ಕರ್ನಾಟಕ ಬಂದ್ ಗೆ ಸಹಕರಿಸಲು ರಿಕ್ಷಾ ಚಾಲಕರ ಸಂಘ, ರಿಕ್ಷಾ ಚಾಲಕರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಮನವಿ
Thumbnail
ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ಬೆಳಗಾವಿಯಲ್ಲಿ ಎಮ್ ಇಎಸ್ ಸಂಘಟನೆ ಕನ್ನಡ ಬಾವುಟವನ್ನು ಸುಟ್ಟು ಮತ್ತು ಬೆಂಗಳೂರಿನ ಶಿವಾಜಿನಗರದಲ್ಲಿ ಶಿವಾಜಿ ಪ್ರತಿಮೆಯನ್ನು ಭಗ್ನಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಡಿಸೆಂಬರ್ 31ರಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕವು ಕರ್ನಾಟಕ ಬಂದ್ ಗೆ ಕರೆನೀಡಿದ್ದು ಈ ಪ್ರತಿಭಟನೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ರಿಕ್ಷಾ ಚಾಲಕರ ಸಂಘಕ್ಕೆ ಮನವಿ ಮಾಡಿದ್ದಾರೆ. ನಮ್ಮ ನೆಲ, ಜಲ ಸಂಸ್ಕೃತಿಯನ್ನು ವಿರೋಧಿಸುವವರ ವಿರುದ್ಧವಾಗಿ ಪ್ರತಿಭಟನೆಯನ್ನು ನಡೆಸುವ ನಿಟ್ಟಿನಲ್ಲಿ ರಿಕ್ಷಾ ಚಾಲಕರ ಸಂಘದಿಂದ ಪ್ರತಿ ಒಬ್ಬರು ಚಾಲಕರು ನಮ್ಮ ಜೊತೆ ಕರ್ನಾಟಕ ಬಂದ್ ಗೆ ಸಂಪೂರ್ಣ ಕೈ ಜೋಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಸಂತೋಷ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
29 Dec 2021, 08:42 PM
Category: Kaup
Tags: