ಶಿರ್ವ ಪೋಲಿಸ್ ಸ್ಟೇಷನ್ ಆಯುಧ ಪೂಜೆ - ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಭಾಗಿ
Thumbnail
ಕಾಪು : ಕಾಪು ಕ್ಷೇತ್ರದ ಮಾಜಿ ಶಾಸಕರು, ಸಚಿವರೂ ಆದ ಸನ್ಮಾನ್ಯ ವಿನಯ ಕುಮಾರ್ ಸೊರಕೆಯವರು ಶಿರ್ವ ಪೋಲಿಸ್ ಸ್ಟೇಷನ್ ನಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗವಹಿಸಿದರು. ಶಿರ್ವ ಠಾಣಾಧಿಕಾರಿ ಶಾಲು ಹೊದಿಸಿ, ಹೂಗುಚ್ಛ ನೀಡಿ ಸ್ವಾಗತಿಸಿದರು ನಂತರ ಆಯುಧ ಪೂಜೆಯ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣಾ ಸಿಬ್ಬಂದಿಗಳು ಹಾಗೂ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮರಾಯ ಪಾಟ್ಕರ್, ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಶೆಟ್ಟಿ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ, ಅಬ್ದುಲ್ ಲತೀಫ್ ಉದಯ್ ಪದವು, ಸುಧೀರ್ ಶೆಟ್ಟಿ, ವೀರೇಂದ್ರ ಶೆಟ್ಟಿ ಹಾಜರಿದ್ದರು.
Additional image
15 Oct 2021, 08:52 PM
Category: Kaup
Tags: