ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 4.6 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ
ಕಾಪು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಕುಂತಲ ನಗರದಲ್ಲಿ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 6.36 ಕಿ.ಮೀ ಉದ್ದದ ರಸ್ತೆಯನ್ನು 4.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಯೋಜನೆ ಇದಾಗಿದೆ.
ಈ ಕಾರ್ಯಕ್ರಮದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ವಿ ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್ , ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು.
