Updated News From Kaup

ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ ವತಿಯಿಂದ ಸ.ಪ.ಪೂ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ

Thumbnail
Posted On: 28 Jul 2024, 06:41 PM

ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಪಡುಬಿದ್ರಿಯ ಜಾನಪದ ಚಿಂತಕರಾದ ಪಿ.ಕೆ. ಸದಾನಂದ ಪೂಜಾರಿ ಆಟಿ ತಿಂಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹೊೖಗೆ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟ ಮೊರಾಸ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕರಾದ ಸುಧಾಕರ್ ಶೆಣೈ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು, ಸದಸ್ಯರಾದ ಸುಜಾತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಕುಮಾರ್, ಉಪಾಧ್ಯಕ್ಷರಾದ ಸಂತೋಷ್ ದೇವಾಡಿಗ, ರಾಘವೇಂದ್ರ ಜೆ ಸುವರ್ಣ , ಲಕ್ಷ್ಮಣ ಕೋಟ್ಯಾನ್, ರೋಶನ್, ಶ್ರೀಜಿತ್, ಅಂಕಿತ್ ಉಪಸ್ಥಿತರಿದ್ದರು. ಅರುಣ್ ಪೂಜಾರಿ ಸ್ವಾಗತಿಸಿದರು. ಕಾಲೇಜು ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಕ್ರೀಡೆ ನಡೆಸಿ ಬಹುಮಾನ ವಿತರಿಸಲಾಯಿತು. ಜೊತೆಗೆ ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ಉಣ ಬಡಿಸಲಾಯಿತು.

ಉಡುಪಿ : ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ

Thumbnail
Posted On: 28 Jul 2024, 05:04 PM

ಉಡುಪಿ : ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಜುಲೈ 28 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದಭ೯ದಲ್ಲಿ ಕನಕದಾಸ ಶಿಕ್ಷಣ ಸಂಸ್ಥೆಯ ಕಾಯ೯ದಶಿ೯ ರವೀಂದ್ರನಾಥ ದಂಡಿನ, ಸಾಹಿತಿ ಪಂಚಯ್ಯ ಹಿರೇಮಠ, ಗಣಪತಿ ಹೆಗಡೆ, ಮಂಜುನಾಥ ಎಸ್, ಪ್ರವೀಣ್ ಕುಮಾರ್ ಕನ್ಯಾಳ, ರೋಹಿನಿ ಮಿಜಿ೯ ಮುಂತಾದವರಿದ್ದರು.

ಪಡುಬಿದ್ರಿ : ಮುಂಡಾಲ ಯುವ ವೇದಿಕೆಯಿಂದ ವನಮಹೋತ್ಸವ ಕಾರ್ಯಕ್ರಮ

Thumbnail
Posted On: 28 Jul 2024, 04:50 PM

ಪಡುಬಿದ್ರಿ : ಪರಿಸರ ಸಮತೋಲನೆಗಾಗಿ ಮನುಷ್ಯ ಸಾಮಾಜಿಕ ಕಳಕಳಿಯಿಂದ ಪರಿಸರ ಸಂರಕ್ಷಣೆ ಮತ್ತು ಸಸ್ಯ ಸಂಕುಲಗಳನ್ನು ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹೇಳಿದರು. ಅವರು ಪಡುಬಿದ್ರಿ ಮುಂಡಾಲ ಯುವ ವೇದಿಕೆಯ ವತಿಯಿಂದ ಸಂತೆಕಟ್ಟೆ ಶ್ರೀಕೋಡ್ದಬ್ಬು ದೈವಸ್ಥಾನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಲ ವೇದಿಕೆಯ ಅಧ್ಯಕ್ಷ ಶಿವಪ್ಪ ಸಾಲ್ಯಾನ್ ವಹಿಸಿದ್ದರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ ಪಡುಬಿದ್ರಿ, ಏಳು ಮಾಗಣೆ ಅಧ್ಯಕ್ಷರಾದ ಸದಾನಂದ ಬೊಗ್ಗರ್ಲಚ್ಚಿಲ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಗಿಡಗಳನ್ನು ವಿತರಿಸಲಾಯಿತು. ಸುರೇಶ್ ಪಡುಬಿದ್ರಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿ, ಪ್ರಸನ್ನ ಪಡುಬಿದ್ರಿ ವಂದಿಸಿದರು.

ಪಡುಬಿದ್ರಿ : ಬಂಟರ ಸಂಘದಲ್ಲಿ ಆಟಿ ಕೂಟ ಕಾರ್ಯಕ್ರಮ

Thumbnail
Posted On: 28 Jul 2024, 04:30 PM

ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ನಳಿನಿ ರವೀಂದ್ರನಾಥ ಹೆಗ್ಡೆ, ಶೀಲಾ ಕೆ ಶೆಟ್ಟಿ ತುಳುನಾಡಿನ ಕ್ರೀಡೆ ಚೆನ್ನೆಮನೆ ಆಟದ ಪ್ರಾತ್ಯಕ್ಷಿಕೆ ನೀಡಿದರು. ಸಮಾಜ ಸೇವಕ, ಪ್ರಗತಿಪರ ಕೃಷಿಕ ಸಂತೋಷ್ ಶೆಟ್ಟಿ ಬರ್ಪಾಣಿ ಇವರನ್ನು ಗೌರವಿಸಲಾಯಿತು. ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗಿಡಮೂಲಿಕೆಯ ಸಸಿಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ವೈ. ಶಶಿಧರ್ ಕೆ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ವಹಿಸಿದ್ದರು. ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಎಸ್ ಶೆಟ್ಟಿ ಸ್ವಾಗತಿಸಿದರು. ಅಕ್ಷತಾ ಸುರೇಂದ್ರ ಶೆಟ್ಟಿ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ವಾಣಿ ರವಿ ಶೆಟ್ಟಿ ವಂದಿಸಿದರು.

ಎರ್ಮಾಳು : ಕಂಡೊಡೊಂಜಿ ದಿನ ಕಾರ್ಯಕ್ರಮ

Thumbnail
Posted On: 28 Jul 2024, 04:25 PM

ಎರ್ಮಾಳು : ತುಳುನಾಡಿನ ಜನರು ಆಟಿ ತಿಂಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಸಂತಸದ ವಿಷಯ. ಇದು ತುಳುವರ ಸಂಸ್ಕೃತಿಯ ಬಗೆಗಿನ ಕಾಳಜಿ ತೋರಿಸುತ್ತದೆ ಎಂದು ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗ ಅವರು ಹೇಳಿದರು. ಅವರು ಬಿಲ್ಲವರ ಯೂನಿಯನ್ ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ ಮತ್ತು ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ಬಡಕೊಟ್ಟು ಬಾಕಿಮಾರು ಗದ್ದೆಯಲ್ಲಿ ರವಿವಾರ ಜರಗಿದ ಕಂಡೊಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ‌ಸೇವಕ ನಿತ್ಯಾನಂದ ಶೆಟ್ಟಿ ಎರ್ಮಾಳು ‌ಬಡಾ ಮಾತನಾಡಿ, ಯಾವುದೇ ಕಾರ್ಯಕ್ರಮಗಳನ್ನು ಆರಂಭಿಸುವುದು ಸುಲಭ. ಆದರೆ ಅದನ್ನು ಮುಂದುವರೆಸಿಕೊಂಡು ಹೋಗುವುದು ಸಂಘಟನೆಗಳ ಕರ್ತವ್ಯ. ಇಂತಹ ಕಾರ್ಯಕ್ರಮಗಳ ಮೂಲಕ ಕೃಷಿಯ ಮಹತ್ವವನ್ನೂ ಯುವ ಜನಾಂಗಕ್ಕೆ ಮನವರಿಕೆ ಮಾಡಬೇಕಾಗಿದೆ ಎಂದರು. ಬಿಲ್ಲವರ ಯೂನಿಯನ್ ಕುದ್ರೊಟ್ಟು ಶ್ರೀ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಸುಖೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಬೈದರ್ಕಳ ದರ್ಶನ ಪಾತ್ರಿ ರವಿ ಪೂಜಾರಿ ಕುರ್ಕಾಲು, ಎರ್ಮಾಳು ಶ್ರೀ ನಂದಿಕೇಶ್ವರ ದೇವಸ್ಥಾನದ ಅರ್ಚಕ ಬಾಲಕೃಷ್ಣ ಭಟ್, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆಯ ಅಧ್ಯಕ್ಷ ಸತೀಶ್ ಪೂಜಾರಿ, ಎರ್ಮಾಳು ಬಡಾ ಬೈದಶ್ರೀ ಮಹಿಳಾ ಮಂಡಳಿಯ ಅಧ್ಯಕ್ಷೆ ಸಬಿತ ಸೋಮನಾಥ, ಆಡಳಿತ ಸಮಿತಿ ಕಾರ್ಯದರ್ಶಿ ರಮೇಶ್ ಅಂಚನ್, ಹಿರಿಯರಾದ ಶಂಕರ ಪೂಜಾರಿ, ಉದ್ಯಮಿ ಕರುಣಾಕರ ಪೂಜಾರಿ, ಪತ್ರಕರ್ತ ಬಾಲಕೃಷ್ಣ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು. ಮನೋಹರ್ ಉಚ್ಚಿಲ‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಮಂಕಾಳ ವೈದ್ಯ ಭೇಟಿ

Thumbnail
Posted On: 27 Jul 2024, 07:28 PM

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಸಚಿವರಾದ ಮಂಕಾಳ ವೈದ್ಯ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಕರಾವಳಿಗೆ ಶಾಶ್ವತ ಪರಿಹಾರಕ್ಕಾಗಿ ಯೋಜನೆ ರೂಪಿತವಾಗಿದೆ. ಕೇಂದ್ರಕ್ಕೂ ರೂ.478 ಕೋಟಿಯ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಡಲ್ಕೊರೆತಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿಯಂತೆ ಒಟ್ಟು 15 ಕೋಟಿ ತಕ್ಷಣದ ಪರಿಹಾರ ಬಿಡುಗಡೆಯಾಗಿದೆ. ಇದರಲ್ಲಿ ಪಡುಬಿದ್ರಿಗೆ 1ಕೋಟಿ ರೂ. ನೀಡಲಾಗುವುದು. ಪ್ರಸ್ತುತ ಮೀನುಗಾರಿಕಾ ರಸ್ತೆ ಉಳಿಸಬೇಕಾಗಿದೆ. ಅದಕ್ಕೆ ತಕ್ಷಣ ಕಾಮಗಾರಿ ಆರಂಭಿಸಲು ಸೂಚಿಸಲಾಗಿದೆ ಎಂದರು. ಈ ಸಂದರ್ಭ ಸ್ಥಳೀಯರು ಕಡಲ್ಕೊರೆತ ಸಮಸ್ಯೆಗೆ ತಕ್ಷಣ ಪರಿಹಾರ ನೀಡಿ, ಪ್ರತಿ ಬಾರಿಯು ಭರವಸೆ ಮಾತ್ರ ಸಿಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ನಿಮ್ಮ ಸಮಸ್ಯೆ ನನ್ನ ಸಮಸ್ಯೆ ಖಂಡಿತವಾಗಿ ಬಗೆಹರಿಸಲಾಗುವುದು ಎಂದರು. ನಡಿಪಟ್ಣದ ವಿಷ್ಣು ಮಂದಿರ ಸಮೀಪದಲ್ಲಿರುವ ಅಂತರಾಷ್ಟ್ರೀಯ ಮನ್ನಣೆಯ ಬ್ಲೂ ಫ್ಲ್ಯಾಗ್ ಬೀಚ್ ನ ರಸ್ತೆ ಸಮದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದೆ. ಈಗಾಗಲೇ ಈ ಭಾಗದ ಮೀನುಗಾರಿಕಾ ಶೆಡ್, ವಿಶ್ರಾಂತಿ ಗೃಹ, ಸುಮಾರು 35 ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಈ ಸಂದರ್ಭ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಜುಲೈ 27 : ಕಾಪುವಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

Thumbnail
Posted On: 27 Jul 2024, 08:13 AM

ಕಾಪು : ಬಿಜೆಪಿ ಯುವಮೋರ್ಚ ಕಾಪು ಮಂಡಲದ ವತಿಯಿಂದ ಇಪ್ಪತ್ತೈದನೇ ವರ್ಷದ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಜುಲೈ 27ರಂದು ಸಂಜೆ 6.30ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟು ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಕಾಪು ವಾಜಪೇಯಿ ಕಟ್ಟೆಯ ತನಕ ನಡೆಯಲಿದೆ. ಬಳಿಕ ವಾಜಪೇಯಿ ಕಟ್ಟೆಯ ಸಮೀಪ ಸಭಾ ಕಾರ್ಯಕ್ರ‌ಮ ನಡೆಯಲಿದ್ದು, ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಕುಂದಾಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಕಾಪು ಯುವಮೋರ್ಚಾದ ಪ್ರಕಟನೆ ತಿಳಿಸಿದೆ.

ಜುಲೈ 28 : ಪಡುಬಿದ್ರಿಯಲ್ಲಿ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು

Thumbnail
Posted On: 27 Jul 2024, 06:48 AM

ಪಡುಬಿದ್ರಿ ‌: ಇಲ್ಲಿನ ಗ್ರಾಮೀಣ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ‌ಜುಲೃೆ 28 ರಂದು ಸಾರ್ವಜನಿಕರಿಗಾಗಿ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು ಕಾರ್ಯಕ್ರಮವು ಪಡುಬಿದ್ರಿ ಖಡ್ಗೇಶ್ವರಿ ಬ್ರಹ್ಮಸ್ಥಾನದ ಬಳಿಯ ಗದ್ದೆಯಲ್ಲಿ ನಡೆಯಲಿದೆ. ವಿವಿಧ ವಯೋಮಿತಿ ವಿಭಾಗದಲ್ಲಿ ಓಟ, ಉಪ್ಪು ಮೂಟೆ ಓಟ, ಗೋಣಿ ಚೀಲ ಓಟ, ಮೂರು ಕಾಲು ಓಟ, ಮ್ಯೂಸಿಕಲ್ ಚಯರ್ ಹಾಗೂ ದಂಪತಿಗಳಿಗೆ ಹಾಳೆ ಎಲೆ ಓಟ, ಉಪ್ಪು ಮೂಟೆ ಓಟ ಹಾಗೂ ಪುರುಷ ಮತ್ತು ಮಹಿಳಾ ತಂಡಗಳಿಗೆ ಹಗ್ಗ- ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಜೇತರಿಗೆ ನಗದು ಹಾಗು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ವಿವಿಧ ವಿಭಾಗದಲ್ಲಿ ಸಾಧನೆಗೃೆದ ಅಂಕಿತ್ ಪೂಜಾರಿ, ಭಾಸ್ಕರ್ ಬಂಗೇರ, ಚಿನ್ಮಯಿ ಪೃೆ, ರಜನಿ ದೇವಾಡಿಗ‌, ಸಂಜೀವಿ ಪೂಜಾರ್ತಿ ಮತ್ತು ಸುನಿತಾರವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ನವೀನಚಂದ್ರ ಸುವರ್ಣ , ನವೀನಚಂದ್ರ ‌ಶೆಟ್ಟಿ, ಗುಲಾಂ ಮೊಹಮ್ಮದ್, ಪಿ.ಕೆ ಸದಾನಂದ, ಜಿತೇಂದ್ರ ಪುರ್ಟಾಡೋ , ದೀಪಕ್ ಎರ್ಮಾಳ್, ವಿಶ್ವಾಸ್ ಅಮೀನ್ ಮತ್ತಿತರರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವೃೆ ಸುಧೀರ್ ಕುಮಾರ್, ರಾಲ್ಫಿ ಡಿ ಕೋಸ್ತಾ, ಶೇಖರ್ ಹೆಜ್ಮಾಡಿ, ದೀಪಕ್ ಕೋಟ್ಯಾನ್ ಇನ್ನಾ ಮತ್ತಿತರರು ಭಾಗವಹಿಸಲಿರುವರು ಎಂದು ಕಾರ್ಯಕ್ರಮ ನಿರ್ದೇಶಕರಾದ ಗಣೇಶ್ ಕೋಟ್ಯಾನ್, ರಾಜೇಶ್ ಶೇರಿಗಾರ್, ಕರುಣಾಕರ್ ಪೂಜಾರಿ, ಸುಚರಿತಾ ಎಲ್ ಅಮೀನ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದೆ ಈ ಬಾರಿಯ ಬಜೆಟ್ : ಶ್ರೀನಿಧಿ ಹೆಗ್ಡೆ

Thumbnail
Posted On: 26 Jul 2024, 09:13 PM

ಕಾಪು : ರಾಷ್ಟ್ರದ ಮದ್ಯಮ ವರ್ಗ, ಬಡವರು ಗ್ರಾಮೀಣ ಪ್ರದೇಶದ ಜನರ ರೈತರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮುಲಕ ಸಮಾಜದ ಪ್ರತೀ ಕ್ಷೇತ್ರದ ಜನರಿಗೆ ಶಕ್ತಿ ನೀಡುವ ಬಜೆಟ್ ಇದಾಗಿದೆ. ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ, ಮೂಲ ಸೌಕರ್ಯ ಹೀಗೆ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಈ ಮೂಲಕ ಮೋದಿ ಸರ್ಕಾರ ಭಾರತದ ಆರ್ಥಿಕ ವೇಗಕ್ಕೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ. ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಮೀಸಲಿಡುವ ಮೂಲಕ ಹೆಣ್ಣು ಮಕ್ಕಳ ಯೋಜನೆಗೆ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಲ್ಲಿ ಸರ್ಕಾರದ ಈ ನಿರ್ಧಾರ ಮಹತ್ವದ ಪಾತ್ರ ವಹಿಸಿದೆ. ಸ್ತ್ರೀಯರು ಖರೀದಿಸುವ ಆಸ್ತಿ ಮೇಲೆ ಸುಂಕ ಇಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೇಂದ್ರೀಕರಿಸಿದೆ. ರೈಲ್ವೆಗೆ ದಾಖಲೆಯ 2.25 ಲಕ್ಷ ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ರೈಲ್ವೆ ಇಲಾಖೆಯ ಕ್ರಾಂತಿಕಾರಿ ಬದಲಾವಣೆ ಯೋಜನೆಗೆ ಮತ್ತಷ್ಟೂ ವೇಗ ದೊರಕಲಿದೆ. ರಾಜ್ಯದ ರೈಲ್ವೇ ಯೋಜನೆಗಳಿಗೆ 7,500ಕೋಟಿ ಅನುದಾನವನ್ನ ಒದಗಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಸಂಶೋಧನೆ, ತಂತ್ರಜ್ಞಾನ, ಖಾಸಗಿ ಸಹಭಾಗಿತ್ವದ ಮೂಲಕ ಆಧುನಿಕ ಸ್ಪರ್ಶ ನೀಡಲು ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ಘೋಷಣೆ ಮಾಡಿದೆ. ತೆರಿಗೆ ಸ್ಲ್ಯಾಬ್ ಗಳ ಬದಲಾವಣೆ ಅಗತ್ಯ ಔಷಧಿಗಳ ಬೆಲೆ ಇಳಿಕೆ, ಯುವಕರಿಗೆ ಕೌಶಲ್ಯ ಅಭಿವೃದ್ಧಿಗೆ ಹೊಸ ಯೋಜನೆ ರೂಪಿಸುವ ಮೂಲಕ ಮುಂದಿನ 5 ವರ್ಷ ಅವಧಿಗೆ ಭಾರತಕ್ಕೆ ದಿಕ್ಸೂಚಿ ನೀಡಬಲ್ಲ ಹಾಗೂ 2047 ಕ್ಕೆ ಭಾರತವನ್ನು ವಿಕಸಿತ ದೇಶವನ್ನಾಗಿ ಮಾಡಲು ಅಡಿಪಾಯ ಹಾಕಬಲ್ಲ ಮುಂಗಡ ಪತ್ರ ಇದಾಗಿದೆ ಎಂದು ಶ್ರೀನಿಧಿ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಡಲ್ಕೊರೆತ : ಪಡುಬಿದ್ರಿಯ ನಡಿಪಟ್ಣದಲ್ಲಿ ಮೀನುಗಾರಿಕಾ ರಸ್ತೆಗೂ ಆಪತ್ತು

Thumbnail
Posted On: 26 Jul 2024, 09:09 PM

ಪಡುಬಿದ್ರಿ ‌: ಇಲ್ಲಿಯ ನಡಿಪಟ್ಣ ಪ್ರದೇಶದಲ್ಲಿಯ ಕಡಲ ಕೊರೆತದಿಂದ ‌ಮೀನುಗಾರಿಕಾ ಶೆಡ್, ಮೀನುಗಾರರ ವಿಶ್ರಾಂತಿ ಗೃಹ ಸಮುದ್ರ ಪಾಲಾದ ಬಳಿಕ ಇದೀಗ ಮೀನುಗಾರಿಕಾ ರಸ್ತೆಗೂ ಆಪತ್ತು ಬಂದೊದಗಿದೆ. ಕಡಲಿನ ರಕ್ಕಸ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ರಸ್ತೆಯು ಹಾನಿಯಾಗುವುದರಲ್ಲಿದೆ. ಇದೇ ರಸ್ತೆಯ ಮೂಲಕ ಪ್ರತಿನಿತ್ಯ ಸ್ಥಳೀಯರಲ್ಲದೆ ಅಂತರಾಷ್ಟ್ರೀಯ ಮನ್ನಣೆಯ ಬ್ಲೂ ಫ್ಲ್ಯಾಗ್ ಬೀಚ್ ಗೂ ಇದೇ ರಸ್ತೆ ಅವಲಂಬಿತವಾಗಿದೆ. ಸ್ಥಳಕ್ಕೆ ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಭೇಟಿ ನೀಡಿದ್ದಾರೆ. ಜಿಲ್ಲಾಡಳಿತದ ಅಸಡ್ಡೆಗೆ ಸ್ಥಳೀಯರು ಆಕ್ರೋಶಿತರಾಗಿದ್ದು, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.