ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣಿಹಾರಕ್ಕೆ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಉಚಿತ ನೋಟ್ ಪುಸ್ತಕ, ಬರವಣಿಗೆ ಸಾಮಗ್ರಿಗಳ ವಿತರಣೆ
ಕಾಪು : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡದಿಂದ ಇಂದು ಬಿದ್ಕಲ್ ಕಟ್ಟೆ, ಮೊಳವಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣಿಹಾರಕ್ಕೆ ಭೇಟಿ ನೀಡಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ಹಾಗೂ ಬರವಣಿಗೆ ಸಾಮಗ್ರಿಗಳನ್ನು ನೀಡಲಾಯಿತು.
ಆಸರೆ ತಂಡದ ಸ್ಥಾಪಕಾಧ್ಯಕ್ಷರು ಆದ ಡಾ. ಕೀರ್ತಿ ಪಾಲನ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಯಿತು.
ಮಾಜಿ ಸೈನಿಕ ಹಾಗೂ ಶಾಲೆಯ ಪ್ರಾಂಶುಪಾಲರಾದ ಯಶವಂತ್ ಅವರು ಹಾರೈಕೆಯ ಮಾತುಗಳನ್ನು ಆಡಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಸಾಧು ಕುಂದರ್, ಆಸರೆ ತಂಡದ ಕೋಶಾಧಿಕಾರಿ ಜಗದೀಶ್ ಬಂಟಕಲ್, ದಿನೇಶ್ ಬಿದ್ಕಲಕಟ್ಟೆ ಹಾಗೂ ಮೊಳಹಳ್ಳಿ ಗ್ರಾಮ ಪಂಚಾಯತ್ ಅಧಕ್ಷೆ ಇಂದಿರಾ ಯು. ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
