ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ
Thumbnail
ಉಡುಪಿ : ಜಿಲ್ಲೆಯ ಹಲವಾರು ವರ್ಷಗಳ ವರ್ಷಗಳ ಇತಿಹಾಸವಿರುವ ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಬನ್ನಂಜೆ ಕಲ್ಕುಡ ಮನೆ , ಉಡುಪಿ ಇಲ್ಲಿ ಫೆಬ್ರವರಿ 8, ಮಂಗಳವಾರದಂದು ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ಜರಗಲಿದೆ. ಮಧ್ಯಾಹ್ನ 12 ಗಂಟೆಗೆ ದರ್ಶನ ಸೇವೆ ಹಾಗೂ 12.30ರಿಂದ ಮಹಾಅನ್ನಸಂತರ್ಪಣೆ ಹಾಗೂ ಸಂಜೆ 6 ಗಂಟೆಯಿಂದ ಭಜನೆ ಕಾರ್ಯಕ್ರಮ ಹಾಗೂ 7 ಗಂಟೆಯಿಂದ ದೈವ ದರ್ಶನ ಹಾಗೂ ಹೂವಿನ ಪೂಜೆ ನಡೆಯಲಿದೆ. ನಮ್ಮ ಉಡುಪಿ ಟಿವಿ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6ರಿಂದ ನೆಮೋತ್ಸವದ ನೇರಪ್ರಸಾರವನ್ನು ವೀಕ್ಷಿಸಬಹುದು ಎಂದು ವಿಠಲ್ ಶೆಟ್ಟಿ ಹಾಗೂ ಕುಟುಂಬಸ್ಥರು ಬನ್ನಂಜೆ ಕಲ್ಕುಡ ಮನೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
05 Feb 2022, 02:50 PM
Category: Kaup
Tags: