ಬಸ್ಸು ನಿಲ್ದಾಣದಲ್ಲಿ ಅನಾರೋಗ್ಯದಿಂದ ಮಲಗಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ
ಶಿರ್ವ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಬಿ.ಸಿ ರೋಡು ಲಯನ್ಸ್ ಬಸ್ಸು ನಿಲ್ದಾಣದಲ್ಲಿ ಅನಾರೋಗ್ಯದಿಂದ ಮಲಗಿದ್ದ 28 ವರುಷದ ರೇಖಾ ಎಂಬ ಮಹಿಳೆಯನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಮುಂಜಾನೆಯಿಂದ ಬಸ್ಸುನಿಲ್ದಾಣದಲ್ಲಿ ಮಹಿಳೆಯೊರ್ವರು ಮಲಗಿರುವ ಮಾಹಿತಿ ದೊರೆತ ಹಿನ್ನಲೆಯಲ್ಲಿ ಹೋಗಿ ಮಹಿಳೆಯನ್ನು ವಿಚಾರಿಸಿದಾಗ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನು ತಿಳಿದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅವರ ಸಲಹೆ ಪಡೆದು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯೆ ವೈಲೆಟ್ ಕಸ್ತಲಿನೊ, ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಉಮೇಶ್ ರಾವ್ ಇವರ ಸಹಕಾರದಿಂದ ನಾಗರಿಕ ಸಮಿತಿಯ ಅಂಬುಲೆನ್ಸ್ ವಾಹನದಲ್ಲಿ ಉಡುಪಿ ಜಿಲ್ಲಾಸ್ಷತ್ರೆಯಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆಯನ್ನು ಕೊಡಿಸಿದ್ದಾರೆ.
ಮೂಲತ: ದಾವಣಗೆರೆಯವಳು ಎಂದು ಮಾಹಿತಿ ನೀಡಿದ್ದು ತನ್ನ ಗಂಡ ತನ್ನನ್ನು ಎಲ್ಲೊ ಬಿಟ್ಟು , ತನ್ನ ಮೊಬೈಲ್ ಸಹಿತ ಹೋಗಿರುತ್ತಾನೆ, ತಾನು ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದೆ ಎಂಬ ಮಾಹಿತಿ ನೀಡಿದ್ದಾಳೆ.
