ಕ್ರಿಮಿನಲ್ ಪ್ರಕರಣದ ಆರೋಪಿ ತಪ್ಪಿಸಿಕೊಳ್ಳಲು ಯತ್ನ ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ನ್ಯಾಯಾಂಗ ಬಂಧನ
Thumbnail
ಮೂಡಬಿದ್ರಿ : ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದು, ತಲೆಮರೆಸಿಕೊಂಡಿದ್ದ ಮೂಡಬಿದ್ರೆ ಪೊಲೀಸ್ ಠಾಣೆ ಸರಹದ್ದಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46 ವರ್ಷ) ಎಂಬಾತನನ್ನು ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನೊಂದಿಗೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾಧ್ಯತೆಗಳು ಇರುವ ಬಗ್ಗೆ ಮಾಹಿತಿ ಇದ್ದ ಮೇರೆಗೆ ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತರುವ ಸಲುವಾಗಿ ಇಬ್ಬರು ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನೇಮಿಸಿ ಕಳುಹಿಸಿ ಕೊಡಲಾಗಿತ್ತು. ಸಿಬ್ಬಂದಿಗಳು ಆರೋಪಿಯ ಮನೆಯ ಬಳಿ ಹೋದಾಗ ಸಮವಸ್ತ್ರದಲ್ಲಿದ್ದ ಸಿಬ್ಬಂದಿಗಳನ್ನು ನೋಡಿ ಆತನು ಓಡಿಹೋಗಲು ಪ್ರಯತ್ನ ಪಟ್ಟಿದ್ದು ಆಗ ಆತನನ್ನು ಹಿಡಿಯಲು ಹೋದಾಗ ಆರೋಪಿಯು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಪಿಸಿ 617 ರವರನ್ನು ಜೋರಾಗಿ ಕೈಯಿಂದ ತಳ್ಳಿ ನೆಲಕ್ಕೆ ಬೀಳಿಸಿ ನೋವುಂಟು ಮಾಡಿದ್ದ, ನಂತರ ಸಿಬ್ಬಂದಿಗಳು ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಕರೆತಂದಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆತನ ಮೇಲೆ ಪ್ರಕರಣವನ್ನು ದಾಖಲಿಸಿ ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
31 Oct 2021, 10:53 PM
Category: Kaup
Tags: