ಕಾಪು ಶ್ರೀ ಹೊಸ ಮಾರಿಗುಡಿಗೆ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಭೇಟಿ
Thumbnail
ಕಾಪು : ದೇಶ ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿರುವ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಪಡುಬಿದ್ರಿ ಅವರು ಮೇ. 20ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ, ತನ್ನ ಹುಟ್ಟೂರಿನಲ್ಲಿ ಆಗುತ್ತಿರುವ ಇಂತಹ ಪುಣ್ಯಕಾರ್ಯಕ್ಕೆ ಮುಂದಿನ ದಿನಗಳಲ್ಲಿ ತಾನು ಕೂಡಾ ಕೈಜೋಡಿಸುವುದಾಗಿ ಭರವಸೆಯನ್ನಿತ್ತರು. ದೇವಳದ ಸಿಬ್ಬಂದಿ ಸಂತೋಷ್ ಶೆಟ್ಟಿಯವರು ಶ್ರೀ ದೇವಿಯ ಸನ್ನಿದಾನದಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದವನ್ನು ನೀಡಿದರು.
21 May 2022, 05:21 PM
Category: Kaup
Tags: