ಇಂದು ತೆರೆಗೆ : ಆರ್‌ಎಸ್‌ಬಿ ಕೊಂಕಣಿ ಭಾಷೆಯಲ್ಲಿ ಪ್ರಪ್ರಥಮವಾಗಿ ನಿರ್ಮಾಣಗೊಂಡ ಚಲನಚಿತ್ರ ಅಮ್ಚೆ ಸಂಸಾರ್ ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ
Thumbnail
ಮಂಗಳೂರು: ಆರ್‌ಎಸ್‌ಬಿ ಕೊಂಕಣಿ ಭಾಷೆಯಲ್ಲಿ ಪ್ರಪ್ರಥಮ ಬಾರಿಗೆ ನಿರ್ಮಾಣಗೊಂಡ ಚಲನಚಿತ್ರ ಅಮ್ಚೆ ಸಂಸಾರ್‌ ಇಂದು ಅಪರಾಹ್ನ 3 ಗಂಟೆಗೆ ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ತೆರೆಕಾಣಲಿದೆ. ಪ್ರದರ್ಶನ ಕಾರ್ಯಕ್ರಮವನ್ನು ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ನಿವೃತ್ತ ಜನರಲ್ ಮೆನೇಜರ್ ಎನ್.ಉಪೇಂದ್ರ ಉದ್ಘಾಟಿಸಲಿದ್ದು, ಮಂಗಳೂರು ಆರ್‌.ಎಸ್‌.ಬಿ. ಸಂಘದ ಅಧ್ಯಕ್ಷ ಆರ್‌.ಎಂ.ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಚಿತ್ರಕ್ಕೆ ಯು ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ನಿರ್ದೇಶನವನ್ನು ಸಂದೀಪ್ ಕಾಮತ್ ಅಜೆಕಾರು ಮಾಡಿದ್ದು, ಭುವನೇಶ್ ಪ್ರಭು ಹಿರೇಬೆಟ್ಟು ಸಿನೇಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತ ಪುಂಡಲೀಕ ಮರಾಠೆ ಮಾಹಿತಿ ನೀಡಿದರು. ಈ ಸಂದರ್ಭ ಚಿತ್ರ ತಂಡದ ಸಂದೀಪ್‌ ಕಾಮತ್ ಅಜೆಕಾರು, ಭುವನೇಶ್ ಪ್ರಭು ಹಿರೇಬೆಟ್ಟು, ನಟ ರೋಹನ್ ನಾಯಕ್ ಹಾಗೂ ಮಂಗಳೂರು ಆರ್‌ಎಸ್‌ಬಿ ಸಂಘದ ಅಧ್ಯಕ್ಷ ಆರ್‌.ಎಂ.ಪ್ರಭು ಉಪಸ್ಥಿತರಿದ್ದರು.
19 Dec 2021, 09:20 AM
Category: Kaup
Tags: