ಮಂಗಳೂರು : ಯುವತಿಯರಿಬ್ಬರು ಸಮುದ್ರ ಪಾಲು
Thumbnail
ಸುರತ್ಕಲ್ : ಇಲ್ಲಿಗೆ ಸಮೀಪದ ಎನ್ಐಟಿಕೆ ಬೀಚ್ ನಲ್ಲಿ ಬೆಂಗಳೂರು ಮೂಲದ ಯುವತಿಯರಿಬ್ಬರು ಸಮುದ್ರ ಪಾಲಾದ ಘಟನೆ ಏಪ್ರಿಲ್ 10ರಂದು ನಡೆದಿದೆ. ಮೃತರಾದವರನ್ನು ಬೆಂಗಳೂರಿನ ಶಕ್ತಿ ನಗರದ ವೈಷ್ಣವಿ (21) ಎಂದು ಗುರುತಿಸಲಾಗಿದ್ದು, ಈಕೆ ಎಜೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿಇ ವಿದ್ಯಾರ್ಥಿ. ಮತ್ತೋರ್ವಳು ಬೆಂಗಳೂರಿನ ನಿವಾಸಿ ತ್ರಿಶಾ (15) 9ನೇ ತರಗತಿ ತೇರ್ಗಡೆಯಾಗಿದ್ದು, ಈಗ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದಾಳೆ.
10 Apr 2022, 04:56 PM
Category: Kaup
Tags: