ಶಿರ್ವ : ಜಾಗೃತಿ ಅರಿವು ಸಪ್ತಾಹ - 2021
Thumbnail
ಶಿರ್ವ: ಇಂದು ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ. ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 'ಜಾಗೃತಿ ಅರಿವು ಸಪ್ತಾಹ-2021' ಏರ್ಪಡಿಸಲಾಯಿತು. ಪ್ರತಿಯೊಬ್ಬ ನಾಗರಿಕ ಪ್ರಜೆಯೂ ಯಾವುದೇ ಭ್ರಷ್ಟಾಚಾರಕ್ಕೆ ಒಳಪಡದೆ ಅಂಥವರ ವಿರುದ್ಧ ಹೋರಾಡಲು ಸೂಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾನೂನು ರಕ್ಷಣೆ - ದೇಶ ಪ್ರಗತಿಯಲ್ಲಿ ಕೈಜೋಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞಾವಿಧಿಯನ್ನು ಕಾಲೇಜಿನ ಅಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿಗೆ ಬೋಧಿಸುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ವಿಠ್ಠಲ ನಾಯಕ್, ಐಕ್ಯೂಎಸಿ ಸಂಯೋಜಕ ಮೆಲ್ವಿನ್ ಕ್ಯಾಸ್ಟಲಿನೊ, ಅಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು.
29 Oct 2021, 04:36 PM
Category: Kaup
Tags: