ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ಹಿಂಸಾಚಾರ ಖಂಡಿಸಿ ಪ್ರತಿಭಟನೆ
Thumbnail
ಪಡುಬಿದ್ರಿ : ಬಾಂಗ್ಲಾದೇಶದ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರ ಖಂಡಿಸಿ ಕಾಪು ತಾಲೂಕು ಹಿಂದು ಜಾಗರಣ ವೇದಿಕೆ ವತಿಯಿಂದ ಪಡುಬಿದ್ರಿಯಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ತಾಲೂಕು ಅಧ್ಯಕ್ಷ ಶಶಿಧರ ಹೆಗ್ಡೆ ಅಡ್ವೆ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಸೂಡಾ, ಪಡುಬಿದ್ರಿ ವಲಯಾಧ್ಯಕ್ಷ ಪ್ರತೀಕ್ ನಂದಿಕೂರು, ಶಿರ್ವ ವಲಯ ಅಧ್ಯಕ್ಷ ರಕ್ಷಿತ್, ಹಿಂದು ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನೀತಾ ಗುರುರಾಜ್, ಶಿವಪ್ರಸಾದ್ ಶೆಟ್ಟಿ ಎರ್ಮಾಳ್, ಕೃಷ್ಣ ಕಂಚಿನಡ್ಕ, ಸುರೇಶ್ ಪೂಜಾರಿ ಪಾದೆಬೆಟ್ಟು, ಪಡುಬಿದ್ರಿ ವಲಯ ಉಪಾಧ್ಯಕ್ಷ ಉಮಾನಾಥ್ ಮೆಂಡನ್, ವಲಯ ಪ್ರಧಾನ ಕಾರ್ಯದರ್ಶಿ ಸುಹಾಸ್ ನಟವರ್ಯ, ಪಲಿಮಾರು ಘಟಕಾಧ್ಯಕ್ಷ ರಾಘವೇಂದ್ರ ಸುವರ್ಣ, ಉಪಾಧ್ಯಕ್ಷ ರಿತೇಶ್ ದೇವಾಡಿಗ, ನಂದಿಕೂರು ಘಟಕಾಧ್ಯಕ್ಷ ನಿತಿನ್ ಶೆಟ್ಟಿ, ಉಪಾಧ್ಯಕ್ಷ ಸುಕೇಶ್ ಕುಲಾಲ್, ಕಂಚಿನಡ್ಕ ಘಟಕಾಧ್ಯಕ್ಷ ಶಂಕರ್‌, ಉಪಾಧ್ಯಕ್ಷ ಶಿವು ಮತ್ತಿತರರು ಉಪಸ್ಥಿತರಿದ್ದರು.
22 Oct 2021, 08:33 PM
Category: Kaup
Tags: