ರಶ್ಮಿ ಸನಿಲ್ ರಿಗೆ ಚಂದನ ಸಾಹಿತ್ಯ ಜ್ಯೋತಿ ರಾಜ್ಯ ಪ್ರಶಸ್ತಿ
Thumbnail
ಮಂಗಳೂರು : ಲೇಖಕಿ, ಬರಹಗಾರ್ತಿ, ನೃತ್ಯಪಟು, ನಿರೂಪಕಿ ರಶ್ಮಿ ಸನಿಲ್ ಇವರ ಗಣನೀಯ ಸೇವೆಯನ್ನು ಗುರುತಿಸಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ ಫೆಬ್ರವರಿ 20ರಂದು ಚಂದನ ಸಾಹಿತ್ಯ ಜ್ಯೋತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವರು. ಯುವವಾಹಿನಿ, ರೋಟರಿ, ಮಹಿಳಾ ಮಂಡಳಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್, ಕಥಾಬಿಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ಪುತ್ತೂರು ಸಾಹಿತ್ಯ ವೇದಿಕೆ, ಚಂದನ ಸಾಹಿತ್ಯ ವೇದಿಕೆ ಮೊದಲಾದ ಪ್ರತಿಷ್ಠಿತ ಸಂಸ್ಥೆಗಳ ಸದಸ್ಯೆ ಕೂಡ ಆಗಿದ್ದಾರೆ. ಈ ಸಂದರ್ಭದಲ್ಲಿ ಭೀಮರಾವ್ ವಾಷ್ಟರ್ , ನಾರಾಯಣ ಕುಕ್ಕುವಳ್ಳಿ , ವೈಲೇಶ್ ಪಿ. ಕೊಡಗು, ಹಾಜಿ ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು.
24 Feb 2022, 05:24 PM
Category: Kaup
Tags: