Updated News From Kaup
ಕಾಪು ತಾಲೂಕಿನಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿ
Posted On: 27-06-2024 04:17PM
ಕಾಪು : ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು ಕಾಪು ತಾಲೂಕಿನ ಕೆಲವೆಡೆ ಮನೆಗಳಿಗೆ ಹಾನಿಯಾಗಿದೆ.
ಮಳೆ ಹಿನ್ನಲೆ; ಉಡುಪಿ ಜಿಲ್ಲೆಯಲ್ಲಿ (ಜೂ. 27) ಶಾಲೆಗಳಿಗೆ ರಜೆ ಇಲ್ಲ – ಡಾ. ವಿದ್ಯಾ ಕುಮಾರಿ
Posted On: 26-06-2024 08:20PM
ಉಡುಪಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದು ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ ಇರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಜೇಸಿಐ ಉಡುಪಿ ಸಿಟಿ : ವೈಯಕ್ತಿಕ ಸ್ಪಚ್ಚತೆ ಕಾರ್ಯಕ್ರಮ
Posted On: 26-06-2024 07:18PM
ಉಡುಪಿ : ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಕಡಿಯಾಳಿ ಕಮಲಾಬಾಯಿ ಪ್ರೌಢ ಶಾಲೆಯಲ್ಲಿ ವಿದ್ಯಾಥಿ೯ನಿಯರಿಗೆ ವೈಯಕ್ತಿಕ ಸ್ಪಚ್ಚತೆ ಬಗ್ಗೆ ಕಾಯ೯ಕ್ರಮ ನಡೆಯಿತು.
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
Posted On: 26-06-2024 07:13PM
ಅದಮಾರು : ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ
Posted On: 25-06-2024 07:35PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸ?ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು.
ಕಾಪು : ನಿರ್ಮಾಣ ಹಂತದಲ್ಲಿರುವ ಶಿಲಾಮಯ ಗರ್ಭಗುಡಿ, ಮಾರಿಗುಡಿಯ ಶಿಲಾಸ್ತಂಭ ಪರಿಗ್ರಹ ಸಮರ್ಪಣಾ ಸಂಕಲ್ಪ ಪೂಜೆ ಸಂಪನ್ನ
Posted On: 25-06-2024 07:17AM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸಂಪೂರ್ಣ ಇಳಕಲ್ ಕೆಂಪು ಶಿಲೆಯೊಂದಿಗೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ಗರ್ಭಗುಡಿ ಮತ್ತು ಸಂಪೂರ್ಣ ಮಾರಿಗುಡಿಯ ಶಿಲಾಸ್ತಂಭ ಪರಿಗ್ರಹ ಸಮರ್ಪಣಾ ಸಂಕಲ್ಪ ಪೂಜೆಯು ಸೋಮವಾರ ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ
Posted On: 24-06-2024 07:28PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇವರ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜೂ. 23 ರಂದು ಶಾಂತಿ ನಗರ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಭವನದಲ್ಲಿ ನಡೆಯಿತು.
ಪಡುಬಿದ್ರಿ : ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ
Posted On: 24-06-2024 06:10PM
ಪಡುಬಿದ್ರಿ : ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ, ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡುತ್ತಿದ್ದಾರೆ. ಪೋಷಕರ ಕನಸುಗಳನ್ನು ನನಸುಗೊಳಿಸಲು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕು. ಇಂತಹ ಸಮಾಜ ಘಾತುಕ ಮಾದಕ ವಸ್ತುಗಳಿಗೆ ಆಕರ್ಷಿತರಾಗಬಾರದು. ಅಪರಾಧ ಕೃತ್ಯಗಳಿಗೆ ಬಲಿಯಾಗದೇ ದೇಶದ ಉತ್ತಮ ಪ್ರಜೆಯಾಗಿ ಬಾಳಿ ಎಂದು ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಹಾಗು ಪಡುಬಿದ್ರಿ ಪೋಲಿಸ್ ಠಾಣೆ ವತಿಯಿಂದ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಾಲೇಜು ಸಭಾಂಗಣದಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ - ಇಲಾಖಾಧಿಕಾರಿಗಳೊಂದಿಗೆ ಶಾಸಕರ ಭೇಟಿ
Posted On: 23-06-2024 05:03PM
ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ರವಿವಾರ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಓಂ ಶ್ರೀ ಯೋಗ ಕೇಂದ್ರ ಬಸ್ರೂರು : ಯೋಗ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Posted On: 23-06-2024 03:12PM
ಬಸ್ರೂರು : ಓಂ ಶ್ರೀ ಯೋಗ ಕೇಂದ್ರ ಬಸ್ರೂರು ವತಿಯಿಂದ ಜರಗಿದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ .ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.
