ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ನೂತನ ಉಡುಪಿ ಶಾಖಾ ಮಠದ ಉದ್ಘಾಟನೆ, ಪ್ರವೇಶ ಮತ್ತು ಸ್ವಾಮೀಜಿಯವರ ಮೊಕ್ಕಾಂ ಕಾರ್ಯಕ್ರಮ
Thumbnail
ಉಡುಪಿ : ಆತ್ರಾಡಿಯಲ್ಲಿ ಇಂದು ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ಕೈವಲ್ಯಪುರ, ಪೋಂಡಾ, ಗೋವಾ ಇದರ ನೂತನ ಉಡುಪಿ ಶಾಖಾ ಮಠದ ಉದ್ಘಾಟನೆ ಹಾಗೂ ಸ್ವಾಮೀಜಿಯವರ ಮೊಕ್ಕಾಂ ಕಾರ್ಯಕ್ರಮ ಜರಗಿತು. ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ, ಕೈವಲ್ಯಪುರ, ಪೋಂಡಾ, ಗೋವಾದ ಪರಮಪೂಜ್ಯ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಮಾಜಿ ಸಚಿವರುಗಳಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೂಪಾ ಶೆಟ್ಟಿ, ಆತ್ರಾಡಿ ನೂತನ ಶಾಖಾ ಮಠದ ಅಧ್ಯಕ್ಷರಾದ ಸಂತೋಷ್ ವಾಗ್ಳೆ, ಉಜ್ವಲ್ ಡೆವಲಪರ್ಸ್ ಉಡುಪಿಯ ಪುರುಶೋತ್ತಮ ಶೆಟ್ಟಿ, ಎಣ್ಣೆಹೊಳೆ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಶೋಕ್ ನಾಯಕ್, ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮೇಶ್ ಸಾಲ್ವಂಕಾರ್, ಮೊಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಲ್ಚಾರು ರಾಮಚಂದ್ರ ನಾಯಕ್, ಬೆಂಗಳೂರು, ಟೆಕ್ಸಾಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಮಾನಂದ ನಾಯಕ್, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆ, ಪಳ್ಳಿ, ಅಡಪಾಡಿ, ಶ್ರೀ ಉಮಾಮಹೇಶ್ವರಿ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಪುಂಡಲೀಕ ನಾಯಕ್, ಆತ್ರಾಡಿ, ಭೈರಂಜೆ ಶ್ರೀ ಭವಾನಿ ಶಂಕರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವೇಂದ್ರ ವಾಗ್ಳೆ ಮತ್ತಿತರರು ಉಪಸ್ಥಿತರಿದ್ದರು. ಆರ್.ಎಸ್.ಬಿ ಸಂಘ, ಮಣಿಪಾಲದ ಅಧ್ಯಕ್ಷರಾದ ಗೋಕುಲ್ ದಾಸ್ ನಾಯಕ್ ಸ್ವಾಗತಿಸಿದರು. ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನಿತ್ಯಾನಂದ ನಾಯಕ್ ನರಸಿಂಗೆ ಕಾರ್ಯಕ್ರಮವನ್ನು ನಿರೂಪಿಸಿದರು.
12 Dec 2021, 01:37 PM
Category: Kaup
Tags: