ಸಮಾಜ್ಯೋದಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ತಪ್ಪು: ಯೋಗೀಶ್ ಶೆಟ್ಟಿ
Thumbnail
ಕಾಪು : ಸಮಾಜ್ಯೋದಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು ಜಾತಿ ಅಸಮಾನತೆ ನೀತಿ, ಒಂದೇ ಜಾತಿ ಒಂದೇ ಮತ ಒಬ್ಬರೇ ದೇವರು ಎಂದು ಸಾರಿ, ಜನರಿಗೆ ಆತ್ಮ ಬಲವನ್ನು ಮೂಡಿಸಿದವರು ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ತಪ್ಪು ಎಂದು ಉಡುಪಿ ಜಿಲ್ಲಾ ಜನತಾದಳ ಪಕ್ಷವು ಖಂಡಿಸಿದೆ. ಆಯ್ಕೆ ಸಮಿತಿಯಲ್ಲಿ ಸಮಾನ ಮನಸ್ಕರು ಇಲ್ಲದಿರುವುದು ಕಾರಣ ಕೇಂದ್ರ ಸರಕಾರದ ನಿರ್ಧಾರ ಸರಿಯಲ್ಲ,ಕೂಡಲೇ ಶ್ರೀ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪೆರೇಡ್ ಗೆ ಸಮಿತಿಯು ಅಂಗೀಕಾರ ಮಾಡಬೇಕು. ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಪತ್ರಿಕಾ ಪ್ರಕಟನೆಯ ಮೂಲಕ ಆಗ್ರಹಿಸಿದ್ದಾರೆ.
16 Jan 2022, 12:02 PM
Category: Kaup
Tags: