ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ : ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಣೆ
Thumbnail
ಉಡುಪಿ : ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾಯ೯ಕ್ರಮವು ಇಂದು ಬೆಳಿಗ್ಗೆ ಕ್ಲಬ್ಬಿನ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅನಿವಾಸಿ ಭಾರತೀಯ ಹಾಗೂ ಉದ್ಯಮಿ ಕೆಂಜೂರು ಶಶಿಧರ ಶೆಟ್ಟಿ , ಬಹರೈನ್ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಜನರು ತಮ್ಮ ಮನೆಯ ಆವರಣಗಳಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಪರಿಸರ ಬೆಳೆಸಲು ಕರೆ ಕೊಟ್ಟರು. 100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ಬಿನ ಆವರಣದಲ್ಲಿ ನೆಡಲಾಯಿತು. ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಎಂ ಚಂದ್ರಶೇಖರ ಹೆಗ್ಡೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ , ಹಾಗೂ ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ , ವಿವೇಕ್ ಕರ್ನೇಲಿಯೋ ಮತ್ತಿತರರು ಉಪಸ್ಥಿತರಿದ್ದರು.
Additional image
25 Jun 2021, 04:51 PM
Category: Kaup
Tags: