ಪಡುಬಿದ್ರಿ : ಈಜಾಡಲು ಸಮುದ್ರಕ್ಕಿಳಿದ ವಿದ್ಯಾರ್ಥಿ ನೀರು ಪಾಲು, ಇಬ್ಬರ ರಕ್ಷಣೆ
ಪಡುಬಿದ್ರಿ : ಇಲ್ಲಿನ ಬೀಚ್ನಲ್ಲಿ ಈಜಾಡಲು ಹೋದ ಮೂವರು ಯುವಕರಲ್ಲಿ ಓರ್ವ ವಿದ್ಯಾರ್ಥಿ ನೀರುಪಾಲದ ಘಟನೆ ಶನಿವಾರ ಸಂಜೆ ಕಾಡಿಪಟ್ನ ಎಂಬಲ್ಲಿ ನಡೆದಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೂವರು ಯುವಕರು ಸ್ನೇಹಿತರಾಗಿದ್ದು, ಸಂಜೆ ಸಮುದ್ರಕ್ಕೆ ಇಳಿದ್ದಿದ್ದು, ಸಮುದ್ರದ ಬೃಹತ್ ಅಲೆಗೆ ಸಿಕ್ಕಿ ಮೂವರೂ ಕೂಡ ನೀರುಪಾಲಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ಮೀನುಗಾರರು ಇಬ್ಬರನ್ನು ರಕ್ಷಿಸಿದ್ದಾರೆ.
ನೀರು ಪಾಲದ ಯುವಕ ಧನುಷ್ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಬಳಿಯ ನಿವಾಸಿಯಾಗಿದ್ದು, ಈತ ನಿಟ್ಟೆ ಕಾಲೇಜಿನ ಡಿಗ್ರಿ ವಿದ್ಯಾರ್ಥಿ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತತ ಹಡುಕಾಟದ ತರುವಾಯ ಇಂದು ಸಂಜೆ ವಿದ್ಯಾರ್ಥಿಯ ಮೃತದೇಹ ದೊರೆತಿದ್ದು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.
