ಮಣಿಪಾಲ : ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ
ಮಣಿಪಾಲ : ಮನೆಯ ಮುಂದಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಮನೆಯಂಗಳದಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು, ತಲೆಗೆ ತೀವ್ರ ತರಹದ ಗಾಯವಾಗಿ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.
ತಲೆಗೆ ತೀವ್ರವಾದ ಗಾಯವಾದ ಕೆ .ಎಸ್. ರಮೇಶ್ (62) ರವರನ್ನು ಕೂಡಲೇ ಚಿಕಿತ್ಸೆಗಾಗಿ ಉಡುಪಿ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಲ್ಲಿ ತೋರಿಸಲಾಗಿದ್ದು, ವೈದ್ಯರು ಪರೀಕ್ಷಿಸಿ ಕೆ.ಎಸ್.ರಮೇಶ್ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
