ಬಿಸಿಎ ಮತ್ತು ಉದ್ಯೋಗ ಅವಕಾಶಗಳು - ವೆಬಿನಾರ್
Thumbnail
ಕಾಪು : ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ಮತ್ತು ಐಟಿ ಕ್ಲಬ್‌ನ ಜಂಟಿ ಸಹಯೋಗದಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ, ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗಗಳು ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಲೆಫ್ಟಿನೆಂಟ್ ಕೆ. ಪ್ರವೀಣ್‌ಕುಮಾರ್, ವಿಭಾಗ ಮುಖ್ಯಸ್ಥರು, ಸೈಂಟ್ ಮೇರೀಸ್ ಕಾಲೇಜು ಶಿರ್ವ ಇವರು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದು ಅನಿವಾರ್ಯ ಎಂದು ಹೇಳಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರಕಾಶ್‌ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೯೦ ವಿದ್ಯಾರ್ಥಿಗಳು ಭಾಗವಹಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ವಿಕ್ರಾಂತ್ ಕೆ. ಇವರು ಕಾರ‍್ಯಕ್ರಮವನ್ನು ನಿರೂಪಿಸಿದರು.
19 Aug 2021, 10:41 PM
Category: Kaup
Tags: