ಕಟಪಾಡಿ : ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಪ್ರತಿಭೆಗಳಿಗೆ ಸನ್ಮಾನ
ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯಿತಿಯ ಮಕ್ಕಳ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷರಾದ ಇಂದಿರಾ ಎಸ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.
ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರ ಸೇವನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಅಪೌಷ್ಟಿಕತೆ ನಿವಾರಣೆಗೆ ಕ್ರಮ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪ್ರೇಮಾನಂದ ಕಲ್ಮಾಡಿ ಯವರು ಆಗಮಿಸಿದ್ದರು. ಮಕ್ಕಳ ರಕ್ಷಣಾ ಘಟಕದ ಕಪಿಲ, ಮಕ್ಕಳ ಸಹಾಯವಾಣಿಯಿಂದ ತ್ರಿವೇಣಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕಿ ಪ್ರಭಾಕಲಾ, ಮಕ್ಕಳ ನಾಯಕ ರಾದ ಸಮೀಕ್ಷಾ, ಗಣ್ಯ, ಅಂಜಲಿ, ಕವನ, ರೋಷನಿ ಹಾಗೂ ಪಂಚಾಯತ್ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ : ಸಭೆಯಲ್ಲಿ ಹಲವು ಪ್ರಶಸ್ತಿ ಗಳನ್ನು ಪಡೆದ ಬಾಲ ಪ್ರತಿಭೆಗಳಾದ ಕೆ.ಪ್ರಥಮ ಕಾಮತ್ ( ಜಾದೂ, ಕ್ಲೇ ಮಾಡೆಲಿಂಗ್), ಯಶಸ್ ಪಿ. ಸುವರ್ಣ (ಕೊಳಲು ವಾದನ), ಮಾಣಿಕ್ ಸುವರ್ಣ ( ಕರಾಟೆ) ಹಾಗೂ ಎಸ್. ಎಸ್. ಎಲ್. ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಕುಮಾರಿ ಅನುಶ್ರೀ ಇವರನ್ನು ಸನ್ಮಾನಿಸ ಲಾಯಿತು. ಸದಸ್ಯರಾದ ಪ್ರಭಾ ಶೆಟ್ಟಿ, ಫ್ಲಾವಿಯಾ, ಶಾಲಿನಿ, ಆಗ್ನೇಸ್ ರವರು ಸನ್ಮಾನ ಪತ್ರ ವಾಚಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಅಬುಬಕರ್ ಎ. ಆರ್. ಸಾಂದರ್ಭಿಕವಾಗಿ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು. ಪಂಚಾಯತ್ ಸದಸ್ಯರಾದ ಫ್ಲಾವಿಯಾ ಮಿನೇಜಸ್ ಸ್ವಾಗತಿಸಿದರು. ಪಂಚಾಯಿತಿ ಕಾರ್ಯದರ್ಶಿ ವಸಂತಿಯವರು ವಂದಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು.
