ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಒಂದು ದಿನದ ಪೈತಾನ್ ಪ್ರೋಗ್ರಾಮಿಂಗ್ ಕಾರ್ಯಗಾರ
ಶಿರ್ವ: ಇಂದು ಆಧುನಿಕ ತಂತ್ರಜ್ಞಾನದ ಅಭಿವೃದ್ಧಿಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಕಂಪ್ಯೂಟರ್ ತಂತ್ರಾಂಶವನ್ನು ವಿನ್ಯಾಸಗೊಳಿಸಿ ವಿವಿಧ ಅಪ್ಲಿಕೇಶನ್ಗಳನ್ನು ರೂಪಿಸುವಲ್ಲಿ ಪೈತನ್ ಪ್ರೋಗ್ರಾಮ್ ಒಂದು ವಿಶಿಷ್ಟತೆಯನ್ನು ಹೊಂದಿದೆ . ಸ್ಮಾರ್ಟ್ ಫೋನ್ ಅಂತ ಸಾಧನೆಗಳನ್ನು ಪ್ರತಿಯೊಬ್ಬರು ಸುಲಭವಾಗಿ ಸದ್ಬಳಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆ ಮಾಡಲು ಇಂತಹ ತಾಂತ್ರಿಕತೆ ಅಗತ್ಯವಾಗಿದೆ ಎಂದು ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ|ನಾಗರಾಜ್ ಭಟ್ ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್,ಪರಸ್ಪರ ಒಡಂಬಡಿಕೆಯ ಅನ್ವಯ ಕಾಲೇಜಿನ ದೃಶ್ಯ-ಶ್ರಾವ್ಯ ಕೊಠಡಿಯಲ್ಲಿ ಏರ್ಪಡಿಸಿದ ಒಂದು ದಿನದ ಪೈತಾನ್ ಪ್ರೋಗ್ರಾಮಿಂಗ್ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಕಾರ್ಯಗಾರದಲ್ಲಿ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ಶರತ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿಯನ್ನು ನೀಡಿದರು.
ಇತ್ತೀಚಿನ ಮಾನವ ರೋಬೊ ರೂಪಿಸುವಲ್ಲಿ ಪೈತಾನ್ ಪ್ರೋಗ್ರಾಮಿಂಗ್ ಗಳನ್ನು ವಿಶಿಷ್ಟ ರೂಪದಲ್ಲಿ ಅಳವಡಿಕೆ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಕಂಪ್ಯೂಟರ್ ವಿದ್ಯಾರ್ಥಿಗಳು ಇಂತಹ ಜ್ಞಾನವನ್ನು ಕಲಿಯುವ ಮೂಲಕ ಉದ್ಯೋಗ ಕ್ಷೇತ್ರವನ್ನು , ಬದಲಾಗುತ್ತಿರುವ ತಂತ್ರಾಂಶವನ್ನು ಅರ್ಥಮಾಡಿಕೊಳ್ಳುವುದು ಇಂದು ಅತ್ಯಗತ್ಯವಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು.
ಡೇಟಾ ಸೈನ್ಸ್ ,ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೊದಲಾದ ಆಧುನಿಕ ತಂತ್ರಾಂಶವನ್ನು ರೂಪಿಸಲು ಸೈಂಟಿಸ್ಟ್ ಗಳು ಹಾಗೂ ಸಾಫ್ಟ್ ವೇರ್ ಇಂಜಿನಿಯರ್ ಗಳು ಹೆಚ್ಚಾಗಿ ಕಳೆದ ಎರಡು ದಶಕಗಳಲ್ಲಿ ಪೈಥಾನ್ ವಿಕಸನಗೊಂಡಂತೆ ಅಳವಡಿಕೆಯ ಜೊತೆಗೆ ಬಳಕೆಯ ಪ್ರಕರಣಗಳು ಬೆಳೆದಿವೆ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಶ್ರೀ ಲೆಫ್ಟಿನೆಂಟ್ ಪ್ರವೀಣ್ ಕುಮಾರ್ ಅವರು ಮಾಹಿತಿ ನೀಡಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಸುಷ್ಮಾ, ದಿವ್ಯಶ್ರೀ ,ಬಿಸಿಎ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಸ್ಎಂವಿಐಟಿಎಂ ವಿದ್ಯಾರ್ಥಿಗಳಾದ ವೈಷ್ಣವಿ, ವಿಕ್ರಮ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಿತ್ ಶೆಟ್ಟಿ ಹಾಗೂ ವಿಧಾತ ಶೆಟ್ಟಿ ಸಹಕರಿಸಿದರು.ಕು. ಶ್ರಾವ್ಯ ಮತ್ತು ಬಳಗ ಪ್ರಾರ್ಥಿಸಿ,ಕು. ಮಾನಸಿ ಸಾಲಿಯಾನ್ ವಂದಿಸಿದರು. ಕು. ಪ್ರಿಯಾಂಕ ಸ್ವಾಗತಿಸಿ, ಕು. ಸುರೇಖಾ ಕಾರ್ಯಕ್ರಮ ನಿರೂಪಿಸಿದರು.
