ಕಳತ್ತೂರು ಆರೋಗ್ಯ ಉಪ ಕೇಂದ್ರಕ್ಕೆ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆ
Thumbnail
ಕಾಪು : ಕಾಪು ಪರಿಸರದ ಸಮಾಜ ಸೇವೆಯಲ್ಲಿ ರಾಷ್ಟೀಯ ಪ್ರಶಸ್ತಿ ಪುರಸ್ಕೃತರುಗಳಾದ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಜನಸಂಪ್ರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು,ಉಭಯ ವೇದಿಕೆ ಸಂಚಾಲಕರುಗಳಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಇವರು ವೈಯಕ್ತಿಕವಾಗಿ ಕಳತ್ತೂರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಉಪ ಕೇಂದ್ರ ಕಳತ್ತೂರುಗೆ 1000 ಲೀಟರ್ ನ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆಯಾಗಿ ಹಸ್ತಾಂತರಿಸಿದರು.) ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಸುಧಾವತಿ ಮಾತನಾಡಿ ನಮ್ಮ ಆರೋಗ್ಯ ಕೇಂದ್ರಕ್ಕೆ ನೀರಿನ ಟ್ಯಾಂಕ್ ಅಗತ್ಯವಿದ್ದು ಕೊಡುಗೆ ನೀಡಿದ ಮೂವರು ರಾಷ್ಟೀಯ ಪ್ರಶಸ್ತಿ ಪಡೆದ ಸಮಾಜ ಸೇವಕರಿಗೆ ಕೃತಜ್ಞತೆ ಸಲ್ಲಿಸಿದರು.
17 May 2022, 05:08 PM
Category: Kaup
Tags: