ರೋಟರಿ ಕ್ಲಬ್ ಸೈಬರಕಟ್ಟೆಯಿಂದ ಹೌರಾಲ್ ಶ್ರೀ ಮಹಾಲಿಂಗೇಶ್ವರ ದೇವಳದ ಬೀದಿಗೆ ಸೌರವಿದ್ಯುತ್ ದಾರಿ ದೀಪ ಅಳವಡಿಕೆ
Thumbnail
ಉಡುಪಿ : ರೋಟರಿ ಕ್ಲಬ್ ಸೈಬರಕಟ್ಟೆಯಿಂದ ಹೌರಾಲ್ ಶ್ರೀ ಮಹಾಲಿಂಗೇಶ್ವರ ದೇವಳದ ಬೀದಿ ಯಲ್ಲಿ ರಾತ್ರಿ ಭಕ್ತರಿಗೆ ಬೆಳಕಿನ ಅನುಕೂಲತೆ ಮನಗಂಡು ಸೌರವಿದ್ಯುತ್ ದಾರಿ ದೀಪ ಅಳವಡಿಸಲಾಯಿತು. ಅದರ ಉದ್ಘಾಟನೆಯನ್ನು ವಲಯ 3 ರ ಸಹಾಯಕ ಗವರ್ನರ್ ಕೆ. ಪದ್ಮನಾಭ್ ಕಾಂಚನ್ ನೆರವೇರಿಸಿದರು. ಈ ಸಂದರ್ಭ ರೋಟರಿ ಅಧ್ಯಕ್ಷ ಯು. ಪ್ರಸಾದ್ ಭಟ್, ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯ ದಾಸ್, ದೇವಸ್ಥಾನದ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ಆಡಳಿತ ಸದಸ್ಯರು, ಸಾರ್ವಜನಿಕರು ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು. ರೋಟರಿ ಸದಸ್ಯ ನೀಲಕಂಠ ರಾವ್ ಮನೆಯಲ್ಲಿ ಹೊರಾಂಗಣ ವಾರದ ಸಭೆ ಕೂಡ ಉಪಹಾರದ ಫೆಲೋಶಿಪ್ ನೊಂದಿಗೆ ನಡೆಸಲಾಯಿತು.
12 Sep 2021, 08:13 PM
Category: Kaup
Tags: