗಳೂರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಅವರು ಜೂನ್ 30ರ ಭಾನುವಾರ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.

ಉಚ್ಚಿಲ : ಮಳೆಗಾಲದ ಮೀನುಗಾರಿಕೆಯ “ದಾರಾ”ಗೆ ಚಾಲನೆ

Posted On: 01-07-2024 06:16PM

ಉಚ್ಚಿಲ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ನಡೆಸುವ ಮೋಗವೀರರು ಮೀನುಗಾರಿಕೆಗಾಗಿ ಬಳಸುವ ಬಲೆಗಳನ್ನು ಜೋಡಿಸುವ ಕಾರ್ಯ "ದಾರ" ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪ್ರಾಂಗಣದಲ್ಲಿ ಭಾನುವಾರ ನಡೆಯಿತು. ವರ್ಷಂಪ್ರತಿಯಂತೆ ಉಡುಪಿ ಜಿಲ್ಲೆಯ ಉಚ್ಚಿಲ ಕೇಂದ್ರವಾಗಿಟ್ಟುಕೊಂಡು ಉಚ್ಚಿಲ- ಎರ್ಮಾಳು ವಲಯದ ನಾಡದೋಣಿ ಮೀನುಗಾರರು ಭಾನುವಾರ ಸಾಂಪ್ರ‍್ರದಾಯಿಕ ನಾಡದೋಣಿ ಮೀನುಗಾರಿಕೆಗಾಗಿ "ದಾರ" ಮುಹೂರ್ತ ನಡೆಸಿದ್ದಾರೆ. ಕಳೆದ ವರ್ಷದ ನಾಡದೋಣಿ ಮೀನುಗಾರಿಕೆ ಋತು ಕೊನೆಗೊಂಡ ಬಳಿಕ ಮೀನುಗಾರಿಕೆಗೆ ಬಳಸಿದ ಮಾಟುಬಲೆಯನ್ನು ಬಿಡಿ ಬಿಡಿಯಾಗಿಸಿ ಸಂಗ್ರಹಿಸಿಡುತ್ತಾರೆ. ಹರಿದ ಬಲೆಗಳನ್ನು ಸರಿಪಡಿಸುವ ಉದ್ದೇಶದಿಂದ ಮೀನುಗಾರ ಪ್ರತಿನಿಧಿಗಳಿಗೆ ಹಂಚುತ್ತಾರೆ. ಅವರೆಲ್ಲರೂ ಅದನ್ನು ಡಿಸೆಂಬರ್ 15 ರೊಳಗೆ ಫಂಡಿನ ಮುಖ್ಯಸ್ಥರಿಗೆ ತಲುಪಿಸಬೇಕು. ಆಯಕಟ್ಟಿನ ಜಾಗದಲ್ಲಿ ಬಿಡಿಬಿಡಿಯಾಗಿ ಜೋಡಿಸಿಟ್ಟ ಬಲೆಗಳನ್ನು ಮಳೆಗಾಲ ಆರಂಭಗೊಂಡ ಬಳಿಕ ಸಾಮೂಹಿಕವಾಗಿ ನಿಗದಿ ಪಡಿಸಿದ ದಿನದಂದು ಎಲ್ಲರೂ ಒಗ್ಗಾಟ್ಟಾಗಿ ಪೋಣಿಸುವ ಕೈಂಕರ್ಯವೇ “ದಾರ”. ಮಳೆಗಾಲ ಆರಂಭಗೊಂಡ ತಕ್ಷಣ ಸಮುದ್ರ ಪ್ರಕ್ಷಭ್ದ ಗೊಳ್ಳುತ್ತದೆ. ಮಧ್ಯೆ ಕೆಲವು ದಿನ ಶಾಂತವಾಗುವ ಸಂದರ್ಭ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. ಈ ಅವಕಾಶಕ್ಕಾಗಿ ಕಾದು ಕುಳಿತಿರುವ ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ಆರಂಭಿಕವಾಗಿ "ದಾರ" ನಡೆಸುತ್ತಾರೆ. ಎಲ್ಲಾ ಫಂಡಿನಿಂದ ತಲಾ 5 ಮಂದಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಪುರೋಹಿತರ ಬಳಿ ದಾರ ಪ್ರಕ್ರಿಯೆಗಾಗಿ ಶುಭಮೂಹೂರ್ತ ಯಾಚಿಸುತ್ತಾರೆ. ಪುರೋಹಿತರು ನೀಡಿದ ಶುಭ ಮುಹೂರ್ತದಂದು ಪ್ರತಿಯೊಂದು ಫಂಡಿನವರು ಒಗ್ಗಟ್ಟಾಗಿ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಬಲೆಗಳನ್ನು ಜೋಡಿಸುವ ಮೂಲಕ ದಾರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ.