ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡದಿಂದ ಕಾರುಣ್ಯ ವೃದ್ಧಾಶ್ರಮದಲ್ಲಿ ಉಚಿತ ಮಧುಮೇಹ ತಪಾಸಣೆ
ಉಡುಪಿ : ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿರುವ ಉಡುಪಿಯ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ತಂಡವು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಆಶ್ರಮವಾಸಿಗಳಿಗೆ ಉಚಿತ ಮಧುಮೇಹ ತಪಾಸಣೆ ನಡೆಸಿತು.
ಈ ಕಾರ್ಯವನ್ನು ತಂಡದ ಸ್ಥಾಪಕಾಧ್ಯಕ್ಷರಾದ ಡಾ. ಕೀರ್ತಿ ಪಾಲನ್ ನೆರವೇರಿಸಿದರು.
ಈ ಸಂದರ್ಭ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡದ ಕೋಶಾಧಿಕಾರಿ ಜಗದೀಶ್ ಬಂಟಕಲ್ ಉಪಸ್ಥಿತರಿದ್ದರು.
