ಇನ್ನಂಜೆ : ಆರ್ಥಿಕ ಸಂಕಷ್ಟದ ಕುಟುಂಬಕ್ಕೆ ಇನ್ನಂಜೆ ಯುವತಿ ಮಂಡಲದ ವತಿಯಿಂದ ಆಹಾರ ಸಾಮಾಗ್ರಿ ವಿತರಣೆ
ಕಾಪು :ಇನ್ನಂಜೆ ಯುವತಿ ಮಂಡಲದ ವತಿಯಿಂದ ಇನ್ನಂಜೆ ಕಲ್ಯಾಲುವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬವೊಂದಕ್ಕೆ ಮುಂಬೈನ ವಿದ್ಯಾ ಶಶಿಕಾಂತ್ ಶೆಟ್ಟಿ ಕುರ್ಕಾಲು ಪ್ರಾಯೋಜಿತ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ಇನ್ನಂಜೆ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕ ಆಚಾರ್ಯ, ಪಂಚಾಯತ್ ಮಾಜಿ ಅಧ್ಯಕ್ಷರಾದ ವಸಂತಿ ವಿ. ಆಚಾರ್ಯ, ಪಂಚಾಯತ್ ಸದಸ್ಯರಾದ ನಿತೇಶ್ ಸಾಲಿಯಾನ್, ಸವಿತಾ ಶೆಟ್ಟಿ, ಯುವತಿ ಮಂಡಲದ ಸದಸ್ಯೆಯರು ಉಪಸ್ಥಿತರಿದ್ದರು.
ಯುವತಿ ಮಂಡಲದ ಅಧ್ಯಕ್ಷರಾದ ಅನಿತಾ ಎನ್. ಸ್ವಾಗತಿಸಿ, ಯುವತಿ ಮಂಡಲದ ಸದಸ್ಯೆ ಪದ್ಮಶ್ರೀ ನಿರೂಪಿಸಿ, ಕಾರ್ಯದರ್ಶಿ ಆಶಾ ನಾಯಕ್ ವಂದಿಸಿದರು.
