ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣೆ
ಕಾಪು : ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಮತ್ತು ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಸುಮಾರು 25 ಮಕ್ಕಳಿಗೆ ಮಕ್ಕಳನ್ನು ಗುರುತಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಮಂಡೇಡಿ ಕಂಗಿತ್ಲು ಮನೆಯ ದಿ|ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಮಗ ದಯಾನಂದ ವಿಠಲ ಶೆಟ್ಟಿಯವರು ಸುಮಾರು 1 ಲಕ್ಷಕ್ಕೂ ಅಧಿಕ ಧನಸಹಾಯ ನೀಡಿದ್ದರು ಹಾಗೂ ಕುಂಜಿರ ಬೆಟ್ಟು (ದ್ವಾರಕ) ಮನೆ ಶಶಿಧರ ಶೆಟ್ಟಿ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ಶಾಲು ನೀಡಿ ಗೌರವಿಸಿದರು.
ಈ ಸಂದರ್ಭ ಆ ದಿನದ ಭಜನಾ ಸೇವಾಕರ್ತರಾದ ಶ್ರೀಮತಿ ಅಕ್ಕಣಿ ವಿಠಲಶೆಟ್ಟಿ ಅವರಿಂದ ಅನ್ನ ಪ್ರಸಾದ ಸೇವೆ ನಡೆಯಿತು.
ಕಾರ್ಯಕ್ರಮದಲ್ಲಿ ಸೇವಾಕರ್ತರು, ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
