ಚಾಲಕನ ಅಜಾಗರೂಕತೆಯಿಂದ ಮನೆಯ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಗೆ ಪಿಕ್ ಅಪ್ ವಾಹನ ತಾಗಿ ಸಾವು
ಮಂಗಳೂರು : ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲನಿ ಎಂಬಲ್ಲಿ ಕೊರಗಪ್ಪ (85) ರವರು ಮನೆಯ ಅಂಗಳದಲ್ಲಿದ್ದ ಸಮಯ ಟೈಲ್ಸ್ ತುಂಬಿಕೊಂಡು ವಾಹನವನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲಕ ಮೋಹನ್ ರವರು ಹಿಂದಕ್ಕೆ ತೆಗೆಯುವ ಸಮಯದಲ್ಲಿ, ವಾಹನದ ಹಿಂದುಗಡೆ ನಿಂತಿದ್ದ ಕೊರಗಪ್ಪನವರ ತಲೆಯ ಭಾಗಕ್ಕೆ ತಾಗಿ ಬಿದ್ದು ಗಾಯಗೊಂಡಿದ್ದರು.
ಚಿಕಿತ್ಸೆಗಾಗಿ ಜಿಲ್ಲಾ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟ ಬಗ್ಗೆ ತಿಳಿಸಿರುತ್ತಾರೆ.
ಈ ಬಗ್ಗೆ ಪಿಕ್ ಅಪ್ ವಾಹನದ ಚಾಲಕ ಮೋಹನ್ ರವರ ವಿರುದ್ದ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
