ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮ ಭೇಟಿ - ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ
Thumbnail
ಕಾಪು : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧಿಯನ್ನು ನೀಡಲಾಯಿತು. ಈ ಕಾರ್ಯಕ್ರಮದ ಜೊತೆಗೆ ಮಲ್ಪೆಯ ಸುಕೇತ್ ಕುಲಾಲ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಆಸರೆ ತಂಡದ ಡಾ. ಕೀರ್ತಿ ಪಾಲನ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಆಸರೆ ತಂಡದ ಕೋಶಾಧಿಕಾರಿ ಜಗದೀಶ್ ಬಂಟಕಲ್, ಸದಸ್ಯರಾದ ಬೇಬಿ ಶೆಟ್ಟಿ, ಮೋಕ್ಷ ಪಾಲನ್, ಶ್ಲೋಕ ಪಾಲನ್ ಉಪಸ್ಥಿತರಿದ್ದರು. ಕಾರುಣ್ಯ ವೃದ್ಧಾಶ್ರಮದ ವ್ಯವಸ್ಥಾಪಕರಾದ ಕುಮಾರ್ ಅವರು ಸುಕೇತ್ ಕುಲಾಲ್ ಅವರಿಗೆ ಶುಭ ಹಾರೈಸಿದರು.
26 Sep 2021, 10:50 PM
Category: Kaup
Tags: