ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ವಿಶೇಷ ಭಜನಾ ಕಾರ್ಯಕ್ರಮ
Thumbnail
ಶಿರ್ವ : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ಆವರಣದಲ್ಲಿರುವ ಭವ್ಯ ಏಕಶಿಲಾ ಪರಶುರಾಮ ವಿಗ್ರಹವನ್ನೊಳಗೊಂಡ ಪರಶುರಾಮೇಶ್ವರ ದೇವಸ್ಥಾನದಲ್ಲಿ ನಾಗೇಶ್ವರ ಭಜನಾ ಮಂಡಳಿ, ಪಡುಬಿದ್ರಿ - ಮೂಲ್ಕಿ ವಲಯ ಇವರಿಂದ ಡಿಸೆಂಬರ್ 31 ರಂದು ವಿಶೇಷ ಭಜನಾ ಕಾರ್ಯಕ್ರಮವು ಜರುಗಿತು. ಭಜನಾ ಮಂಡಳಿಯ ನೇತೃತ್ವವನ್ನು ಶ್ರೀ ಚಂದ್ರಹಾಸ್ ವಹಿಸಿದ್ದರು. ಎಳೆಯ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿ ಸಂಸ್ಕಾರವಂತರನ್ನಾಗಿ ಮಾಡುವ ಕೆಲಸ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ತರುವಾಯ ಮಾತನಾಡಿದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ ಮಾತನಾಡಿ, ಅಕ್ಷರ ಕಲಿಸುವ ವಿದ್ಯಾಲಯ ಹಾಗೂ ದೇವರ ಸಾನಿಧ್ಯವಿರುವ ದೇವಾಲಯ - ಇವೆರಡೂ ಒಟ್ಟಿಗೆ ಇರುವ ವಿಶೇಷ ಕ್ಷೇತ್ರ ಈ ಪರಶುರಾಮೇಶ್ವರ ಕ್ಷೇತ್ರ ಎಂದು ಬಣ್ಣಿಸಿದರು. ಭಜನೆಗಳು ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿ ಸೌಹಾರ್ದತೆ, ಸಹಬಾಳ್ವೆ ಮತ್ತು ಉದಾರತೆಯ ಸದ್ಗುಣಗಳನ್ನು ಬೆಳೆಸುತ್ತವೆ ಎಂದರು. ಪ್ರಿನ್ಸಿಪಾಲ್ ಗುರುದತ್ತ ಸೋಮಯಾಜಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Additional image Additional image
31 Dec 2021, 06:25 PM
Category: Kaup
Tags: